<p><strong>ನವದೆಹಲಿ:</strong> ಭಾರತ ಟ್ವೆಂಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು 'ಸ್ಪೋರ್ಟ್ಸ್ ಹರ್ನಿಯಾ' (ಕಿಬೊಟ್ಟೆಯ ಸ್ನಾಯು ದುರ್ಬಲಗೊಳ್ಳುವುದು) ಸಂಬಂಧಿತ ನೋವಿನ ಚಿಕಿತ್ಸೆಗಾಗಿ ತಜ್ಞರನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. </p><p>33 ವರ್ಷದ ಸೂರ್ಯಕುಮಾರ್ ಯಾದವ್ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. </p><p>2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಸೂರ್ಯಕುಮಾರ್ ಯಾದವ್, 700ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿದ್ದರು. </p><p>ಮುಂಬೈ ಟಿ20 ಲೀಗ್ ಸಂದರ್ಭದಲ್ಲಿ ಸೂರ್ಯ ಅವರಲ್ಲಿ ನೋವು ಉಲ್ಬಣಿಸಿತ್ತೇ ಎಂಬುದು ತಿಳಿದು ಬಂದಿಲ್ಲ. ಕಳೆದ ಮೂರು ತಿಂಗಳಿಂದ ನೋವಿನ ಅರಿವಿಲ್ಲದೆ ಸಕ್ರಿಯ ಕ್ರಿಕೆಟ್ನಲ್ಲಿ ನಿರತರಾಗಿದ್ದರು. </p><p>ಆಗಸ್ಟ್-ಸೆಪ್ಟೆಂಬರ್ ಅವಧಿಗೂ ಮುನ್ನ ಟಿ20 ಕ್ರಿಕೆಟ್ ಇಲ್ಲದ ಕಾರಣ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಸೂರ್ಯಕುಮಾರ್ ಗುಣಮುಖರಾಗಲು ಬೇಕಾದಷ್ಟು ಸಮಯ ಸಿಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. </p> .ಭಾರತ ಟೆಸ್ಟ್ ತಂಡದ ನಾಯಕತ್ವ ಬೇಡವೆಂದಿದ್ದ ಬೂಮ್ರಾ.ನಾಲ್ಕು ದಿನಗಳ ಟೆಸ್ಟ್ಗೆ ಐಸಿಸಿ ಅಸ್ತು; ಆದರೆ 5 ದಿನ ಆಡಲಿರುವ ಭಾರತ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಟ್ವೆಂಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು 'ಸ್ಪೋರ್ಟ್ಸ್ ಹರ್ನಿಯಾ' (ಕಿಬೊಟ್ಟೆಯ ಸ್ನಾಯು ದುರ್ಬಲಗೊಳ್ಳುವುದು) ಸಂಬಂಧಿತ ನೋವಿನ ಚಿಕಿತ್ಸೆಗಾಗಿ ತಜ್ಞರನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. </p><p>33 ವರ್ಷದ ಸೂರ್ಯಕುಮಾರ್ ಯಾದವ್ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. </p><p>2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಸೂರ್ಯಕುಮಾರ್ ಯಾದವ್, 700ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿದ್ದರು. </p><p>ಮುಂಬೈ ಟಿ20 ಲೀಗ್ ಸಂದರ್ಭದಲ್ಲಿ ಸೂರ್ಯ ಅವರಲ್ಲಿ ನೋವು ಉಲ್ಬಣಿಸಿತ್ತೇ ಎಂಬುದು ತಿಳಿದು ಬಂದಿಲ್ಲ. ಕಳೆದ ಮೂರು ತಿಂಗಳಿಂದ ನೋವಿನ ಅರಿವಿಲ್ಲದೆ ಸಕ್ರಿಯ ಕ್ರಿಕೆಟ್ನಲ್ಲಿ ನಿರತರಾಗಿದ್ದರು. </p><p>ಆಗಸ್ಟ್-ಸೆಪ್ಟೆಂಬರ್ ಅವಧಿಗೂ ಮುನ್ನ ಟಿ20 ಕ್ರಿಕೆಟ್ ಇಲ್ಲದ ಕಾರಣ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಸೂರ್ಯಕುಮಾರ್ ಗುಣಮುಖರಾಗಲು ಬೇಕಾದಷ್ಟು ಸಮಯ ಸಿಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. </p> .ಭಾರತ ಟೆಸ್ಟ್ ತಂಡದ ನಾಯಕತ್ವ ಬೇಡವೆಂದಿದ್ದ ಬೂಮ್ರಾ.ನಾಲ್ಕು ದಿನಗಳ ಟೆಸ್ಟ್ಗೆ ಐಸಿಸಿ ಅಸ್ತು; ಆದರೆ 5 ದಿನ ಆಡಲಿರುವ ಭಾರತ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>