<p><strong>ಸಾಂಗ್ಲಿ (ಮಹಾರಾಷ್ಟ್ರ):</strong> ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಬ್ಯಾಟರ್ ಸ್ಮೃತಿ ಮಂದಾನ ಹಾಗೂ ಸಂಗೀತಗಾರ ಪಲಾಶ್ ಮುಚ್ಛಲ್ ಅವರ ವಿವಾಹ ಮುಂದೂಡಿಕೆಯಾಗಿದೆ. ಮಂದಾನ ಅವರ ತಂದೆ ಶ್ರೀನಿವಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ, ಭಾನುವಾರ ನಡೆಯಬೇಕಿದ್ದ ವಿವಾಹ ಸಮಾರಂಭ ರದ್ದಾಗಿದೆ.</p><p>ಮಂದಾನ ಅವರು ತಂದೆಯವರೊಂದಿಗೆ ಭಾವನಾತ್ಮಕ ಬಾಂಧವ್ಯ ಹೊಂದಿದ್ದಾರೆ. ತಂದೆಯವರ ಚೇತರಿಕೆವರೆಗೆ ಮದುವೆಯಾಗದಿರಲು ನಿರ್ಧರಿಸಿದ್ದಾರೆ ಎಂದು ಮಂದಾನ ಅವರ ಮ್ಯಾನೇಜರ್ ತುಹೀನ್ ಮಿಶ್ರಾ ಹೇಳಿದ್ದಾರೆ.</p><p>ಭಾನುವಾರ ಬೆಳಿಗ್ಗೆ ಉಪಹಾರ ಸೇವನೆ ವೇಳೆ ಶ್ರೀನಿವಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿ ಹೀಗಿರುವ ಕಾರಣ, ಮಂದಾನ ಅವರು ತಮ್ಮ ವಿವಾಹವನ್ನು ಮುಂದೂಡಲು ನಿರ್ಧರಿಸಿದರು ಎಂದು ಹೇಳಿದ್ದಾರೆ.</p><p>‘ಶ್ರೀನಿವಾಸ್ ಅವರಿಗೆ ಎಡಭಾಗದಲ್ಲಿ ಎದೆನೋವು (ಆ್ಯಂಜಿನಾ) ಕಾಣಿಸಿಕೊಂಡಿದೆ. ಅವರ ಹೃದಯದಲ್ಲಿ ಕಿಣ್ವಗಳು ಹೆಚ್ಚಿರುವುದು (ಕಾರ್ಡಿಯಾಕ್ ಎಂಝೈಮ್ಸ್) ಇಸಿಜಿ ಹಾಗೂ ಇತರ ಪರೀಕ್ಷೆಗಳಲ್ಲಿ ಪತ್ತೆಯಾಗಿದೆ. ಹೀಗಾಗಿ ಅವರನ್ನು ನಿಗಾದಲ್ಲಿ ಇಡಲಾಗಿದ್ದು, ಅಗತ್ಯಬಿದ್ದರೆ ‘ಆ್ಯಂಜಿಯೊಗ್ರಫಿ’ ಚಿಕಿತ್ಸೆ ನೀಡಲಾಗುವುದು’ ಎಂದು ವೈದ್ಯರು ತಿಳಿಸಿದ್ದಾರೆ.</p>.ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿ ಮಿಂಚಿದ ಶ್ರೇಯಾಂಕಾ, ಜೆಮಿಮಾ ರಾಡ್ರಿಗಸ್.Video| ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂದಾನ: ಭಾವಿ ಪತಿಯೊಂದಿಗೆ ಭರ್ಜರಿ ಡ್ಯಾನ್ಸ್.Video | ಸ್ಮೃತಿ ಮಂದಾನ ಹಳದಿ ಶಾಸ್ತ್ರದಲ್ಲಿ ಸಹ ಆಟಗಾರ್ತಿಯರು: ಭರ್ಜರಿ ನೃತ್ಯ.ಸ್ಮೃತಿ ಮಂದಾನ– ಪಾಲಾಶ್ ಮುಚ್ಛಲ್ ನಿಶ್ಚಿತಾರ್ಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಂಗ್ಲಿ (ಮಹಾರಾಷ್ಟ್ರ):</strong> ಭಾರತ ಮಹಿಳಾ ಕ್ರಿಕೆಟ್ ತಂಡದ ತಾರಾ ಬ್ಯಾಟರ್ ಸ್ಮೃತಿ ಮಂದಾನ ಹಾಗೂ ಸಂಗೀತಗಾರ ಪಲಾಶ್ ಮುಚ್ಛಲ್ ಅವರ ವಿವಾಹ ಮುಂದೂಡಿಕೆಯಾಗಿದೆ. ಮಂದಾನ ಅವರ ತಂದೆ ಶ್ರೀನಿವಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ, ಭಾನುವಾರ ನಡೆಯಬೇಕಿದ್ದ ವಿವಾಹ ಸಮಾರಂಭ ರದ್ದಾಗಿದೆ.</p><p>ಮಂದಾನ ಅವರು ತಂದೆಯವರೊಂದಿಗೆ ಭಾವನಾತ್ಮಕ ಬಾಂಧವ್ಯ ಹೊಂದಿದ್ದಾರೆ. ತಂದೆಯವರ ಚೇತರಿಕೆವರೆಗೆ ಮದುವೆಯಾಗದಿರಲು ನಿರ್ಧರಿಸಿದ್ದಾರೆ ಎಂದು ಮಂದಾನ ಅವರ ಮ್ಯಾನೇಜರ್ ತುಹೀನ್ ಮಿಶ್ರಾ ಹೇಳಿದ್ದಾರೆ.</p><p>ಭಾನುವಾರ ಬೆಳಿಗ್ಗೆ ಉಪಹಾರ ಸೇವನೆ ವೇಳೆ ಶ್ರೀನಿವಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿ ಹೀಗಿರುವ ಕಾರಣ, ಮಂದಾನ ಅವರು ತಮ್ಮ ವಿವಾಹವನ್ನು ಮುಂದೂಡಲು ನಿರ್ಧರಿಸಿದರು ಎಂದು ಹೇಳಿದ್ದಾರೆ.</p><p>‘ಶ್ರೀನಿವಾಸ್ ಅವರಿಗೆ ಎಡಭಾಗದಲ್ಲಿ ಎದೆನೋವು (ಆ್ಯಂಜಿನಾ) ಕಾಣಿಸಿಕೊಂಡಿದೆ. ಅವರ ಹೃದಯದಲ್ಲಿ ಕಿಣ್ವಗಳು ಹೆಚ್ಚಿರುವುದು (ಕಾರ್ಡಿಯಾಕ್ ಎಂಝೈಮ್ಸ್) ಇಸಿಜಿ ಹಾಗೂ ಇತರ ಪರೀಕ್ಷೆಗಳಲ್ಲಿ ಪತ್ತೆಯಾಗಿದೆ. ಹೀಗಾಗಿ ಅವರನ್ನು ನಿಗಾದಲ್ಲಿ ಇಡಲಾಗಿದ್ದು, ಅಗತ್ಯಬಿದ್ದರೆ ‘ಆ್ಯಂಜಿಯೊಗ್ರಫಿ’ ಚಿಕಿತ್ಸೆ ನೀಡಲಾಗುವುದು’ ಎಂದು ವೈದ್ಯರು ತಿಳಿಸಿದ್ದಾರೆ.</p>.ಸ್ಮೃತಿ ಮಂದಾನ ವಿವಾಹ ಸಂಭ್ರಮದಲ್ಲಿ ಮಿಂಚಿದ ಶ್ರೇಯಾಂಕಾ, ಜೆಮಿಮಾ ರಾಡ್ರಿಗಸ್.Video| ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂದಾನ: ಭಾವಿ ಪತಿಯೊಂದಿಗೆ ಭರ್ಜರಿ ಡ್ಯಾನ್ಸ್.Video | ಸ್ಮೃತಿ ಮಂದಾನ ಹಳದಿ ಶಾಸ್ತ್ರದಲ್ಲಿ ಸಹ ಆಟಗಾರ್ತಿಯರು: ಭರ್ಜರಿ ನೃತ್ಯ.ಸ್ಮೃತಿ ಮಂದಾನ– ಪಾಲಾಶ್ ಮುಚ್ಛಲ್ ನಿಶ್ಚಿತಾರ್ಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>