ಚಾಮರಾಜನಗರ: ಇಲ್ಲಿನ ಮಲೆಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಸೋಮವಾರ ಹುಸಿ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಾಂಬ್ ಪತ್ತೆ ದಳ ಹಾಗೂ ಶ್ವಾನದಳಗಳು ದೇವಸ್ಥಾನವನ್ನು ತಪಾಸಣೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರೂಪಾ, ‘ಬೆದರಿಕೆ ಪತ್ರವೊಂದು ಬಂದಿತ್ತು. ಇದು ಕಿಡಿಗೇಡಿಗಳು ಮಾಡಿರುವ ಕುಚೇಷ್ಟೆಯಷ್ಟೆ. ಆತಂಕಪಡುವ ಅಗತ್ಯ ಇಲ್ಲ’ ಎಂದು ತಿಳಿಸಿದ್ದಾರೆ.