<p><strong>ಕರಾಚಿ: </strong>ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ<strong>(</strong>ಪಿಸಿಬಿ) ಅಧಿಕಾರಿ ಅನುಪಸ್ಥಿತಿಯನ್ನು ಪಾಕ್ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಪ್ರಶ್ನಿಸಿದ್ದಾರೆ.</p><p>'ಭಾರತ ತಂಡ ಪ್ರಶಸ್ತಿ ಗೆದ್ದಿದೆ. ಆದರೆ, ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ್ದ ಪಿಸಿಬಿಯ ಪ್ರತಿನಿಧಿ ವೇದಿಕೆಯಲ್ಲಿ ಇರಲಿಲ್ಲವೇಕೆ ಎಂಬುದು ನನಗೆ ಅರ್ಥವಾಗಲಿಲ್ಲ' ಎಂದು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಹೇಳಿದ್ದಾರೆ.</p><p>'ಪ್ರಶಸ್ತಿ ಪ್ರದಾನ ಮಾಡುವ ವೇಳೆ (ಪಿಸಿಬಿಯ) ಯಾರೂ ಇರಲಿಲ್ಲವೇಕೆ? ಇದು ನನ್ನನ್ನು ಮೀರಿದ್ದಾದರೂ, ಆಲೋಚಿಸಬೇಕಾದ ವಿಚಾರ. ಇದು ಜಾಗತಿಕ ವೇದಿಕೆ. ಅಲ್ಲಿ ನೀವು (ಪಿಸಿಬಿ ಅಧಿಕಾರಿ) ಇರಬೇಕಿತ್ತು. ಅನುಪಸ್ಥಿತಿಯನ್ನು ನೋಡಿ ಬೇಸರವಾಯಿತು' ಎಂದಿದ್ದಾರೆ.</p><p>ಬಿಸಿಸಿಐ ಅಧ್ಯಕ್ಷ ಬಿನ್ನಿ ಭಾರತಕ್ಕೆ ಬಿಳಿ ಜಾಕೆಟ್ಗಳನ್ನು ಮತ್ತು ಪಂದ್ಯದ ಅಧಿಕಾರಿಗಳಿಗೆ ಪದಕಗಳನ್ನು ಪ್ರದಾನ ಮಾಡಿದರು, ಆದರೆ ಐಸಿಸಿ ಅಧ್ಯಕ್ಷ ಶಾ ಟ್ರೋಫಿಯನ್ನು ರೋಹಿತ್ ಶರ್ಮಾ ಅವರಿಗೆ ಹಸ್ತಾಂತರಿಸಿ ಭಾರತೀಯ ಆಟಗಾರರಿಗೆ ಪದಕಗಳನ್ನು ವಿತರಿಸಿದರು.</p><p>ಪಾಕಿಸ್ತಾನದ ಆತಿಥ್ಯದಲ್ಲಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಯೋಜನೆಗೊಂಡಿತ್ತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಭಾರತವು ಪಾಕಿಸ್ತಾನದಲ್ಲಿ ತಮ್ಮ ಪಂದ್ಯಗಳನ್ನು ಆಡಲು ನಿರಾಕರಿಸಿತ್ತು.</p>.Champions Trophy | ಸಮಾರೋಪಕ್ಕೆ ಪಾಕ್ ಪ್ರತಿನಿಧಿಯ ಕಡೆಗಣನೆ: PCB ಸಿಡಿಮಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ: </strong>ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ<strong>(</strong>ಪಿಸಿಬಿ) ಅಧಿಕಾರಿ ಅನುಪಸ್ಥಿತಿಯನ್ನು ಪಾಕ್ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಪ್ರಶ್ನಿಸಿದ್ದಾರೆ.</p><p>'ಭಾರತ ತಂಡ ಪ್ರಶಸ್ತಿ ಗೆದ್ದಿದೆ. ಆದರೆ, ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ್ದ ಪಿಸಿಬಿಯ ಪ್ರತಿನಿಧಿ ವೇದಿಕೆಯಲ್ಲಿ ಇರಲಿಲ್ಲವೇಕೆ ಎಂಬುದು ನನಗೆ ಅರ್ಥವಾಗಲಿಲ್ಲ' ಎಂದು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಹೇಳಿದ್ದಾರೆ.</p><p>'ಪ್ರಶಸ್ತಿ ಪ್ರದಾನ ಮಾಡುವ ವೇಳೆ (ಪಿಸಿಬಿಯ) ಯಾರೂ ಇರಲಿಲ್ಲವೇಕೆ? ಇದು ನನ್ನನ್ನು ಮೀರಿದ್ದಾದರೂ, ಆಲೋಚಿಸಬೇಕಾದ ವಿಚಾರ. ಇದು ಜಾಗತಿಕ ವೇದಿಕೆ. ಅಲ್ಲಿ ನೀವು (ಪಿಸಿಬಿ ಅಧಿಕಾರಿ) ಇರಬೇಕಿತ್ತು. ಅನುಪಸ್ಥಿತಿಯನ್ನು ನೋಡಿ ಬೇಸರವಾಯಿತು' ಎಂದಿದ್ದಾರೆ.</p><p>ಬಿಸಿಸಿಐ ಅಧ್ಯಕ್ಷ ಬಿನ್ನಿ ಭಾರತಕ್ಕೆ ಬಿಳಿ ಜಾಕೆಟ್ಗಳನ್ನು ಮತ್ತು ಪಂದ್ಯದ ಅಧಿಕಾರಿಗಳಿಗೆ ಪದಕಗಳನ್ನು ಪ್ರದಾನ ಮಾಡಿದರು, ಆದರೆ ಐಸಿಸಿ ಅಧ್ಯಕ್ಷ ಶಾ ಟ್ರೋಫಿಯನ್ನು ರೋಹಿತ್ ಶರ್ಮಾ ಅವರಿಗೆ ಹಸ್ತಾಂತರಿಸಿ ಭಾರತೀಯ ಆಟಗಾರರಿಗೆ ಪದಕಗಳನ್ನು ವಿತರಿಸಿದರು.</p><p>ಪಾಕಿಸ್ತಾನದ ಆತಿಥ್ಯದಲ್ಲಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಯೋಜನೆಗೊಂಡಿತ್ತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಭಾರತವು ಪಾಕಿಸ್ತಾನದಲ್ಲಿ ತಮ್ಮ ಪಂದ್ಯಗಳನ್ನು ಆಡಲು ನಿರಾಕರಿಸಿತ್ತು.</p>.Champions Trophy | ಸಮಾರೋಪಕ್ಕೆ ಪಾಕ್ ಪ್ರತಿನಿಧಿಯ ಕಡೆಗಣನೆ: PCB ಸಿಡಿಮಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>