<p><strong>ಸಿಡ್ನಿ: </strong>‘ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಕೊರೊನಾ ಬಿಕ್ಕಟ್ಟಿನ ಕಾರಣ ಮುಂದೂಡಿದರೆ, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಆಡುತ್ತೇನೆ’ ಎಂದು ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.</p>.<p>ಅಕ್ಟೋಬರ್–ನವೆಂಬರ್ನಲ್ಲಿ ಆಯೋಜನೆಯಾಗಿರುವ ವಿಶ್ವಕಪ್ ಟೂರ್ನಿಯನ್ನು ಮುಂದಕ್ಕೆ ಹಾಕುವಂತೆ ಕ್ರಿಕೆಟ್ ಆಸ್ಟ್ರೇಲಿಯಾವು (ಸಿಎ) ಐಸಿಸಿಗೆ ಪತ್ರ ಬರೆದಿದೆ ಎನ್ನಲಾಗಿದೆ. ಇದೇ ತಿಂಗಳ 10ರಂದು ನಡೆಯುವ ಸಭೆಯಲ್ಲಿ ಐಸಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ.</p>.<p>ಒಂದೊಮ್ಮೆ ವಿಶ್ವಕಪ್ ಮುಂದೂಡಲ್ಪಟ್ಟರೆ ಸೆಪ್ಟೆಂಬರ್–ಅಕ್ಟೋಬರ್ನಲ್ಲಿ 13ನೇ ಆವೃತ್ತಿಯ ಐಪಿಎಲ್ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉತ್ಸುಕವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.</p>.<p>‘ವಿಶ್ವಕಪ್ನಂತಹ ಮಹತ್ವದ ಟೂರ್ನಿಯಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವುದಕ್ಕೆ ಎಲ್ಲಾ ಆಟಗಾರರು ಮೊದಲ ಆದ್ಯತೆ ನೀಡುತ್ತಾರೆ. ನಾನೂ ಅದರಿಂದ ಹೊರತಾಗಿಲ್ಲ. ಒಂದೊಮ್ಮೆ ವಿಶ್ವಕಪ್ ನಡೆಯದಿದ್ದರೆ ಐಪಿಎಲ್ನಲ್ಲಿ ಆಡುತ್ತೇನೆ. ಐಪಿಎಲ್ ಕೂಡ ಮಹತ್ವದ ಲೀಗ್ ಆಗಿದೆ’ ಎಂದು ಅವರು ನುಡಿದಿದ್ದಾರೆ.</p>.<p>ಐಸಿಸಿಯು ಚೆಂಡಿನ ಹೊಳಪಿಗಾಗಿ ಎಂಜಲು ಹಚ್ಚುವುದನ್ನು ನಿಷೇಧಿಸಲು ಚಿಂತಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ಮಿತ್ ‘ಒಂದೊಮ್ಮೆ ಹಳೆಯ ಪದ್ಧತಿಗೆ ತಿಲಾಂಜಲಿ ಇಟ್ಟರೆ, ಪರ್ಯಾಯ ಮಾರ್ಗ ಕಂಡುಕೊಳ್ಳಲು ಬೌಲರ್ಗಳು ಪ್ರಯಾಸ ಪಡಬೇಕಾಗುತ್ತದೆ’ ಎಂದಿದ್ದಾರೆ.</p>.<p>ಸ್ಮಿತ್ ಅವರು ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ: </strong>‘ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಕೊರೊನಾ ಬಿಕ್ಕಟ್ಟಿನ ಕಾರಣ ಮುಂದೂಡಿದರೆ, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಆಡುತ್ತೇನೆ’ ಎಂದು ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.</p>.<p>ಅಕ್ಟೋಬರ್–ನವೆಂಬರ್ನಲ್ಲಿ ಆಯೋಜನೆಯಾಗಿರುವ ವಿಶ್ವಕಪ್ ಟೂರ್ನಿಯನ್ನು ಮುಂದಕ್ಕೆ ಹಾಕುವಂತೆ ಕ್ರಿಕೆಟ್ ಆಸ್ಟ್ರೇಲಿಯಾವು (ಸಿಎ) ಐಸಿಸಿಗೆ ಪತ್ರ ಬರೆದಿದೆ ಎನ್ನಲಾಗಿದೆ. ಇದೇ ತಿಂಗಳ 10ರಂದು ನಡೆಯುವ ಸಭೆಯಲ್ಲಿ ಐಸಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ.</p>.<p>ಒಂದೊಮ್ಮೆ ವಿಶ್ವಕಪ್ ಮುಂದೂಡಲ್ಪಟ್ಟರೆ ಸೆಪ್ಟೆಂಬರ್–ಅಕ್ಟೋಬರ್ನಲ್ಲಿ 13ನೇ ಆವೃತ್ತಿಯ ಐಪಿಎಲ್ ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉತ್ಸುಕವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.</p>.<p>‘ವಿಶ್ವಕಪ್ನಂತಹ ಮಹತ್ವದ ಟೂರ್ನಿಯಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವುದಕ್ಕೆ ಎಲ್ಲಾ ಆಟಗಾರರು ಮೊದಲ ಆದ್ಯತೆ ನೀಡುತ್ತಾರೆ. ನಾನೂ ಅದರಿಂದ ಹೊರತಾಗಿಲ್ಲ. ಒಂದೊಮ್ಮೆ ವಿಶ್ವಕಪ್ ನಡೆಯದಿದ್ದರೆ ಐಪಿಎಲ್ನಲ್ಲಿ ಆಡುತ್ತೇನೆ. ಐಪಿಎಲ್ ಕೂಡ ಮಹತ್ವದ ಲೀಗ್ ಆಗಿದೆ’ ಎಂದು ಅವರು ನುಡಿದಿದ್ದಾರೆ.</p>.<p>ಐಸಿಸಿಯು ಚೆಂಡಿನ ಹೊಳಪಿಗಾಗಿ ಎಂಜಲು ಹಚ್ಚುವುದನ್ನು ನಿಷೇಧಿಸಲು ಚಿಂತಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ಮಿತ್ ‘ಒಂದೊಮ್ಮೆ ಹಳೆಯ ಪದ್ಧತಿಗೆ ತಿಲಾಂಜಲಿ ಇಟ್ಟರೆ, ಪರ್ಯಾಯ ಮಾರ್ಗ ಕಂಡುಕೊಳ್ಳಲು ಬೌಲರ್ಗಳು ಪ್ರಯಾಸ ಪಡಬೇಕಾಗುತ್ತದೆ’ ಎಂದಿದ್ದಾರೆ.</p>.<p>ಸ್ಮಿತ್ ಅವರು ಈ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>