ಟಿ–20 ವಿಶ್ವಕಪ್ನಲ್ಲಿ ತಂಡದ ಕಳಪೆ ಪ್ರದರ್ಶನದ ಬಳಿಕ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ವಜಾ ಮಾಡಿ ಬಳಿಕ ಮತ್ತೆ ಅಧಿಕಾರ ನೀಡಲಾಗಿತ್ತು. ಕುಟುಕು ಕಾರ್ಯಾಚರಣೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬೂಮ್ರಾ ಅವರಂತಹ ಆಟಗಾರರ ಮೇಲೆ ಆಪಾದನೆಗಳನ್ನು ಮಾಡಿದ್ದಾರೆ. ಅಲ್ಲದೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಅವರೊಂದಿಗಿನ ಆಂತರಿಕ ಚರ್ಚೆಗಳನ್ನು ಅವರು ಬಹಿರಂಗಪಡಿಸಿದ್ದಾರೆ.