ಮಂಗಳವಾರ ಪ್ರತಿಕ್ರಿಯಿಸಿದ್ದ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಕೂಡ, ಚತುಷ್ಕೋನ ಟೂರ್ನಿ ಆಯೋಜನೆ ಕುರಿತು ಐಸಿಸಿಯೊಂದಿಗೆ ಚರ್ಚಿಸಲು ಸಿದ್ಧ ಎಂದು ಹೇಳಿತ್ತು. ಗಂಗೂಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಖಜಾಂಚಿ ಅರುಣ್ ಧುಮಾಲ್ ಅವರ ನಿಯೋಗವು ಈಚೆಗೆ ಲಂಡನ್ನಲ್ಲಿ ಇಸಿಬಿಯ ಮುಖ್ಯಸ್ಥ ಕಾಲಿನ್ ಗ್ರೇವ್ಸ್ ಅವರೊಂದಿಗೆ ಚರ್ಚೆ ಮಾಡಿತ್ತು.