ಕೊಲಂಬೊ: ಬಯೋಬಬಲ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರರಾದ ಕುಶಲ್ ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ ಮತ್ತು ಧನುಷ್ಕಾ ಗುಣತಿಲಕ ಅವರನ್ನು ಅಮಾನತು ಮಾಡಲಾಗಿದೆ. ಸದ್ಯ ತಂಡವು ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಈ ಮೂವರಿಗೆ ಸ್ವದೇಶಕ್ಕೆ ಮರಳುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್ಎಲ್ಸಿ) ಸೂಚಿಸಿದೆ.