<p><strong>ರಾವಲ್ಪಿಂಡಿ:</strong> ಪಾಕಿಸ್ತಾನ ಪ್ರವಾಸದಲ್ಲಿರುವ ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸರ್ಕಾರವು ಸೇನೆಗೆ ವಹಿಸಿಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಹೇಳಿದ್ದಾರೆ. </p><p>ಇತ್ತೀಚೆಗೆ ಇಸ್ಲಾಮಾಬಾದ್ನಲ್ಲಿ ಆತ್ಮಾಹುತಿ ಬಾಂಬ್ ದಾಳಿಯಾಗಿತ್ತು. ನಂತರ ಶ್ರೀಲಂಕಾ ಆಟಗಾರರು ಭದ್ರತಾ ಕಾರಣದಿಂದ ಪಾಕಿಸ್ತಾನ ತೊರೆಯಲು ನಿರ್ಧರಿಸಿದ್ದರು. ಆದರೆ, ಶ್ರೀಲಂಕಾ ಸರ್ಕಾರ ಮತ್ತು ಕ್ರಿಕೆಟ್ ಮಂಡಳಿಯ ನಿರ್ಧಾರದಂತೆ ಉಳಿದ ಪಂದ್ಯಗಳಲ್ಲಿ ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ. </p><p>ಪ್ರವಾಸಿ ಶ್ರೀಲಂಕಾ ತಂಡದ ಭದ್ರತಾ ಹೊಣೆಯನ್ನು ಸೇನೆಗೆ ವಹಿಸಿಲಾಗಿದೆ. ಪೊಲೀಸರು ಕೂಡ ಅವರಿಗೆ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. </p><p>ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ಆಟಗಾರರು ತವರಿಗೆ ಮರಳಲು ಸಿದ್ದರಾಗಿದ್ದರು. ಉಭಯ ದೇಶಗಳ ನಾಯಕರ ಸಹಕಾರದಿಂದ ಟೂರ್ನಿ ಮುಂದುವರಿಯುತ್ತಿದೆ. ಸೇನಾ ಮುಖ್ಯಸ್ಥ ಮುನೀರ್ ಅವರು ಆಟಗಾರರ ಭದ್ರತೆಯ ಕುರಿತು ಲಂಕಾ ರಕ್ಷಣಾ ಸಚಿವರಿಗೆ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಿದ್ದಾರೆ. </p><p>ಗುರುವಾರ ರಾತ್ರಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡದ ಆಟಗಾರರನ್ನು ಮೊಹ್ಸಿನ್ ನಖ್ವಿ ಅವರು ಕ್ರೀಡಾಂಗಣದಲ್ಲಿ ಭೇಟಿಯಾಗಿದ್ದರು. </p><p>ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಜರುಗುತ್ತಿದೆ. ಬಾಂಬ್ ಸ್ಪೋಟದ ನಂತರ ಸರಣಿಯ ವೇಳಾಪಟ್ಟಿಯನ್ನು ಮರುನಿಗದಿ ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾವಲ್ಪಿಂಡಿ:</strong> ಪಾಕಿಸ್ತಾನ ಪ್ರವಾಸದಲ್ಲಿರುವ ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸರ್ಕಾರವು ಸೇನೆಗೆ ವಹಿಸಿಲಾಗಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಹೇಳಿದ್ದಾರೆ. </p><p>ಇತ್ತೀಚೆಗೆ ಇಸ್ಲಾಮಾಬಾದ್ನಲ್ಲಿ ಆತ್ಮಾಹುತಿ ಬಾಂಬ್ ದಾಳಿಯಾಗಿತ್ತು. ನಂತರ ಶ್ರೀಲಂಕಾ ಆಟಗಾರರು ಭದ್ರತಾ ಕಾರಣದಿಂದ ಪಾಕಿಸ್ತಾನ ತೊರೆಯಲು ನಿರ್ಧರಿಸಿದ್ದರು. ಆದರೆ, ಶ್ರೀಲಂಕಾ ಸರ್ಕಾರ ಮತ್ತು ಕ್ರಿಕೆಟ್ ಮಂಡಳಿಯ ನಿರ್ಧಾರದಂತೆ ಉಳಿದ ಪಂದ್ಯಗಳಲ್ಲಿ ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ. </p><p>ಪ್ರವಾಸಿ ಶ್ರೀಲಂಕಾ ತಂಡದ ಭದ್ರತಾ ಹೊಣೆಯನ್ನು ಸೇನೆಗೆ ವಹಿಸಿಲಾಗಿದೆ. ಪೊಲೀಸರು ಕೂಡ ಅವರಿಗೆ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. </p><p>ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ಆಟಗಾರರು ತವರಿಗೆ ಮರಳಲು ಸಿದ್ದರಾಗಿದ್ದರು. ಉಭಯ ದೇಶಗಳ ನಾಯಕರ ಸಹಕಾರದಿಂದ ಟೂರ್ನಿ ಮುಂದುವರಿಯುತ್ತಿದೆ. ಸೇನಾ ಮುಖ್ಯಸ್ಥ ಮುನೀರ್ ಅವರು ಆಟಗಾರರ ಭದ್ರತೆಯ ಕುರಿತು ಲಂಕಾ ರಕ್ಷಣಾ ಸಚಿವರಿಗೆ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಿದ್ದಾರೆ. </p><p>ಗುರುವಾರ ರಾತ್ರಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡದ ಆಟಗಾರರನ್ನು ಮೊಹ್ಸಿನ್ ನಖ್ವಿ ಅವರು ಕ್ರೀಡಾಂಗಣದಲ್ಲಿ ಭೇಟಿಯಾಗಿದ್ದರು. </p><p>ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಜರುಗುತ್ತಿದೆ. ಬಾಂಬ್ ಸ್ಪೋಟದ ನಂತರ ಸರಣಿಯ ವೇಳಾಪಟ್ಟಿಯನ್ನು ಮರುನಿಗದಿ ಮಾಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>