<p><strong>ಮುಂಬೈ:</strong> ರಾಷ್ಟ್ರೀಯ ಸೀನಿಯರ್ ಆಯ್ಕೆ ಸಮಿತಿಯ ಎರಡು ಸ್ಥಾನಗಳಿಗೆ ಈ ತಿಂಗಳ ಅಂತ್ಯದೊಳಗೆ ನೇಮಕ ಮಾಡಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ತಿಳಿಸಿದ್ದಾರೆ.</p>.<p>ಸಮಿತಿಯ ಅಧ್ಯಕ್ಷ ಹಾಗೂ ದಕ್ಷಿಣ ವಲಯದ ಎಂ.ಎಸ್.ಕೆ. ಪ್ರಸಾದ್ ಮತ್ತು ಕೇಂದ್ರ ವಲಯದ ಗಗನ್ ಖೋಡಾ ಅವರ ಸ್ಥಾನಕ್ಕೆ ಮಂಡಳಿಯು ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದೆ. ಸಮಿತಿಯು ಐವರು ಸದಸ್ಯರನ್ನು ಒಳಗೊಂಡಿದೆ.</p>.<p>ಮಂಡಳಿಯು ಇತ್ತೀಚೆಗಷ್ಟೇ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಯನ್ನು ಹೊಸದಾಗಿ ರೂಪಿಸಿದ್ದು, ಮಾಜಿ ಆಟಗಾರರಾದ ಮದನ್ ಲಾಲ್, ರುದ್ರಪ್ರತಾಪ್ ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನು ನೇಮಕ ಮಾಡಿತ್ತು. ‘ಹೊಸ ಸಿಎಸಿಯನ್ನು ರೂಪಿಸಲಾಗಿದೆ. ಈ ತಿಂಗಳ ಕೊನೆಯೊಳಗೆ ಅವರು ಇಬ್ಬರು ನೂತನ ಆಯ್ಕೆಗಾರರನ್ನು ಆರಿಸಲಿದ್ದಾರೆ’ ಎಂದು ಗಂಗೂಲಿ ತಿಳಿಸಿದರು.</p>.<p>ಅಜಿತ್ ಅಗರಕರ್, ಲಕ್ಷ್ಮಣ್ ಶಿವರಾಮಕೃಷ್ಣನ್, ಅಮೇಯ್ ಖುರಾಸಿಯಾ ಮತ್ತು ನಯನ್ ಮೋಂಗಿಯಾ ಆಯ್ಕೆಗಾರ ಸ್ಥಾನಕ್ಕೆ ಅರ್ಜಿ ಹಾಕಿದವರಲ್ಲಿ ಒಳಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರಾಷ್ಟ್ರೀಯ ಸೀನಿಯರ್ ಆಯ್ಕೆ ಸಮಿತಿಯ ಎರಡು ಸ್ಥಾನಗಳಿಗೆ ಈ ತಿಂಗಳ ಅಂತ್ಯದೊಳಗೆ ನೇಮಕ ಮಾಡಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ತಿಳಿಸಿದ್ದಾರೆ.</p>.<p>ಸಮಿತಿಯ ಅಧ್ಯಕ್ಷ ಹಾಗೂ ದಕ್ಷಿಣ ವಲಯದ ಎಂ.ಎಸ್.ಕೆ. ಪ್ರಸಾದ್ ಮತ್ತು ಕೇಂದ್ರ ವಲಯದ ಗಗನ್ ಖೋಡಾ ಅವರ ಸ್ಥಾನಕ್ಕೆ ಮಂಡಳಿಯು ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದೆ. ಸಮಿತಿಯು ಐವರು ಸದಸ್ಯರನ್ನು ಒಳಗೊಂಡಿದೆ.</p>.<p>ಮಂಡಳಿಯು ಇತ್ತೀಚೆಗಷ್ಟೇ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಯನ್ನು ಹೊಸದಾಗಿ ರೂಪಿಸಿದ್ದು, ಮಾಜಿ ಆಟಗಾರರಾದ ಮದನ್ ಲಾಲ್, ರುದ್ರಪ್ರತಾಪ್ ಸಿಂಗ್ ಮತ್ತು ಸುಲಕ್ಷಣಾ ನಾಯಕ್ ಅವರನ್ನು ನೇಮಕ ಮಾಡಿತ್ತು. ‘ಹೊಸ ಸಿಎಸಿಯನ್ನು ರೂಪಿಸಲಾಗಿದೆ. ಈ ತಿಂಗಳ ಕೊನೆಯೊಳಗೆ ಅವರು ಇಬ್ಬರು ನೂತನ ಆಯ್ಕೆಗಾರರನ್ನು ಆರಿಸಲಿದ್ದಾರೆ’ ಎಂದು ಗಂಗೂಲಿ ತಿಳಿಸಿದರು.</p>.<p>ಅಜಿತ್ ಅಗರಕರ್, ಲಕ್ಷ್ಮಣ್ ಶಿವರಾಮಕೃಷ್ಣನ್, ಅಮೇಯ್ ಖುರಾಸಿಯಾ ಮತ್ತು ನಯನ್ ಮೋಂಗಿಯಾ ಆಯ್ಕೆಗಾರ ಸ್ಥಾನಕ್ಕೆ ಅರ್ಜಿ ಹಾಕಿದವರಲ್ಲಿ ಒಳಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>