<p><strong>ಕೋಲ್ಕತ್ತ:</strong> ಟಿ20 ವಿಶ್ವಕಪ್ನ ಸೂಪರ್–8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ವೆಸ್ಟ್ ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಮಾತನಾಡಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ. </p><p>ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದಾಗ, ಬೃಹತ್ ಗುರಿ ನೀಡುವ ಜವಾಬ್ದಾರಿ ಇತ್ತು. ಅದರಂತೆ ವಿಂಡೀಸ್ ಬ್ಯಾಟರ್ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಆದರೆ, ನಾಯಕ ಶಾಯ್ ಹೋಪ್ ಮಾತ್ರ, ನಿಧಾನಗತಿಯ ಬ್ಯಾಟಿಂಗ್ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅಗ್ರಕ್ರಮಾಂಕದಲ್ಲಿ ತಾವು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದು ಸೋಲಿಗೆ ಕಾರಣ ಎಂದಿದ್ದಾರೆ.</p><p>ವಿಂಡೀಸ್ ಪರ ಇನಿಂಗ್ಸ್ ಆರಂಭಿಸಿದ ಶಾಯ್ ಹೋಪ್ ಅವರು 33 ಎಸೆತಗಳಲ್ಲಿ ಕೇವಲ 32 ರನ್ ಗಳಿಸಿದರು. ಇದರಲ್ಲಿ 17 ಡಾಟ್ ಬಾಲ್ಗಳು ಸೇರಿವೆ. ಅವರ ನಿಧಾನಗತಿಯ ಬ್ಯಾಟಿಂಗ್ನಿಂದಾಗಿ ವಿಂಡೀಸ್ ತಂಡವು ಅಂತಿಮ ಗುರಿಯಲ್ಲಿ ಕನಿಷ್ಠ 20 ರನ್ಗಳ ಕೊರತೆ ಅನುಭವಿಸುವಂತಾಯಿತು.</p><p>ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಯ್ ಹೋಪ್ ‘ಹೌದು, ಸೋಲಿನ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಅಗ್ರಕ್ರಮಾಂಕದಲ್ಲಿ ನಾನು ವೇಗವಾಗಿ ಬ್ಯಾಟಿಂಗ್ ಮಾಡಬೇಕಿತ್ತು‘ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡರು.</p><p>‘ದೊಡ್ಡ ವೇದಿಕೆಯಲ್ಲಿ ಬ್ಯಾಟಿಂಗ್ ಮಾಡುವಾಗ ಅನೇಕರು ಕಷ್ಟಪಡುತ್ತಾರೆ. ನನಗೂ ಹಾಗೇ ಆಯಿತು. ನಾನು ಕೆಟ್ಟದಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂದು ಹೇಳಲಾಗುವುದಿಲ್ಲ’ ಎಂದಿದ್ದಾರೆ.</p>.T20 World Cup: ಸಂಜು ಸ್ಯಾಮ್ಸನ್ಗಾಗಿ ನಾನು ನೋವು ಅನುಭವಿಸಿದ್ದೆ ಎಂದ ಕೈ ಸಂಸದ.ವಿರಾಟ್ ಬ್ಯಾಟಿಂಗ್ ನೆನಪಿಸಿದ ಸ್ಯಾಮ್ಸನ್; ಚೇಸಿಂಗ್ನಲ್ಲಿ ಕೊಹ್ಲಿ ದಾಖಲೆ ಬ್ರೇಕ್.<p>‘ಮುಂದುವರೆದು ಮಾತನಾಡಿದ ಅವರು, ಆರಂಭದಲ್ಲಿ ಸೆಟ್ ಆಗಿ, ಮಧ್ಯಮ ಕ್ರಮಾಂಕದಲ್ಲಿ ಸ್ಪಿನ್ನರ್ಗಳ ಮೇಲೆ ದಾಳಿ ಮಾಡುವ ಯೋಜನೆ ಹೊಂದಿದ್ದೆ’ ಎಂದು ಅವರು ತಿಳಿಸಿದರು. ಅದಾಗ್ಯೂ, ಇನ್ನೂ 20 ರನ್ ಹೆಚ್ಚು ಗಳಿಸಿದ್ದರೆ ಗೆಲುವು ಸಾಧಿಸಬಹುದಿತ್ತು ಎಂಬುದನ್ನು ಅವರು ಒಪ್ಪಿಕೊಂಡರು.</p><p>ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್ಗಳಲ್ಲಿ 195 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡವು 19.2 ಓವರ್ಗಳಲ್ಲಿ ಗುರಿ ತಲುಪಿ ಸೆಮಿಫೈನಲ್ ಪ್ರವೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಟಿ20 ವಿಶ್ವಕಪ್ನ ಸೂಪರ್–8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ವೆಸ್ಟ್ ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಮಾತನಾಡಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆಯನ್ನು ತಾವೇ ಹೊತ್ತುಕೊಂಡಿದ್ದಾರೆ. </p><p>ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದಾಗ, ಬೃಹತ್ ಗುರಿ ನೀಡುವ ಜವಾಬ್ದಾರಿ ಇತ್ತು. ಅದರಂತೆ ವಿಂಡೀಸ್ ಬ್ಯಾಟರ್ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಆದರೆ, ನಾಯಕ ಶಾಯ್ ಹೋಪ್ ಮಾತ್ರ, ನಿಧಾನಗತಿಯ ಬ್ಯಾಟಿಂಗ್ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅಗ್ರಕ್ರಮಾಂಕದಲ್ಲಿ ತಾವು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದು ಸೋಲಿಗೆ ಕಾರಣ ಎಂದಿದ್ದಾರೆ.</p><p>ವಿಂಡೀಸ್ ಪರ ಇನಿಂಗ್ಸ್ ಆರಂಭಿಸಿದ ಶಾಯ್ ಹೋಪ್ ಅವರು 33 ಎಸೆತಗಳಲ್ಲಿ ಕೇವಲ 32 ರನ್ ಗಳಿಸಿದರು. ಇದರಲ್ಲಿ 17 ಡಾಟ್ ಬಾಲ್ಗಳು ಸೇರಿವೆ. ಅವರ ನಿಧಾನಗತಿಯ ಬ್ಯಾಟಿಂಗ್ನಿಂದಾಗಿ ವಿಂಡೀಸ್ ತಂಡವು ಅಂತಿಮ ಗುರಿಯಲ್ಲಿ ಕನಿಷ್ಠ 20 ರನ್ಗಳ ಕೊರತೆ ಅನುಭವಿಸುವಂತಾಯಿತು.</p><p>ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಯ್ ಹೋಪ್ ‘ಹೌದು, ಸೋಲಿನ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಅಗ್ರಕ್ರಮಾಂಕದಲ್ಲಿ ನಾನು ವೇಗವಾಗಿ ಬ್ಯಾಟಿಂಗ್ ಮಾಡಬೇಕಿತ್ತು‘ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡರು.</p><p>‘ದೊಡ್ಡ ವೇದಿಕೆಯಲ್ಲಿ ಬ್ಯಾಟಿಂಗ್ ಮಾಡುವಾಗ ಅನೇಕರು ಕಷ್ಟಪಡುತ್ತಾರೆ. ನನಗೂ ಹಾಗೇ ಆಯಿತು. ನಾನು ಕೆಟ್ಟದಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂದು ಹೇಳಲಾಗುವುದಿಲ್ಲ’ ಎಂದಿದ್ದಾರೆ.</p>.T20 World Cup: ಸಂಜು ಸ್ಯಾಮ್ಸನ್ಗಾಗಿ ನಾನು ನೋವು ಅನುಭವಿಸಿದ್ದೆ ಎಂದ ಕೈ ಸಂಸದ.ವಿರಾಟ್ ಬ್ಯಾಟಿಂಗ್ ನೆನಪಿಸಿದ ಸ್ಯಾಮ್ಸನ್; ಚೇಸಿಂಗ್ನಲ್ಲಿ ಕೊಹ್ಲಿ ದಾಖಲೆ ಬ್ರೇಕ್.<p>‘ಮುಂದುವರೆದು ಮಾತನಾಡಿದ ಅವರು, ಆರಂಭದಲ್ಲಿ ಸೆಟ್ ಆಗಿ, ಮಧ್ಯಮ ಕ್ರಮಾಂಕದಲ್ಲಿ ಸ್ಪಿನ್ನರ್ಗಳ ಮೇಲೆ ದಾಳಿ ಮಾಡುವ ಯೋಜನೆ ಹೊಂದಿದ್ದೆ’ ಎಂದು ಅವರು ತಿಳಿಸಿದರು. ಅದಾಗ್ಯೂ, ಇನ್ನೂ 20 ರನ್ ಹೆಚ್ಚು ಗಳಿಸಿದ್ದರೆ ಗೆಲುವು ಸಾಧಿಸಬಹುದಿತ್ತು ಎಂಬುದನ್ನು ಅವರು ಒಪ್ಪಿಕೊಂಡರು.</p><p>ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್ಗಳಲ್ಲಿ 195 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡವು 19.2 ಓವರ್ಗಳಲ್ಲಿ ಗುರಿ ತಲುಪಿ ಸೆಮಿಫೈನಲ್ ಪ್ರವೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>