ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಕೆಲವು ಆಟಗಾರರಿಗೆ ನಿರ್ಬಂಧ ಇಷ್ಟವಿರಲಿಲ್ಲ: ಪಮೆಂಟ್

Last Updated 11 ಮೇ 2021, 19:31 IST
ಅಕ್ಷರ ಗಾತ್ರ

ಆಕ್ಲೆಂಡ್: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ್ದ ಕೆಲವು ಭಾರತೀಯ ಅನುಭವಿ ಆಟಗಾರರಿಗೆ ಬಯೋಬಬಲ್ ಶಿಷ್ಟಾಚಾರದ ನಿರ್ಬಂಧಗಳು ಇಷ್ಟವಿರಲಿಲ್ಲ ಎಂದು ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಕೋಚ್ ಜೇಮ್ಸ್ ಪಮೆಂಟ್ ಹೇಳಿದ್ದಾರೆ.

ಈಚೆಗೆ ಆಯೋಜಿಸಲಾಗಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮುಂದೂಡಲಾಗಿದೆ. ಬಯೋಬಬಲ್‌ನಲ್ಲಿ ಕೆಲವು ಆಟಗಾರರಿಗೆ ಕೋವಿಡ್ ಸೋಂಕು ತಗುಲಿದ್ದ ಕಾರಣ ಟೂರ್ನಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು.

‘ಭಾರತದ ಕೆಲವು ಆಟಗಾರರಲ್ಲಿ ನಿರ್ಬಂಧಗಳ ಬಗ್ಗೆ ಸಹಮತವಿರಲಿಲ್ಲ. ಆದರೆ ನಮಗೆ ಯಾವುದೇ ತಕರಾರು ಇರಲಿಲ್ಲ. ಈ ವ್ಯವಸ್ಥೆಯಲ್ಲಿ ಸುರಕ್ಷಿತವಾಗಿದ್ದೆವು‘ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT