<p><strong>ಸಿಡ್ನಿ</strong>: ದಿನ ಕಳೆದಂತೆ ತಮ್ಮ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ಭಾರತ ತಂಡದ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.</p><p>ಹೋದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ, ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಪಡೆಯುವಾಗ ಅಯ್ಯರ್ ಅವರ ಪಕ್ಕೆಲುಬಿನ ಭಾಗ ನೆಲಕ್ಕೆ ಉಜ್ಜಿತ್ತು. ಗುಲ್ಮಕ್ಕೂ ಸ್ವಲ್ಪ ಗಾಯವಾಗಿತ್ತು.</p><p>‘ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನಗಳೆಂದಂತೆ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ’ ಎಂದು ಗಾಯಾಳಾದ ನಂತರ ಅವರು ಮೊದಲ ಬಾರಿ ‘ಎಕ್ಸ್’ನಲ್ಲಿ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಾಕಿದ್ದಾರೆ.</p><p>‘ನನಗೆ ಸಿಗುತ್ತಿರುವ ಎಲ್ಲ ರೀತಿಯ ಹಾರೈಕೆ ಮತ್ತು ಬೆಂಬಲಗಳಿಗೆ ಕೃತಜ್ಞನಾಗಿದ್ದೇನೆ. ನಿಮ್ಮ ಮನಸ್ಸಿನಲ್ಲಿ ನೀಡಿರುವ ಸ್ಥಾನಕ್ಕೆ ಕೃತಜ್ಞತೆಗಳು’ ಎಂದೂ ಬರೆದಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು, ಸಿಡ್ನಿ ಮತ್ತು ಭಾರತದ ತಜ್ಞರೊಂದಿಗೆ ಅವರ ಆರೋಗ್ಯದ ಮೇಲೆ ಸತತವಾಗಿ ನಿಗಾ ಇಟ್ಟಿದೆ.</p><p>ಆರಂಭದಲ್ಲಿ ಅವರಿಗೆ ಮೂರು ತಿಂಗಳ ವಿಶ್ರಾಂತಿ ಅಗತ್ಯವಾಗಬಹುದೆಂಬ ನಿರೀಕ್ಷೆಯಿತ್ತು. ಈಗ ಸಂಪೂರ್ಣ ಚೇತರಿಕೆಗೆ ಹೆಚ್ಚಿನ ಸಮಯ ಹಿಡಿಯುವ ಸಾಧ್ಯತೆ ಕಾಣುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ</strong>: ದಿನ ಕಳೆದಂತೆ ತಮ್ಮ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ಭಾರತ ತಂಡದ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.</p><p>ಹೋದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ, ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಪಡೆಯುವಾಗ ಅಯ್ಯರ್ ಅವರ ಪಕ್ಕೆಲುಬಿನ ಭಾಗ ನೆಲಕ್ಕೆ ಉಜ್ಜಿತ್ತು. ಗುಲ್ಮಕ್ಕೂ ಸ್ವಲ್ಪ ಗಾಯವಾಗಿತ್ತು.</p><p>‘ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನಗಳೆಂದಂತೆ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ’ ಎಂದು ಗಾಯಾಳಾದ ನಂತರ ಅವರು ಮೊದಲ ಬಾರಿ ‘ಎಕ್ಸ್’ನಲ್ಲಿ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಾಕಿದ್ದಾರೆ.</p><p>‘ನನಗೆ ಸಿಗುತ್ತಿರುವ ಎಲ್ಲ ರೀತಿಯ ಹಾರೈಕೆ ಮತ್ತು ಬೆಂಬಲಗಳಿಗೆ ಕೃತಜ್ಞನಾಗಿದ್ದೇನೆ. ನಿಮ್ಮ ಮನಸ್ಸಿನಲ್ಲಿ ನೀಡಿರುವ ಸ್ಥಾನಕ್ಕೆ ಕೃತಜ್ಞತೆಗಳು’ ಎಂದೂ ಬರೆದಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು, ಸಿಡ್ನಿ ಮತ್ತು ಭಾರತದ ತಜ್ಞರೊಂದಿಗೆ ಅವರ ಆರೋಗ್ಯದ ಮೇಲೆ ಸತತವಾಗಿ ನಿಗಾ ಇಟ್ಟಿದೆ.</p><p>ಆರಂಭದಲ್ಲಿ ಅವರಿಗೆ ಮೂರು ತಿಂಗಳ ವಿಶ್ರಾಂತಿ ಅಗತ್ಯವಾಗಬಹುದೆಂಬ ನಿರೀಕ್ಷೆಯಿತ್ತು. ಈಗ ಸಂಪೂರ್ಣ ಚೇತರಿಕೆಗೆ ಹೆಚ್ಚಿನ ಸಮಯ ಹಿಡಿಯುವ ಸಾಧ್ಯತೆ ಕಾಣುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>