<p><strong>ಕೊಲಂಬೊ</strong>: ಭಾರತ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸ ಕುರಿತಂತೆ ಅನಿಶ್ಚಿತತೆ ಮುಂದುವರಿದಿದೆ. ಜುಲೈನಲ್ಲಿ ನಿಗದಿಯಾಗಿರುವ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು (ಎಸ್ಎಲ್ಸಿ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದೆ.</p>.<p>ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳ ಸರಣಿಯನ್ನು ಆಡಲು ಭಾರತ ತಂಡ ಲಂಕಾಕ್ಕೆ ತೆರಳಬೇಕಿದೆ. ಆದರೆ ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಸರಣಿಯ ಮೇಲೆ ಕಾರ್ಮೋಡ ಕವಿದಿದೆ.</p>.<p>ಈ ಕುರಿತು ಎಸ್ಎಲ್ಸಿ, ಬಿಸಿಸಿಐಗೆ ಸಂದೇಶ ಕಳುಹಿಸಿದೆ. ಸರಣಿ ನಡೆಯಬೇಕೆಂದು ತಾನು ಬಯಸಿದ್ದು ಬಿಸಿಸಿಐನ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇವೆ’ ಎಂದು ಎಸ್ಎಲ್ಸಿ ಹೇಳಿದ್ದಾಗಿ ‘ದ ಐಲ್ಯಾಂಡ್’ ಪತ್ರಿಕೆ ಉಲ್ಲೇಖಿಸಿದೆ.</p>.<p>‘ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಬಹುದು’ ಎಂದು ಎಸ್ಎಲ್ಸಿ ಹೇಳಿದೆ.</p>.<p>ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಹಾಗೂ ಪ್ರವಾಸಿ ನಿರ್ಬಂಧಗಳ ಕುರಿತಂತೆ ಸಲಹೆಗಳು ಬರುವವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಹಂತದಲ್ಲಿ ಬಿಸಿಸಿಐ ಇಲ್ಲ. ಈ ಸರಣಿ ನಡೆಯದಿದ್ದರೆ ಶ್ರೀಲಂಕಾ ಕ್ರಿಕೆಟ್ಗೆ ಭಾರಿ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಭಾರತ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸ ಕುರಿತಂತೆ ಅನಿಶ್ಚಿತತೆ ಮುಂದುವರಿದಿದೆ. ಜುಲೈನಲ್ಲಿ ನಿಗದಿಯಾಗಿರುವ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು (ಎಸ್ಎಲ್ಸಿ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದೆ.</p>.<p>ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳ ಸರಣಿಯನ್ನು ಆಡಲು ಭಾರತ ತಂಡ ಲಂಕಾಕ್ಕೆ ತೆರಳಬೇಕಿದೆ. ಆದರೆ ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಸರಣಿಯ ಮೇಲೆ ಕಾರ್ಮೋಡ ಕವಿದಿದೆ.</p>.<p>ಈ ಕುರಿತು ಎಸ್ಎಲ್ಸಿ, ಬಿಸಿಸಿಐಗೆ ಸಂದೇಶ ಕಳುಹಿಸಿದೆ. ಸರಣಿ ನಡೆಯಬೇಕೆಂದು ತಾನು ಬಯಸಿದ್ದು ಬಿಸಿಸಿಐನ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇವೆ’ ಎಂದು ಎಸ್ಎಲ್ಸಿ ಹೇಳಿದ್ದಾಗಿ ‘ದ ಐಲ್ಯಾಂಡ್’ ಪತ್ರಿಕೆ ಉಲ್ಲೇಖಿಸಿದೆ.</p>.<p>‘ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಬಹುದು’ ಎಂದು ಎಸ್ಎಲ್ಸಿ ಹೇಳಿದೆ.</p>.<p>ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಹಾಗೂ ಪ್ರವಾಸಿ ನಿರ್ಬಂಧಗಳ ಕುರಿತಂತೆ ಸಲಹೆಗಳು ಬರುವವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಹಂತದಲ್ಲಿ ಬಿಸಿಸಿಐ ಇಲ್ಲ. ಈ ಸರಣಿ ನಡೆಯದಿದ್ದರೆ ಶ್ರೀಲಂಕಾ ಕ್ರಿಕೆಟ್ಗೆ ಭಾರಿ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>