<p><strong>ಮುಂಬೈ:</strong> ಕಳೆದ ವರ್ಷ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸಂದರ್ಭದಲ್ಲಿ ಗಾಯಗೊಂಡು, ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ತಂಡಕ್ಕೆ ಮರಳಿದ್ದಾರೆ. ಈ ನಡುವೆ ಅವರನ್ನು ವಿಜಯ್ ಹಜಾರೆ ಟ್ರೋಫಿಯ ಮುಂದಿನ ಪಂದ್ಯಗಳಿಗೆ ಮುಂಬೈ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.</p><p>ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ತಪ್ಪಿಸಿಕೊಂಡಿದ್ದ ಅವರು, ಸದ್ಯ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಮಾತ್ರವಲ್ಲ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.</p><p>ಗಾಯದ ಸಮಸ್ಯೆಯಿಂದ ವಿಜಯ್ ಹಜಾರೆ ಟ್ರೋಫಿಯ ಬಾಕಿ ಉಳಿದ ಪಂದ್ಯಗಳಿಂದ ಹೊರಬಿದ್ದಿರುವ ಮುಂಬೈ ತಂಡದ ಖಾಯಂ ನಾಯಕ ಶಾರ್ದೂಲ್ ಠಾಕೂರ್ ಅವರ ಬದಲು ತಂಡವನ್ನು ಶ್ರೇಯಸ್ ಅಯ್ಯರ್ ಅವರು ಮುನ್ನಡೆಸಲಿದ್ದಾರೆ.</p><p>‘ಶಾರ್ದುಲ್ ಗಾಯಗೊಂಡಿರುವುದರಿಂದ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ಲಭ್ಯರಿದ್ದು, ಶ್ರೇಯಸ್ ಅಯ್ಯರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಸಂಜಯ್ ಪಾಟೀಲ್ ಸೋಮವಾರ ಪಿಟಿಐಗೆ ತಿಳಿಸಿದ್ದಾರೆ.</p><p>ಮಂಗಳವಾರ ನಡೆಯಲಿರುವ ಗ್ರೂಪ್ ಸಿ ಪಂದ್ಯದಲ್ಲಿ ಹಿಮಾಚಲ ಪ್ರದೇಶ ವಿರುದ್ಧ ಹಾಗೂ ಜನವರಿ 8ರಂದು ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡವನ್ನು ಶ್ರೇಯಸ್ ಅಯ್ಯರ್ ಅವರು ಮುನ್ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಳೆದ ವರ್ಷ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸಂದರ್ಭದಲ್ಲಿ ಗಾಯಗೊಂಡು, ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ತಂಡಕ್ಕೆ ಮರಳಿದ್ದಾರೆ. ಈ ನಡುವೆ ಅವರನ್ನು ವಿಜಯ್ ಹಜಾರೆ ಟ್ರೋಫಿಯ ಮುಂದಿನ ಪಂದ್ಯಗಳಿಗೆ ಮುಂಬೈ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.</p><p>ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ತಪ್ಪಿಸಿಕೊಂಡಿದ್ದ ಅವರು, ಸದ್ಯ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಮಾತ್ರವಲ್ಲ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.</p><p>ಗಾಯದ ಸಮಸ್ಯೆಯಿಂದ ವಿಜಯ್ ಹಜಾರೆ ಟ್ರೋಫಿಯ ಬಾಕಿ ಉಳಿದ ಪಂದ್ಯಗಳಿಂದ ಹೊರಬಿದ್ದಿರುವ ಮುಂಬೈ ತಂಡದ ಖಾಯಂ ನಾಯಕ ಶಾರ್ದೂಲ್ ಠಾಕೂರ್ ಅವರ ಬದಲು ತಂಡವನ್ನು ಶ್ರೇಯಸ್ ಅಯ್ಯರ್ ಅವರು ಮುನ್ನಡೆಸಲಿದ್ದಾರೆ.</p><p>‘ಶಾರ್ದುಲ್ ಗಾಯಗೊಂಡಿರುವುದರಿಂದ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ಲಭ್ಯರಿದ್ದು, ಶ್ರೇಯಸ್ ಅಯ್ಯರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಸಂಜಯ್ ಪಾಟೀಲ್ ಸೋಮವಾರ ಪಿಟಿಐಗೆ ತಿಳಿಸಿದ್ದಾರೆ.</p><p>ಮಂಗಳವಾರ ನಡೆಯಲಿರುವ ಗ್ರೂಪ್ ಸಿ ಪಂದ್ಯದಲ್ಲಿ ಹಿಮಾಚಲ ಪ್ರದೇಶ ವಿರುದ್ಧ ಹಾಗೂ ಜನವರಿ 8ರಂದು ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡವನ್ನು ಶ್ರೇಯಸ್ ಅಯ್ಯರ್ ಅವರು ಮುನ್ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>