<p><strong>ಮುಂಬೈ: </strong>ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಿಶೇಷ ಸಾಮಾನ್ಯ ಸಭೆಯಲ್ಲಿ ಮಂಡಳಿಯ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಹಾಗೂ ಖಜಾಂಚಿಯಾಗಿ ಪ್ರಭತೇಜ್ ಸಿಂಗ್ ಭಾಟಿಯಾ ಅವರು ಆಯ್ಕೆಯಾಗುವ ಸಾಧ್ಯತೆ ಇದೆ.</p><p>ಸಭೆಯು ಮುಂಬೈನಲ್ಲಿ ಭಾನುವಾರ ನಡೆಯಲಿದೆ.</p><p>ಬಿಸಿಸಿಐನಲ್ಲಿ ತೆರವಾಗಿದ್ದ ಪ್ರಮುಖ ಸ್ಥಾನಗಳಿಗೆ ಸೈಕಿಯಾ ಮತ್ತು ಭಾಟಿಯಾ ಅವರಷ್ಟೇ ಸ್ಪರ್ಧಿಸಿದ್ದಾರೆ. ಮಂಡಳಿಯ ಚುನಾವಣಾಧಿಕಾರಿ ಮತ್ತು ಭಾರತದ ಮಾಜಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಅವರು ಪಟ್ಟಿಯನ್ನು ಮಂಗಳವಾರ ಅಂತಿಮಗೊಳಿಸಿದ್ದಾರೆ.</p><p>ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗಿತ್ತು. ಹೀಗಾಗಿ, ಸೈಕಿಯಾ ಅವರು ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p><p>ಬಿಸಿಸಿಐ ಖಜಾಂಚಿಯಾಗಿದ್ದ ಆಶಿಷ್ ಶೆಲ್ಲಾರ್ ಅವರು ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಆದ್ದರಿಂದ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನದಲ್ಲಿ ಭಾಟಿಯಾ ಮುಂದುವರಿಯಲಿದ್ದಾರೆ.</p>.BCCI ಕಾರ್ಯದರ್ಶಿ: ಜಯ್ ಶಾ ಸ್ಥಾನಕ್ಕೆ ಅರುಣ್ ಜೇಟ್ಲಿ ಪುತ್ರ ರೋಹನ್?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಿಶೇಷ ಸಾಮಾನ್ಯ ಸಭೆಯಲ್ಲಿ ಮಂಡಳಿಯ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಹಾಗೂ ಖಜಾಂಚಿಯಾಗಿ ಪ್ರಭತೇಜ್ ಸಿಂಗ್ ಭಾಟಿಯಾ ಅವರು ಆಯ್ಕೆಯಾಗುವ ಸಾಧ್ಯತೆ ಇದೆ.</p><p>ಸಭೆಯು ಮುಂಬೈನಲ್ಲಿ ಭಾನುವಾರ ನಡೆಯಲಿದೆ.</p><p>ಬಿಸಿಸಿಐನಲ್ಲಿ ತೆರವಾಗಿದ್ದ ಪ್ರಮುಖ ಸ್ಥಾನಗಳಿಗೆ ಸೈಕಿಯಾ ಮತ್ತು ಭಾಟಿಯಾ ಅವರಷ್ಟೇ ಸ್ಪರ್ಧಿಸಿದ್ದಾರೆ. ಮಂಡಳಿಯ ಚುನಾವಣಾಧಿಕಾರಿ ಮತ್ತು ಭಾರತದ ಮಾಜಿ ಚುನಾವಣಾ ಆಯುಕ್ತ ಅಚಲ್ ಕುಮಾರ್ ಅವರು ಪಟ್ಟಿಯನ್ನು ಮಂಗಳವಾರ ಅಂತಿಮಗೊಳಿಸಿದ್ದಾರೆ.</p><p>ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗಿತ್ತು. ಹೀಗಾಗಿ, ಸೈಕಿಯಾ ಅವರು ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.</p><p>ಬಿಸಿಸಿಐ ಖಜಾಂಚಿಯಾಗಿದ್ದ ಆಶಿಷ್ ಶೆಲ್ಲಾರ್ ಅವರು ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಆದ್ದರಿಂದ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಸ್ಥಾನದಲ್ಲಿ ಭಾಟಿಯಾ ಮುಂದುವರಿಯಲಿದ್ದಾರೆ.</p>.BCCI ಕಾರ್ಯದರ್ಶಿ: ಜಯ್ ಶಾ ಸ್ಥಾನಕ್ಕೆ ಅರುಣ್ ಜೇಟ್ಲಿ ಪುತ್ರ ರೋಹನ್?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>