ಅಮೆರಿಕದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಜಾರ್ಜ್ ಫ್ಲಾಯ್ಡ್ ಬಲಿಯಾದ ನಂತರ ಜನಾಂಗೀಯ ತಾರತಮ್ಯದ ವಿರುದ್ಧ ಹೋರಾಟ ಭುಗಿಲೆದ್ದಿದೆ. ಕ್ರಿಕೆಟ್ನಲ್ಲಿಯೂ ಇಂತಹ ತಾರತಮ್ಯದ ಕುರಿತು ವೆಸ್ಟ್ ಇಂಡೀಸ್ನ ದಿಗ್ಗಜ ಕ್ರಿಸ್ ಗೇಲ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲಿಯೇ ತಮಿಳುನಾಡಿನ ಕ್ರಿಕೆಟಿಗ ಅಭಿನವ್ ಮುಕುಂದ್ ತಮ್ಮೊಂದಿಗೆ ನಡೆದ ಘಟನೆಯನ್ನು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕದ ಹಿರಿಯ ಕ್ರಿಕೆಟಿಗ ದೊಡ್ಡಗಣೇಶ್ ಕೂಡ ಅನುಭವ ಹಂಚಿಕೊಂಡಿದ್ದಾರೆ.