<p><strong>ದುಬೈ:</strong> ಭಾರತ ಟೆಸ್ಟ್ ಕ್ರಿಕೆಟ್ ತಂಡದ ನೂತನ ನಾಯಕ ಶುಭಮನ್ ಗಿಲ್ ಅವರಿಗೆ ಇಂಗ್ಲೆಂಡ್ ಪರಿಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಕಠಿಣ ಸವಾಲು ಎದುರಾಗಲಿದೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಎಚ್ಚರಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಶುಭಮನ್ ಗಿಲ್ ಅವರು ತಾಳ್ಮೆ ಹಾಗೂ ಸಂಯಮವನ್ನು ಪಾಲಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ. </p><p>'ದಿ ಐಸಿಸಿ ರಿವ್ಯೂ' ಕಾರ್ಯಕ್ರಮದಲ್ಲಿ 25 ವರ್ಷದ ಗಿಲ್ ಅವರಿಗೆ ಶಾಸ್ತ್ರಿ ಸಲಹೆಗಳನ್ನು ನೀಡಿದ್ದಾರೆ. </p><p>'ನಿಮ್ಮ ಸಮಯವನ್ನು ತೆಗೆದುಕೊಳ್ಳಿ. ಏಕೆಂದರೆ ಅಷ್ಟು ಸುಲಭದ ಪರಿಸ್ಥಿತಿ ಇರುವುದಿಲ್ಲ. ಅತ್ಯಂತ ಕಠಿಣ ಕೆಲಸವನ್ನು ನಿಭಾಯಿಸಲು ಗಿಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅದು ಕೂಡ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ' ಎಂದು ರವಿ ಶಾಸ್ತ್ರಿ ಉಲ್ಲೇಖಿಸಿದ್ದಾರೆ. </p><p>2020ರ ಡಿಸೆಂಬರ್ನಲ್ಲಿ ಪದಾರ್ಪಣೆ ಮಾಡಿರುವ ಗಿಲ್ ಈವರೆಗೆ 32 ಪಂದ್ಯಗಳಲ್ಲಿ 35.05ರ ಸರಾಸರಿಯಲ್ಲಿ 1,893 ರನ್ ಗಳಿಸಿದ್ದಾರೆ. </p><p>2007ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಭಾರತ ಕೊನೆಯದಾಗಿ ಟೆಸ್ಟ್ ಸರಣಿ ಗೆದ್ದಿತ್ತು. ಅಲ್ಲದೆ ಗಿಲ್ ನಾಯಕತ್ವಕ್ಕೆ ಕಠಿಣ ಸವಾಲು ಎದುರಾಗಲಿದೆ. </p><p>ಮತ್ತೊಂದೆಡೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಆರ್. ಅಶ್ವಿನ್ ನಿವೃತ್ತಿಯ ಬಳಿಕ ಟೀಮ್ ಇಂಡಿಯಾ ಭವಿಷ್ಯದ ತಂಡವನ್ನು ರೂಪಿಸುವ ಇರಾದೆಯಲ್ಲಿದೆ. </p><p>'ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿರುವ ಗಿಲ್ ಅವರಿಗೆ ಇಂಗ್ಲೆಂಡ್ನಲ್ಲಿ ಕಲಿಕಾ ಕಾಲಘಟ್ಟವಾಗಿರಲಿದೆ. ಅಲ್ಲಿ ಅವರು ಪಾಠವನ್ನು ಕಲಿಯಲಿದ್ದಾರೆ. ಗುಜರಾತ್ ತಂಡವನ್ನು ಮುನ್ನಡೆಸಿದಾಗ ಶಾಂತಚಿತ್ತರಾಗಿದ್ದರು. ಅದೇ ಸಂಯಮವನ್ನು ಕಾಯ್ದುಕೊಳ್ಳಬೇಕು' ಎಂದು ಶಾಸ್ತ್ರಿ ಸಲಹೆ ನೀಡಿದ್ದಾರೆ. </p><p>ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರದಂದು ಲೀಡ್ಸ್ನಲ್ಲಿ ಆರಂಭವಾಗಲಿದೆ. </p>.ವಿಶ್ಲೇಷಣೆ: ತೆಂಬಾ ಬವುಮಾ.. ಟೆಸ್ಟ್ ಕ್ರಿಕೆಟ್ ಬೆಳ್ಳಿಚುಕ್ಕಿ.ಪಟೌಡಿ ಟ್ರೋಫಿ ಮರುನಾಮಕರಣ: ಕಪಿಲ್ ಅಚ್ಚರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಭಾರತ ಟೆಸ್ಟ್ ಕ್ರಿಕೆಟ್ ತಂಡದ ನೂತನ ನಾಯಕ ಶುಭಮನ್ ಗಿಲ್ ಅವರಿಗೆ ಇಂಗ್ಲೆಂಡ್ ಪರಿಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಕಠಿಣ ಸವಾಲು ಎದುರಾಗಲಿದೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಎಚ್ಚರಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಶುಭಮನ್ ಗಿಲ್ ಅವರು ತಾಳ್ಮೆ ಹಾಗೂ ಸಂಯಮವನ್ನು ಪಾಲಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ. </p><p>'ದಿ ಐಸಿಸಿ ರಿವ್ಯೂ' ಕಾರ್ಯಕ್ರಮದಲ್ಲಿ 25 ವರ್ಷದ ಗಿಲ್ ಅವರಿಗೆ ಶಾಸ್ತ್ರಿ ಸಲಹೆಗಳನ್ನು ನೀಡಿದ್ದಾರೆ. </p><p>'ನಿಮ್ಮ ಸಮಯವನ್ನು ತೆಗೆದುಕೊಳ್ಳಿ. ಏಕೆಂದರೆ ಅಷ್ಟು ಸುಲಭದ ಪರಿಸ್ಥಿತಿ ಇರುವುದಿಲ್ಲ. ಅತ್ಯಂತ ಕಠಿಣ ಕೆಲಸವನ್ನು ನಿಭಾಯಿಸಲು ಗಿಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅದು ಕೂಡ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ನಾಯಕರಾಗಿದ್ದಾರೆ' ಎಂದು ರವಿ ಶಾಸ್ತ್ರಿ ಉಲ್ಲೇಖಿಸಿದ್ದಾರೆ. </p><p>2020ರ ಡಿಸೆಂಬರ್ನಲ್ಲಿ ಪದಾರ್ಪಣೆ ಮಾಡಿರುವ ಗಿಲ್ ಈವರೆಗೆ 32 ಪಂದ್ಯಗಳಲ್ಲಿ 35.05ರ ಸರಾಸರಿಯಲ್ಲಿ 1,893 ರನ್ ಗಳಿಸಿದ್ದಾರೆ. </p><p>2007ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಭಾರತ ಕೊನೆಯದಾಗಿ ಟೆಸ್ಟ್ ಸರಣಿ ಗೆದ್ದಿತ್ತು. ಅಲ್ಲದೆ ಗಿಲ್ ನಾಯಕತ್ವಕ್ಕೆ ಕಠಿಣ ಸವಾಲು ಎದುರಾಗಲಿದೆ. </p><p>ಮತ್ತೊಂದೆಡೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಆರ್. ಅಶ್ವಿನ್ ನಿವೃತ್ತಿಯ ಬಳಿಕ ಟೀಮ್ ಇಂಡಿಯಾ ಭವಿಷ್ಯದ ತಂಡವನ್ನು ರೂಪಿಸುವ ಇರಾದೆಯಲ್ಲಿದೆ. </p><p>'ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿರುವ ಗಿಲ್ ಅವರಿಗೆ ಇಂಗ್ಲೆಂಡ್ನಲ್ಲಿ ಕಲಿಕಾ ಕಾಲಘಟ್ಟವಾಗಿರಲಿದೆ. ಅಲ್ಲಿ ಅವರು ಪಾಠವನ್ನು ಕಲಿಯಲಿದ್ದಾರೆ. ಗುಜರಾತ್ ತಂಡವನ್ನು ಮುನ್ನಡೆಸಿದಾಗ ಶಾಂತಚಿತ್ತರಾಗಿದ್ದರು. ಅದೇ ಸಂಯಮವನ್ನು ಕಾಯ್ದುಕೊಳ್ಳಬೇಕು' ಎಂದು ಶಾಸ್ತ್ರಿ ಸಲಹೆ ನೀಡಿದ್ದಾರೆ. </p><p>ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರದಂದು ಲೀಡ್ಸ್ನಲ್ಲಿ ಆರಂಭವಾಗಲಿದೆ. </p>.ವಿಶ್ಲೇಷಣೆ: ತೆಂಬಾ ಬವುಮಾ.. ಟೆಸ್ಟ್ ಕ್ರಿಕೆಟ್ ಬೆಳ್ಳಿಚುಕ್ಕಿ.ಪಟೌಡಿ ಟ್ರೋಫಿ ಮರುನಾಮಕರಣ: ಕಪಿಲ್ ಅಚ್ಚರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>