2015ರಲ್ಲಿ ಬಿಸಿಸಿಐನಲ್ಲಿ ಆಡಳಿತ ಸುಧಾರಣೆಗೆ ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಆರ್.ಎಂ. ಲೋಧಾ ಕಮಿಟಿಯು ಶಿಫಾರಸುಗಳನ್ನು ನೀಡಿತ್ತು. ಅದರ ಅನ್ವಯ ರಚಿಸಲಾಗಿದ್ದ ನೂತನ ನಿಯಮಾವಳಿಯನ್ನು ಜಾರಿ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಗಂಗೂಲಿ ಹಾಗೂ ಜಯ್ ಶಾ ಅವರನ್ನು ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೂ ಮುನ್ನ ಗಂಗೂಲಿ ಬಂಗಾಳ ಕ್ರಿಕೆಟ್ ಸಂಸ್ಥೆ ಹಾಗೂ ಜಯ್ ಶಾ ಗುಜರಾತ್ ಕ್ರಿಕೆಟ್ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ನಾಲ್ಕು ವರ್ಷಗಳಿಗೂ ಹೆಚ್ಚು ಅವಧಿ ಕಾರ್ಯನಿರ್ವಹಿಸಿದ್ದರು.