ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೋನಿ ಭವಿಷ್ಯದ ಕುರಿತು ಆಯ್ಕೆಗಾರರ ಅಭಿಪ್ರಾಯ ತಿಳಿಯುವೆ: ಗಂಗೂಲಿ

Last Updated 16 ಅಕ್ಟೋಬರ್ 2019, 19:58 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಭಾರತ ಕ್ರಿಕೆಟ್ ಅನುಭವಿ ಆಟಗಾರ ಮಹೇಂದ್ರಸಿಂಗ್ ಧೋನಿ ಅವರ ಭವಿಷ್ಯದ ಕುರಿತು ಕ್ರಿಕೆಟ್ ಆಯ್ಕೆ ಸಮಿತಿಯ ಸದಸ್ಯರು ಏನು ಹೇಳುತ್ತಾರೆಂದು ತಿಳಿದುಕೊಳ್ಳುತ್ತೇನೆ. ನಂತರ ನನ್ನ ಅಭಿಪ್ರಾಯ ತಿಳಿಸುತ್ತೇನೆ’ ಎಂದು ಬಿಸಿಸಿಐ ನಿಯೋಜಿತ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

39 ಧೋನಿ ಅವರನ್ನು ಮುಂದಿನ ವರ್ಷದ ಟ್ವೆಂಟಿ 20 ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಸುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಅವರು ನಿವೃತ್ತಿ ಪಡೆಯಬೇಕು ಎಂಬ ಸಲಹೆಗಳೂ ಈಗಾಗಲೇ ಕೆಲವರಿಂದ ಬಂದಿವೆ.

‘ಅಕ್ಟೋಬರ್ 24ರಂದು ಆಯ್ಕೆ ಸಮಿತಿಯೊಂದಿಗಿನ ಸಭೆಯಲ್ಲಿ ಧೋನಿ ಭವಿಷ್ಯದ ಕುರಿತು ತಿಳಿದುಕೊಳ್ಳುತ್ತೇನೆ. ಇದೆಲ್ಲದರ ಜೊತೆಗೆ ಧೋನಿ ಅವರ ಮನದಲ್ಲೇನಿದೆ ಎಂಬುದನ್ನು ತಿಳಿದುಕೊಳ್ಳುವುದು ಸಹ ಮುಖ್ಯ. ಅವರೊಂದಿಗೂ ಚರ್ಚಿಸುತ್ತೇನೆ’ ಎಂದು ಗಂಗೂಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT