<p><strong>ಕೇಪ್ಟೌನ್</strong>: ಮುಂಬರುವ ಟಿ20 ಕ್ರಿಕೆಟ್ ವಿಶ್ವಕಪ್ನಲ್ಲಿ ಸ್ಪಿನ್ನರ್ಗಳ ಪಾತ್ರ ನಿರ್ಣಾಯಕವಾಗಲಿದೆ ಎಂದು ದಕ್ಷಿಣ ಆಫ್ರಿಕಾದ ಬೌಲರ್ ಕೇಶವ್ ಮಹಾರಾಜ್ ಹೇಳಿದ್ದಾರೆ.</p><p>ಚುಟುಕು ವಿಶ್ವಕಪ್ನ 9ನೇ ಆವೃತ್ತಿಯು ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರ ವರೆಗೆ ನಡೆಯಲಿದೆ.</p><p>ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಟೂರ್ನಿ ಕುರಿತು ಮಾತನಾಡಿರುವ ಮಹಾರಾಜ್, ಮುಂಬರುವ ವಿಶ್ವಕಪ್ನಲ್ಲಿ ಸ್ಪಿನ್ನರ್ಗಳು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಉತ್ತಮ ಪಿಚ್ ಮತ್ತು ಚಿಕ್ಕ ಬೌಂಡರಿಯುಳ್ಳ ಕ್ರೀಡಾಂಗಣಗಳಲ್ಲಿ ನಿಯಂತ್ರಣ ಸಾಧಿಸಲು ಪ್ರತಿ ತಂಡಕ್ಕೂ ಸ್ಪಿನ್ನರ್ಗಳ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.</p><p>ಕ್ರಿಕೆಟ್ನ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಚುಟುಕು ಮಾದರಿಯು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿರುವ ಅವರು, ಟಿ20 ವೇದಿಕೆಗಳು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಸ್ಪಿನ್ನರ್ಗಳಿಗೆ ಇನ್ನಷ್ಟು ಮಹತ್ವದ ಪಾತ್ರ ನೀಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ನನಗೆ ಐಪಿಎಲ್ ಅನುಭವವಿಲ್ಲ. ಆದರೆ, ದಕ್ಷಿಣ ಆಫ್ರಿಕಾ 20 ಲೀಗ್ನಲ್ಲಿ ಆಡಿದ್ದೇನೆ. ಇದು ಕ್ರಿಕೆಟ್ ದೃಷ್ಟಿಯಿಂದ ತುಂಬಾ ಉತ್ತಮವಾದದ್ದಾಗಿದೆ. ಅಭಿಮಾನಿಗಳನ್ನು ಆಕರ್ಷಿಸುವ ಜೊತೆಗೆ, ಸ್ಥಳೀಯ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಸಮಯ ಅನುವುಮಾಡಿಕೊಟ್ಟರೆ, ಶೀಘ್ರದಲ್ಲೇ ಭಾರತಕ್ಕೆ ಬರುತ್ತೇನೆ. ಅಯೋಧ್ಯೆ ಪ್ರವಾಸ ಕೈಗೊಳ್ಳಲು ಬಯಸುತ್ತೇನೆ ಎಂದೂ ಹೇಳಿದ್ದಾರೆ.</p><p>ಈವರೆಗೆ 27 ಟಿ20 ಪಂದ್ಯಗಳಲ್ಲಿ ಆಡಿರುವ ಮಹಾರಾಜ್, 24 ವಿಕೆಟ್ ಪಡೆದಿದ್ದಾರೆ.</p><p>ಮಹಾರಾಜ್ ಅವರ ಪೂರ್ವಜರು ಉತ್ತರ ಪ್ರದೇಶದ ಸುಲ್ತಾನ್ಪುರದವರು. ಅವರು 1874ರಲ್ಲಿ ಡರ್ಬನ್ಗೆ ವಲಸೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇಪ್ಟೌನ್</strong>: ಮುಂಬರುವ ಟಿ20 ಕ್ರಿಕೆಟ್ ವಿಶ್ವಕಪ್ನಲ್ಲಿ ಸ್ಪಿನ್ನರ್ಗಳ ಪಾತ್ರ ನಿರ್ಣಾಯಕವಾಗಲಿದೆ ಎಂದು ದಕ್ಷಿಣ ಆಫ್ರಿಕಾದ ಬೌಲರ್ ಕೇಶವ್ ಮಹಾರಾಜ್ ಹೇಳಿದ್ದಾರೆ.</p><p>ಚುಟುಕು ವಿಶ್ವಕಪ್ನ 9ನೇ ಆವೃತ್ತಿಯು ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರ ವರೆಗೆ ನಡೆಯಲಿದೆ.</p><p>ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಟೂರ್ನಿ ಕುರಿತು ಮಾತನಾಡಿರುವ ಮಹಾರಾಜ್, ಮುಂಬರುವ ವಿಶ್ವಕಪ್ನಲ್ಲಿ ಸ್ಪಿನ್ನರ್ಗಳು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಉತ್ತಮ ಪಿಚ್ ಮತ್ತು ಚಿಕ್ಕ ಬೌಂಡರಿಯುಳ್ಳ ಕ್ರೀಡಾಂಗಣಗಳಲ್ಲಿ ನಿಯಂತ್ರಣ ಸಾಧಿಸಲು ಪ್ರತಿ ತಂಡಕ್ಕೂ ಸ್ಪಿನ್ನರ್ಗಳ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.</p><p>ಕ್ರಿಕೆಟ್ನ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಚುಟುಕು ಮಾದರಿಯು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿರುವ ಅವರು, ಟಿ20 ವೇದಿಕೆಗಳು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಸ್ಪಿನ್ನರ್ಗಳಿಗೆ ಇನ್ನಷ್ಟು ಮಹತ್ವದ ಪಾತ್ರ ನೀಡಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ನನಗೆ ಐಪಿಎಲ್ ಅನುಭವವಿಲ್ಲ. ಆದರೆ, ದಕ್ಷಿಣ ಆಫ್ರಿಕಾ 20 ಲೀಗ್ನಲ್ಲಿ ಆಡಿದ್ದೇನೆ. ಇದು ಕ್ರಿಕೆಟ್ ದೃಷ್ಟಿಯಿಂದ ತುಂಬಾ ಉತ್ತಮವಾದದ್ದಾಗಿದೆ. ಅಭಿಮಾನಿಗಳನ್ನು ಆಕರ್ಷಿಸುವ ಜೊತೆಗೆ, ಸ್ಥಳೀಯ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶಗಳನ್ನು ಕಲ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಸಮಯ ಅನುವುಮಾಡಿಕೊಟ್ಟರೆ, ಶೀಘ್ರದಲ್ಲೇ ಭಾರತಕ್ಕೆ ಬರುತ್ತೇನೆ. ಅಯೋಧ್ಯೆ ಪ್ರವಾಸ ಕೈಗೊಳ್ಳಲು ಬಯಸುತ್ತೇನೆ ಎಂದೂ ಹೇಳಿದ್ದಾರೆ.</p><p>ಈವರೆಗೆ 27 ಟಿ20 ಪಂದ್ಯಗಳಲ್ಲಿ ಆಡಿರುವ ಮಹಾರಾಜ್, 24 ವಿಕೆಟ್ ಪಡೆದಿದ್ದಾರೆ.</p><p>ಮಹಾರಾಜ್ ಅವರ ಪೂರ್ವಜರು ಉತ್ತರ ಪ್ರದೇಶದ ಸುಲ್ತಾನ್ಪುರದವರು. ಅವರು 1874ರಲ್ಲಿ ಡರ್ಬನ್ಗೆ ವಲಸೆ ಹೋಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>