<p><strong>ಕೋಲ್ಕತ್ತ: </strong>ಭಾರತ ಕ್ರಿಕೆಟ್ ತಂಡವು ಜುಲೈನಲ್ಲಿ ಶ್ರೀಲಂಕಾದಲ್ಲಿ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಯಲ್ಲಿ ಆಡಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>‘ಜುಲೈನಲ್ಲಿ ಟಿ20 ಮತ್ತು ಏಕದಿನ ಪಂದ್ಯಗಳ ಸರಣಿಯು ಶ್ರೀಲಂಕಾದಲ್ಲಿ ಆಯೋಜನೆಗೊಳ್ಳಲಿದೆ. ಅದರಲ್ಲಿ ಭಾರತ ತಂಡವು ಆಡುವುದು‘ ಎಂದು ಭಾನುವಾರ ತಿಳಿಸಿದ್ದಾರೆ.</p>.<p>ಆದರೆ, ಈ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಕೆಲವು ಪ್ರಮುಖರು ತಂಡದಲ್ಲಿ ಇರುವುದಿಲ್ಲ. ಅದೇ ಸಮಯದಲ್ಲಿ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯೂ ನಡೆಯಲಿದ್ದು ತಂಡವು ಅಲ್ಲಿ ಆಡಲಿದೆ. ಸೆಪ್ಟೆಂಬರ್ 14ರಂದು ಟೆಸ್ಟ್ ಸರಣಿ ಮುಕ್ತಾಯವಾಗುತ್ತದೆ.</p>.<p>‘ಶ್ವೇತವರ್ಣದ ಚೆಂಡಿನ ಕ್ರಿಕೆಟ್ ಪರಿಣತರ ತಂಡವನ್ನು ನಾವು ರಚಿಸುತ್ತೇವೆ. ಅದು ಪ್ರತ್ಯೇಕವಾದ ತಂಡವಾಗಿರುತ್ತೆ’ ಎಂದು ಗಂಗೂಲಿ ಸ್ಪಷ್ಟಪಡಿಸಿದರು. ಇದರೊಂದಿಗೆ ಟೆಸ್ಟ್ ಮತ್ತು ಸೀಮಿತ ಓವರ್ಗಳ ಮಾದರಿ ಕ್ರಿಕೆಟ್ಗಳಿಗೆ ಪ್ರತ್ಯೇಕ ತಂಡಗಳ ರಚನೆಗೂ ಒತ್ತು ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಭಾರತ ಕ್ರಿಕೆಟ್ ತಂಡವು ಜುಲೈನಲ್ಲಿ ಶ್ರೀಲಂಕಾದಲ್ಲಿ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಯಲ್ಲಿ ಆಡಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>‘ಜುಲೈನಲ್ಲಿ ಟಿ20 ಮತ್ತು ಏಕದಿನ ಪಂದ್ಯಗಳ ಸರಣಿಯು ಶ್ರೀಲಂಕಾದಲ್ಲಿ ಆಯೋಜನೆಗೊಳ್ಳಲಿದೆ. ಅದರಲ್ಲಿ ಭಾರತ ತಂಡವು ಆಡುವುದು‘ ಎಂದು ಭಾನುವಾರ ತಿಳಿಸಿದ್ದಾರೆ.</p>.<p>ಆದರೆ, ಈ ಟೂರ್ನಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಕೆಲವು ಪ್ರಮುಖರು ತಂಡದಲ್ಲಿ ಇರುವುದಿಲ್ಲ. ಅದೇ ಸಮಯದಲ್ಲಿ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯೂ ನಡೆಯಲಿದ್ದು ತಂಡವು ಅಲ್ಲಿ ಆಡಲಿದೆ. ಸೆಪ್ಟೆಂಬರ್ 14ರಂದು ಟೆಸ್ಟ್ ಸರಣಿ ಮುಕ್ತಾಯವಾಗುತ್ತದೆ.</p>.<p>‘ಶ್ವೇತವರ್ಣದ ಚೆಂಡಿನ ಕ್ರಿಕೆಟ್ ಪರಿಣತರ ತಂಡವನ್ನು ನಾವು ರಚಿಸುತ್ತೇವೆ. ಅದು ಪ್ರತ್ಯೇಕವಾದ ತಂಡವಾಗಿರುತ್ತೆ’ ಎಂದು ಗಂಗೂಲಿ ಸ್ಪಷ್ಟಪಡಿಸಿದರು. ಇದರೊಂದಿಗೆ ಟೆಸ್ಟ್ ಮತ್ತು ಸೀಮಿತ ಓವರ್ಗಳ ಮಾದರಿ ಕ್ರಿಕೆಟ್ಗಳಿಗೆ ಪ್ರತ್ಯೇಕ ತಂಡಗಳ ರಚನೆಗೂ ಒತ್ತು ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>