<p><strong>ನವದೆಹಲಿ:</strong> ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿಗೆ ಪೆಟ್ಟುಮಾಡಿಕೊಂಡಿದ್ದ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಸಿಡ್ನಿಯ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಶನಿವಾರ ನಡೆದ ಆ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅಮೋಘವಾಗಿ ಕ್ಯಾಚ್ ಪಡೆಯುವ ವೇಳೆ ಅಯ್ಯರ್ ಅವರ ಪಕ್ಕೆಲುಬು ನೆಲಕ್ಕೆ ಉಜ್ಜಿಹೋಗಿತ್ತು. </p><p>‘ಡ್ರೆಸಿಂಗ್ರೂಮ್ನಲ್ಲಿ ಅಯ್ಯರ್ ಪ್ರಜ್ಞೆತಪ್ಪಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಗುಲ್ಮಕ್ಕೆ (ಪ್ಲೀಹ ಸ್ಪ್ಲೀನ್) ಸೀಳು ಗಾಯವಾಗಿರುವುದು ಸ್ಕ್ಯಾನ್ಗಳಿಂದ ದೃಢಪಟ್ಟಿದೆ’ ಎಂದು ಮೂಲಗಳು ತಿಳಿಸಿವೆ.</p><p>‘ಅಯ್ಯರ್ ಅವರಿಗೆ ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಲ್ಮಕ್ಕೆ ಗಾಯವಾಗಿರುವುದು ಸ್ಕ್ಯಾನ್ಗಳಿಂದ ಗೊತ್ತಾಗಿದೆ. ಅವರು ಚಿಕಿತ್ಸೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಬಿಸಿಸಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.</p><p>ಅವರಿಗೆ ಆಂತರಿಕ ರಕ್ತಸ್ರಾವವಾಗಿರುವುದೂ ಪತ್ತೆಯಾಗಿದೆ. ಅವರ ಗಾಯದ ಸ್ಥಿತಿಗತಿಗಳ ಬಗ್ಗೆ ಬಿಸಿಸಿಐನ ವೈದ್ಯಕೀಯ ತಂಡವು, ಸಿಡ್ನಿಯಲ್ಲಿರುವ ತಜ್ಞ ವೈದ್ಯರ ಜೊತೆ ನಿಗಾವಹಿಸಿದೆ. ತಂಡದ ವೈದ್ಯರು ಸಿಡ್ನಿಯಲ್ಲೇ ಇರಲಿದ್ದು, ದೈನಂದಿನ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.</p><p>30 ವರ್ಷದ ಅಯ್ಯರ್ 2 ರಿಂದ 7 ದಿಗಳ ಕಾಲ ನಿಗಾದಲ್ಲಿ ಇರಲಿದ್ದಾರೆ. ಅವರು ಮೂರು ವಾರ ಕ್ರಿಕೆಟ್ನಿಂದ ದೂರವಿರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಮತ್ತು ವಿಶ್ರಾಂತಿ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ.</p><p>ಕಡೇಪಕ್ಷ ಒಂದು ವಾರ ಅವರು ಸಿಡ್ನಿಯಲ್ಲೇ ಉಳಿದುಕೊಳ್ಳಬೇಕಾಗಬಹುದು. ಅವರು ಪ್ರಯಾಣ ಮಾಡಲು ಫಿಟ್ ಆಗಿದ್ದಾರೆ ಎಂದು ವೈದ್ಯರು ಸೂಚಿಸಿದ ನಂತರವಷ್ಟೇ ಸ್ವದೇಶಕ್ಕೆ ಮರಳಬಹುದು. ಅಯ್ಯರ್ ಅವರು ಭಾರತ ಟಿ20 ತಂಡದ ಭಾಗವಾಗಿಲ್ಲ.</p>.ಭಾರತ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ಗೆ ಗಾಯ: 3 ವಾರ ವಿಶ್ರಾಂತಿ.ಭಾರತ ವಿರುದ್ಧದ ಟಿ–20 ಸರಣಿಯ ಮೊದಲ ಪಂದ್ಯಕ್ಕೆ ಆ್ಯಡಂ ಜಂಪಾ ಅಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿಗೆ ಪೆಟ್ಟುಮಾಡಿಕೊಂಡಿದ್ದ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಸಿಡ್ನಿಯ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಶನಿವಾರ ನಡೆದ ಆ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅಮೋಘವಾಗಿ ಕ್ಯಾಚ್ ಪಡೆಯುವ ವೇಳೆ ಅಯ್ಯರ್ ಅವರ ಪಕ್ಕೆಲುಬು ನೆಲಕ್ಕೆ ಉಜ್ಜಿಹೋಗಿತ್ತು. </p><p>‘ಡ್ರೆಸಿಂಗ್ರೂಮ್ನಲ್ಲಿ ಅಯ್ಯರ್ ಪ್ರಜ್ಞೆತಪ್ಪಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಗುಲ್ಮಕ್ಕೆ (ಪ್ಲೀಹ ಸ್ಪ್ಲೀನ್) ಸೀಳು ಗಾಯವಾಗಿರುವುದು ಸ್ಕ್ಯಾನ್ಗಳಿಂದ ದೃಢಪಟ್ಟಿದೆ’ ಎಂದು ಮೂಲಗಳು ತಿಳಿಸಿವೆ.</p><p>‘ಅಯ್ಯರ್ ಅವರಿಗೆ ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಲ್ಮಕ್ಕೆ ಗಾಯವಾಗಿರುವುದು ಸ್ಕ್ಯಾನ್ಗಳಿಂದ ಗೊತ್ತಾಗಿದೆ. ಅವರು ಚಿಕಿತ್ಸೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಬಿಸಿಸಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.</p><p>ಅವರಿಗೆ ಆಂತರಿಕ ರಕ್ತಸ್ರಾವವಾಗಿರುವುದೂ ಪತ್ತೆಯಾಗಿದೆ. ಅವರ ಗಾಯದ ಸ್ಥಿತಿಗತಿಗಳ ಬಗ್ಗೆ ಬಿಸಿಸಿಐನ ವೈದ್ಯಕೀಯ ತಂಡವು, ಸಿಡ್ನಿಯಲ್ಲಿರುವ ತಜ್ಞ ವೈದ್ಯರ ಜೊತೆ ನಿಗಾವಹಿಸಿದೆ. ತಂಡದ ವೈದ್ಯರು ಸಿಡ್ನಿಯಲ್ಲೇ ಇರಲಿದ್ದು, ದೈನಂದಿನ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.</p><p>30 ವರ್ಷದ ಅಯ್ಯರ್ 2 ರಿಂದ 7 ದಿಗಳ ಕಾಲ ನಿಗಾದಲ್ಲಿ ಇರಲಿದ್ದಾರೆ. ಅವರು ಮೂರು ವಾರ ಕ್ರಿಕೆಟ್ನಿಂದ ದೂರವಿರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಮತ್ತು ವಿಶ್ರಾಂತಿ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ.</p><p>ಕಡೇಪಕ್ಷ ಒಂದು ವಾರ ಅವರು ಸಿಡ್ನಿಯಲ್ಲೇ ಉಳಿದುಕೊಳ್ಳಬೇಕಾಗಬಹುದು. ಅವರು ಪ್ರಯಾಣ ಮಾಡಲು ಫಿಟ್ ಆಗಿದ್ದಾರೆ ಎಂದು ವೈದ್ಯರು ಸೂಚಿಸಿದ ನಂತರವಷ್ಟೇ ಸ್ವದೇಶಕ್ಕೆ ಮರಳಬಹುದು. ಅಯ್ಯರ್ ಅವರು ಭಾರತ ಟಿ20 ತಂಡದ ಭಾಗವಾಗಿಲ್ಲ.</p>.ಭಾರತ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ಗೆ ಗಾಯ: 3 ವಾರ ವಿಶ್ರಾಂತಿ.ಭಾರತ ವಿರುದ್ಧದ ಟಿ–20 ಸರಣಿಯ ಮೊದಲ ಪಂದ್ಯಕ್ಕೆ ಆ್ಯಡಂ ಜಂಪಾ ಅಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>