<p><strong>ನವದೆಹಲಿ:</strong> ಭಾರತ ಎ ತಂಡದ ನಾಯಕತ್ವದಿಂದ ಹಿಂದೆಸರಿದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.</p>.<p>‘ಬೆನ್ನುನೋವಿನಿಂದ ಬಳಲುತ್ತಿರುವ ಕಾರಣ ಟೆಸ್ಟ್ ಮಾದರಿಯಲ್ಲಿ ಆಡುವುದು ಕಷ್ಟ. ತಮ್ಮನ್ನು ತವರಿನಲ್ಲಿ ನಡೆಯುವ ವಿಂಡೀಸ್ ವಿರುದ್ಧದ ಸರಣಿಗೆ ಪರಿಗಣಿಸಬೇಡಿ’ ಎಂದು 30 ವರ್ಷದ ಶ್ರೇಯಸ್ ಅವರು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಲಿಖಿತವಾಗಿ ಕೇಳಿಕೊಂಡಿದ್ದಾರೆ. </p>.<p>ಲಖನೌನಲ್ಲಿ ಆಸ್ಟ್ರೇಲಿಯಾ ಎ ವಿರುದ್ಧ ನಡೆಯುತ್ತಿರುವ ಭಾರತ ಎ ತಂಡದ ಎರಡನೇ ‘ಟೆಸ್ಟ್’ ಪಂದ್ಯದಿಂದ ಶ್ರೇಯಸ್ ಹಿಂದೆ ಸರಿದಿದ್ದರು. ಈಗ ಅವರು ದೀರ್ಘ ಮಾದರಿಯ ಕ್ರಿಕೆಟ್ನಿಂದಲೂ ತಾತ್ಕಾಲಿಕ ವಿರಾಮ ಬಯಸಿದ್ದಾರೆ. ಶ್ರೇಯಸ್ ಅನುಪಸ್ಥಿತಿಯಲ್ಲಿ ಧ್ರುವ್ ಜುರೇಲ್ ಅವರು ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ. </p>.<p>‘ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ಹೋಗಿರುವುದಾಗಿ ಶ್ರೇಯಸ್ ಅವರು ಭಾರತ ಎ ತಂಡದ ಆಡಳಿತ ಮಂಡಳಿಗೆ ತಿಳಿಸಿದ್ದರೂ, ಸದ್ಯಕ್ಕೆ ಪ್ರಥಮ ದರ್ಜೆ ಮತ್ತು ಟೆಸ್ಟ್ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಿಗೆ ತಿಳಿಸಿದ್ದಾರೆ’ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>2025ರ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದ ಶ್ರೇಯಸ್ ಅವರು ಅಕ್ಟೋಬರ್ 15ರಿಂದ ಪ್ರಾರಂಭವಾಗುವ ರಣಜಿ ಟ್ರೋಫಿ ಋತುವಿಗೆ ಆಡುವುದೂ ಅನುಮಾನವಾಗಿದೆ.</p>.<p>ಶ್ರೇಯಸ್ ಅವರು ಬೆನ್ನುನೋನಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ಗೆ ಹೋಗುವ ಸಾಧ್ಯತೆಯಿದೆ. ಅವರು ಕಳೆದ ದೇಶೀಯ ಋತುವಿನಲ್ಲಿ ಕ್ರಿಕೆಟ್ ಆಡುವ ವೇಳೆಯೂ ಬೆನ್ನುನೋವು ಅನುಭವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಎ ತಂಡದ ನಾಯಕತ್ವದಿಂದ ಹಿಂದೆಸರಿದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.</p>.<p>‘ಬೆನ್ನುನೋವಿನಿಂದ ಬಳಲುತ್ತಿರುವ ಕಾರಣ ಟೆಸ್ಟ್ ಮಾದರಿಯಲ್ಲಿ ಆಡುವುದು ಕಷ್ಟ. ತಮ್ಮನ್ನು ತವರಿನಲ್ಲಿ ನಡೆಯುವ ವಿಂಡೀಸ್ ವಿರುದ್ಧದ ಸರಣಿಗೆ ಪರಿಗಣಿಸಬೇಡಿ’ ಎಂದು 30 ವರ್ಷದ ಶ್ರೇಯಸ್ ಅವರು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಲಿಖಿತವಾಗಿ ಕೇಳಿಕೊಂಡಿದ್ದಾರೆ. </p>.<p>ಲಖನೌನಲ್ಲಿ ಆಸ್ಟ್ರೇಲಿಯಾ ಎ ವಿರುದ್ಧ ನಡೆಯುತ್ತಿರುವ ಭಾರತ ಎ ತಂಡದ ಎರಡನೇ ‘ಟೆಸ್ಟ್’ ಪಂದ್ಯದಿಂದ ಶ್ರೇಯಸ್ ಹಿಂದೆ ಸರಿದಿದ್ದರು. ಈಗ ಅವರು ದೀರ್ಘ ಮಾದರಿಯ ಕ್ರಿಕೆಟ್ನಿಂದಲೂ ತಾತ್ಕಾಲಿಕ ವಿರಾಮ ಬಯಸಿದ್ದಾರೆ. ಶ್ರೇಯಸ್ ಅನುಪಸ್ಥಿತಿಯಲ್ಲಿ ಧ್ರುವ್ ಜುರೇಲ್ ಅವರು ಭಾರತ ಎ ತಂಡವನ್ನು ಮುನ್ನಡೆಸುತ್ತಿದ್ದಾರೆ. </p>.<p>‘ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ಹೋಗಿರುವುದಾಗಿ ಶ್ರೇಯಸ್ ಅವರು ಭಾರತ ಎ ತಂಡದ ಆಡಳಿತ ಮಂಡಳಿಗೆ ತಿಳಿಸಿದ್ದರೂ, ಸದ್ಯಕ್ಕೆ ಪ್ರಥಮ ದರ್ಜೆ ಮತ್ತು ಟೆಸ್ಟ್ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಿಗೆ ತಿಳಿಸಿದ್ದಾರೆ’ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.</p>.<p>2025ರ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದ ಶ್ರೇಯಸ್ ಅವರು ಅಕ್ಟೋಬರ್ 15ರಿಂದ ಪ್ರಾರಂಭವಾಗುವ ರಣಜಿ ಟ್ರೋಫಿ ಋತುವಿಗೆ ಆಡುವುದೂ ಅನುಮಾನವಾಗಿದೆ.</p>.<p>ಶ್ರೇಯಸ್ ಅವರು ಬೆನ್ನುನೋನಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ಗೆ ಹೋಗುವ ಸಾಧ್ಯತೆಯಿದೆ. ಅವರು ಕಳೆದ ದೇಶೀಯ ಋತುವಿನಲ್ಲಿ ಕ್ರಿಕೆಟ್ ಆಡುವ ವೇಳೆಯೂ ಬೆನ್ನುನೋವು ಅನುಭವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>