<p><strong>ಕೋಲ್ಕತ್ತ:</strong> ಕ್ವಿಂಟನ್ ಡಿ ಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಟಗಾರರು ಸೋಮವಾರ ಕೋಲ್ಕತ್ತಕ್ಕೆ ಬಂದಿಳಿದಿದ್ದಾರೆ.</p>.<p>ಕೊರೊನಾ ಭೀತಿಯಿಂದಾಗಿ ಭಾರತದ ಎದುರಿನ ಎರಡು ಮತ್ತು ಮೂರನೇ ಏಕದಿನ ಪಂದ್ಯಗಳು ರದ್ದಾಗಿದ್ದವು. ಹೀಗಾಗಿ ಆಟಗಾರರು ಮತ್ತು ನೆರವು ಸಿಬ್ಬಂದಿ ಎರಡನೇ ಪಂದ್ಯ ನಡೆಯಬೇಕಿದ್ದ ಲಖನೌದಲ್ಲೇ ತಂಗಿದ್ದರು.</p>.<p>ಸೋಮವಾರ ಸುಭಾಷ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರನ್ನು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಅಭಿಷೇಕ್ ದಾಲ್ಮಿಯಾ, ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿ ಹಾಗೂ ಜಂಟಿ ಕಾರ್ಯದರ್ಶಿ ದೇವವ್ರತ ದಾಸ್ ಅವರು ಬರಮಾಡಿಕೊಂಡರು.</p>.<p>‘ಆಟಗಾರರು ಮತ್ತು ನೆರವು ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಮೂರು ಮಂದಿಯ ವೈದ್ಯಕೀಯ ತಂಡ ಎಲ್ಲರ ಮೇಲೆ ನಿಗಾ ಇಟ್ಟಿದೆ’ ಎಂದು ವೈದ್ಯಕೀಯ ಸಮಿತಿಯ ಮುಖ್ಯಸ್ಥ ಪ್ರದೀಪ್ ಡೇ ತಿಳಿಸಿದ್ದಾರೆ.</p>.<p>‘ಆಟಗಾರರು ಮತ್ತು ಸಿಬ್ಬಂದಿಗೆ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅವರು ತಂಗುವ ಕೊಠಡಿಗಳಲ್ಲಿ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ನಮ್ಮ ವೈದ್ಯಕೀಯ ತಂಡವೂ ಹೋಟೆಲ್ನಲ್ಲೇ ಇರಲಿದೆ’ ಎಂದು ಅಭಿಷೇಕ್ ಹೇಳಿದ್ದಾರೆ.</p>.<p>ಆಟಗಾರರು ಮಂಗಳವಾರ ಬೆಳಿಗ್ಗೆ ಕೋಲ್ಕತ್ತದಿಂದ ದುಬೈಗೆ ತೆರಳಲಿದ್ದಾರೆ. ಅಲ್ಲಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.</p>.<p>ತಂಡವು ಈ ಮೊದಲು ಲಖನೌದಿಂದ ದೆಹಲಿ ಮಾರ್ಗವಾಗಿ ತವರಿಗೆ ಹೋಗಬೇಕಿತ್ತು. ಕೋಲ್ಕತ್ತದಲ್ಲಿ ಇದುವರೆಗೆ ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಈ ನಗರವನ್ನು ಸುರಕ್ಷಿತ ತಾಣವೆಂದು ಆಯ್ಕೆ ಮಾಡಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕ್ವಿಂಟನ್ ಡಿ ಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಟಗಾರರು ಸೋಮವಾರ ಕೋಲ್ಕತ್ತಕ್ಕೆ ಬಂದಿಳಿದಿದ್ದಾರೆ.</p>.<p>ಕೊರೊನಾ ಭೀತಿಯಿಂದಾಗಿ ಭಾರತದ ಎದುರಿನ ಎರಡು ಮತ್ತು ಮೂರನೇ ಏಕದಿನ ಪಂದ್ಯಗಳು ರದ್ದಾಗಿದ್ದವು. ಹೀಗಾಗಿ ಆಟಗಾರರು ಮತ್ತು ನೆರವು ಸಿಬ್ಬಂದಿ ಎರಡನೇ ಪಂದ್ಯ ನಡೆಯಬೇಕಿದ್ದ ಲಖನೌದಲ್ಲೇ ತಂಗಿದ್ದರು.</p>.<p>ಸೋಮವಾರ ಸುಭಾಷ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರನ್ನು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷ ಅಭಿಷೇಕ್ ದಾಲ್ಮಿಯಾ, ಕಾರ್ಯದರ್ಶಿ ಸ್ನೇಹಶಿಶ್ ಗಂಗೂಲಿ ಹಾಗೂ ಜಂಟಿ ಕಾರ್ಯದರ್ಶಿ ದೇವವ್ರತ ದಾಸ್ ಅವರು ಬರಮಾಡಿಕೊಂಡರು.</p>.<p>‘ಆಟಗಾರರು ಮತ್ತು ನೆರವು ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಮೂರು ಮಂದಿಯ ವೈದ್ಯಕೀಯ ತಂಡ ಎಲ್ಲರ ಮೇಲೆ ನಿಗಾ ಇಟ್ಟಿದೆ’ ಎಂದು ವೈದ್ಯಕೀಯ ಸಮಿತಿಯ ಮುಖ್ಯಸ್ಥ ಪ್ರದೀಪ್ ಡೇ ತಿಳಿಸಿದ್ದಾರೆ.</p>.<p>‘ಆಟಗಾರರು ಮತ್ತು ಸಿಬ್ಬಂದಿಗೆ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅವರು ತಂಗುವ ಕೊಠಡಿಗಳಲ್ಲಿ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ನಮ್ಮ ವೈದ್ಯಕೀಯ ತಂಡವೂ ಹೋಟೆಲ್ನಲ್ಲೇ ಇರಲಿದೆ’ ಎಂದು ಅಭಿಷೇಕ್ ಹೇಳಿದ್ದಾರೆ.</p>.<p>ಆಟಗಾರರು ಮಂಗಳವಾರ ಬೆಳಿಗ್ಗೆ ಕೋಲ್ಕತ್ತದಿಂದ ದುಬೈಗೆ ತೆರಳಲಿದ್ದಾರೆ. ಅಲ್ಲಿಂದ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.</p>.<p>ತಂಡವು ಈ ಮೊದಲು ಲಖನೌದಿಂದ ದೆಹಲಿ ಮಾರ್ಗವಾಗಿ ತವರಿಗೆ ಹೋಗಬೇಕಿತ್ತು. ಕೋಲ್ಕತ್ತದಲ್ಲಿ ಇದುವರೆಗೆ ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಈ ನಗರವನ್ನು ಸುರಕ್ಷಿತ ತಾಣವೆಂದು ಆಯ್ಕೆ ಮಾಡಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>