ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ‘ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಭಿನ್ನಮತೀಯರ ಬಣಕ್ಕೂ ನನಗೂ ಸಂಬಂಧ ಇಲ್ಲ. ಸಚಿವ ಸ್ಥಾನ ಸಿಗದೇ ಇರುವುದರಿಂದ ನನಗೆ ಬೇಸರವಿಲ್ಲ’ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ಗುಂಪುಗಾರಿಕೆ, ಭಿನ್ನಮತೀಯ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಆದರೂ, ಮಾಧ್ಯಮಗಳಲ್ಲಿ ಎಂ.ಬಿ.ಪಾಟೀಲ ನೇತೃತ್ವದ ಭಿನ್ನಮತೀಯ ಶಾಸಕರ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟಗೊಂಡಿರುವುದು ಬೇಸರ ತರಿಸಿದೆ’ ಎಂದರು.