<p><strong>ಕೋಲ್ಕತ್ತ</strong>: ಭಾರತ ಕ್ರಿಕೆಟ್ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅವರಿಗೆ ತಮ್ಮ ತಂಡಕ್ಕೆ ಎಂತಹ ಕೋಚ್ ಬೇಕು ಎಂದು ಹೇಳುವ ಅಧಿಕಾರ ಇದೆ ಎಂದು ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>ಈಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಅವರು ಭಾರತ ತಂಡಕ್ಕೆ ರವಿಶಾಸ್ತ್ರೀಯವರೇ ಕೋಚ್ ಆಗಿ ಮುಂದುವರಿಯಲಿ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನು ಕೆಲವರು ಟೀಕಿಸಿದ್ದರು. ಆದರೆ ಕೊಹ್ಲಿಯ ಮಾತನ್ನು ಗಂಗೂಲಿ ಸಮರ್ಥಿಸಿಕೊಂಡಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪೃಥ್ವಿ ಶಾ ಅವರಿಗೆ ವಿಧಿಸಲಾಗಿರುವ ಅಮಾನತು ಶಿಕ್ಷೆಯ ಕುರಿತು ಪ್ರತಿಕ್ರಿಯಿಸಿರುವ ಗಂಗೂಲಿ, ‘ಕೆಮ್ಮಿನ ಔಷಧಿಯಲ್ಲಿ ಹಲವಾರು ಮದ್ದಿನ ಅಂಶಗಳು ಇರುತ್ತವೆ. ಪೃಥ್ವಿ ಶಾ ಪ್ರಕರಣದಲ್ಲಿ ನಡೆದಿರುವುದರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ’ ಎಂದಿದ್ದಾರೆ.</p>.<p>2017ರಲ್ಲಿ ತಂಡಕ್ಕೆ ಕೋಚ್ ಆಯ್ಕೆ ಮಾಡಿದ್ದ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಯಲ್ಲಿ ಗಂಗೂಲಿ, ಸಚಿನ್ ತೆಂಡೂಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ ಇದ್ದರು. ಈ ಸಲ ಕೋಚ್ ಆಯ್ಕೆ ಮಾಡಲು ಸಿಎಸಿಯಲ್ಲಿ ಕಪಿಲ್ ದೇವ್, ಅನ್ಷುಮನ್ ಗಾಯಕವಾಡ್ ಮತ್ತು ಶಾಂತಾ ರಂಗಸ್ವಾಮಿ ಅವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಭಾರತ ಕ್ರಿಕೆಟ್ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅವರಿಗೆ ತಮ್ಮ ತಂಡಕ್ಕೆ ಎಂತಹ ಕೋಚ್ ಬೇಕು ಎಂದು ಹೇಳುವ ಅಧಿಕಾರ ಇದೆ ಎಂದು ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>ಈಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಅವರು ಭಾರತ ತಂಡಕ್ಕೆ ರವಿಶಾಸ್ತ್ರೀಯವರೇ ಕೋಚ್ ಆಗಿ ಮುಂದುವರಿಯಲಿ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನು ಕೆಲವರು ಟೀಕಿಸಿದ್ದರು. ಆದರೆ ಕೊಹ್ಲಿಯ ಮಾತನ್ನು ಗಂಗೂಲಿ ಸಮರ್ಥಿಸಿಕೊಂಡಿದ್ದಾರೆ.</p>.<p>ಇದೇ ಸಂದರ್ಭದಲ್ಲಿ ಪೃಥ್ವಿ ಶಾ ಅವರಿಗೆ ವಿಧಿಸಲಾಗಿರುವ ಅಮಾನತು ಶಿಕ್ಷೆಯ ಕುರಿತು ಪ್ರತಿಕ್ರಿಯಿಸಿರುವ ಗಂಗೂಲಿ, ‘ಕೆಮ್ಮಿನ ಔಷಧಿಯಲ್ಲಿ ಹಲವಾರು ಮದ್ದಿನ ಅಂಶಗಳು ಇರುತ್ತವೆ. ಪೃಥ್ವಿ ಶಾ ಪ್ರಕರಣದಲ್ಲಿ ನಡೆದಿರುವುದರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ’ ಎಂದಿದ್ದಾರೆ.</p>.<p>2017ರಲ್ಲಿ ತಂಡಕ್ಕೆ ಕೋಚ್ ಆಯ್ಕೆ ಮಾಡಿದ್ದ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಯಲ್ಲಿ ಗಂಗೂಲಿ, ಸಚಿನ್ ತೆಂಡೂಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ ಇದ್ದರು. ಈ ಸಲ ಕೋಚ್ ಆಯ್ಕೆ ಮಾಡಲು ಸಿಎಸಿಯಲ್ಲಿ ಕಪಿಲ್ ದೇವ್, ಅನ್ಷುಮನ್ ಗಾಯಕವಾಡ್ ಮತ್ತು ಶಾಂತಾ ರಂಗಸ್ವಾಮಿ ಅವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>