<p><strong>ಹರಾರೆ</strong>: ಜುಲೈ6 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗಾಗಿ ಎರಡನೇ ಹಂತದ ಆಟಗಾರರನ್ನು ಒಳಗೊಂಡ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ ಎಂದು ಇಲ್ಲಿನ ಕ್ರಿಕೆಟ್ ಮಂಡಳಿ ಮಂಗಳವಾರ ಪ್ರಕಟಿಸಿದೆ.</p>.<p>ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ಟಿ20 ವಿಶ್ವಕಪ್ ಜೂನ್ 29ರಂದು ಮುಗಿದ ತಕ್ಷಣ ನಡೆಯಲಿರುವ ಈ ಸರಣಿಯಲ್ಲಿ ಭಾರತದ ಪ್ರಮುಖ ಆಟಗಾರರು ಭಾಗವಹಿಸುವ ಸಾಧ್ಯತೆಯಿಲ್ಲ. ಈ ಹಿಂದೆಯೂ, ಈ ದಕ್ಷಿಣ ಆಫ್ರಿಕಾ ರಾಷ್ಟ್ರದ ಪ್ರವಾಸಕ್ಕೆ ಪ್ರಮುಖ ಆಟಗಾರರು ಹೋಗುತ್ತಿರಲಿಲ್ಲ.</p>.<p>ಐದು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಜುಲೈ 6, 7, 10, 13 ಮತ್ತು 14 ರಂದು ನಡೆಯಲಿವೆ.</p>.<p>‘ಭಾರತ ತಂಡ ಐದು ಟಿ20 ಪಂದ್ಯಗಳಿಗಾಗಿ ಜಿಂಬಾಬ್ವೆಯು ಆತಿಥ್ಯ ವಹಿಸಲಿದೆ ಎಂದು ಕ್ರಿಕೆಟ್ (ಝಡ್ಸಿ) ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿವೆ’ ಎಂದು ಝಡ್ಸಿ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ‘ಜಾಗತಿಕ ಕ್ರಿಕೆಟ್ ಸಮುದಾಯಕ್ಕೆ ಕೊಡುಗೆ ನೀಡುವಲ್ಲಿ ಬಿಸಿಸಿಐ ಯಾವಾಗಲೂ ಪ್ರಮುಖ ಪಾತ್ರ ವಹಿಸಿದೆ. ಇದು ಜಿಂಬಾಬ್ವೆಗೆ ಪುನರ್ನಿರ್ಮಾಣದ ಅವಧಿ ಮತ್ತು ಈ ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್ಗೆ ನಮ್ಮ ಬೆಂಬಲ ಅಗತ್ಯವಿದೆ ಎಂಬುದನ್ನು ಅರ್ಥಮಾಡಿಕೊಂಡಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಾರೆ</strong>: ಜುಲೈ6 ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ20 ಸರಣಿಗಾಗಿ ಎರಡನೇ ಹಂತದ ಆಟಗಾರರನ್ನು ಒಳಗೊಂಡ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ ಎಂದು ಇಲ್ಲಿನ ಕ್ರಿಕೆಟ್ ಮಂಡಳಿ ಮಂಗಳವಾರ ಪ್ರಕಟಿಸಿದೆ.</p>.<p>ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ಟಿ20 ವಿಶ್ವಕಪ್ ಜೂನ್ 29ರಂದು ಮುಗಿದ ತಕ್ಷಣ ನಡೆಯಲಿರುವ ಈ ಸರಣಿಯಲ್ಲಿ ಭಾರತದ ಪ್ರಮುಖ ಆಟಗಾರರು ಭಾಗವಹಿಸುವ ಸಾಧ್ಯತೆಯಿಲ್ಲ. ಈ ಹಿಂದೆಯೂ, ಈ ದಕ್ಷಿಣ ಆಫ್ರಿಕಾ ರಾಷ್ಟ್ರದ ಪ್ರವಾಸಕ್ಕೆ ಪ್ರಮುಖ ಆಟಗಾರರು ಹೋಗುತ್ತಿರಲಿಲ್ಲ.</p>.<p>ಐದು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಜುಲೈ 6, 7, 10, 13 ಮತ್ತು 14 ರಂದು ನಡೆಯಲಿವೆ.</p>.<p>‘ಭಾರತ ತಂಡ ಐದು ಟಿ20 ಪಂದ್ಯಗಳಿಗಾಗಿ ಜಿಂಬಾಬ್ವೆಯು ಆತಿಥ್ಯ ವಹಿಸಲಿದೆ ಎಂದು ಕ್ರಿಕೆಟ್ (ಝಡ್ಸಿ) ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿವೆ’ ಎಂದು ಝಡ್ಸಿ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ‘ಜಾಗತಿಕ ಕ್ರಿಕೆಟ್ ಸಮುದಾಯಕ್ಕೆ ಕೊಡುಗೆ ನೀಡುವಲ್ಲಿ ಬಿಸಿಸಿಐ ಯಾವಾಗಲೂ ಪ್ರಮುಖ ಪಾತ್ರ ವಹಿಸಿದೆ. ಇದು ಜಿಂಬಾಬ್ವೆಗೆ ಪುನರ್ನಿರ್ಮಾಣದ ಅವಧಿ ಮತ್ತು ಈ ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್ಗೆ ನಮ್ಮ ಬೆಂಬಲ ಅಗತ್ಯವಿದೆ ಎಂಬುದನ್ನು ಅರ್ಥಮಾಡಿಕೊಂಡಿದ್ದೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>