<p><strong>ಕೊಲಂಬೊ</strong>: ‘2011ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಫಿಕ್ಸಿಂಗ್ ನಡೆದಿತ್ತು ಎಂಬುದನ್ನು ಸಾಬೀತುಪಡಿಸಲು ಅಗತ್ಯವಿರುವ ಎಲ್ಲಾ ಸಾಕ್ಷ್ಯಾಧಾರಗಳನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ನೀಡಲು ತಯಾರಿದ್ದೇನೆ’ ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಳತಗಮಗೆ ಶನಿವಾರ ಹೇಳಿದ್ದಾರೆ.</p>.<p>ಫಿಕ್ಸಿಂಗ್ ನಡೆದಿತ್ತು ಎಂಬುದನ್ನು ನಿರೂಪಿಸಲು ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ಶ್ರೀಲಂಕಾ ಪೊಲೀಸ್ ಶುಕ್ರವಾರ ಈ ಪ್ರಕರಣದ ತನಿಖೆಯನ್ನು ಕೈಬಿಟ್ಟಿತ್ತು.</p>.<p>ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ನಲ್ಲಿ ಲಂಕಾ ತಂಡವು ಭಾರತದ ಎದುರು ಪರಾಭವಗೊಂಡಿತ್ತು. ಆ ಪಂದ್ಯವನ್ನು ಎರಡು ಪಕ್ಷಗಳು ಸೇರಿ ಮಾರಾಟ ಮಾಡಿವೆ ಎಂದು ಆರೋಪಿಸಿದ್ದ ಮಹಿಂದಾನಂದ ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿದ್ದರು.</p>.<p>‘ಪ್ರಭಾವಿ ವ್ಯಕ್ತಿಗಳು ಹಣಬಲದಿಂದ ತನಿಖೆಯ ದಾರಿ ತಪ್ಪಿಸಿದ್ದಾರೆ. ಪೊಲೀಸರು ಪ್ರಾಮಾಣಿಕತೆಯಿಂದ ತನಿಖೆ ನಡೆಸಲು ವಿಫಲರಾಗಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಷೆ ಅವರು ಮಧ್ಯಪ್ರವೇಶಿಸಿ ಮರು ತನಿಖೆ ನಡೆಸುವಂತೆ ಐಸಿಸಿ ಮೇಲೆ ಒತ್ತಡ ಹೇರಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ನೀಡಲು ಸಿದ್ಧನಿದ್ದೇನೆ. ಈ ಕುರಿತು ಐಸಿಸಿಯ ಭ್ರಷ್ಟಾಚಾರ ತಡೆ ಘಟಕದ ಮುಖ್ಯಸ್ಥ ಅಲೆಕ್ಸ್ ಮಾರ್ಷಲ್ ಅವರಿಗೂ ಮಾಹಿತಿ ನೀಡಿದ್ದೇನೆ’ ಎಂದೂ ಅವರು ನುಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ‘2011ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಫಿಕ್ಸಿಂಗ್ ನಡೆದಿತ್ತು ಎಂಬುದನ್ನು ಸಾಬೀತುಪಡಿಸಲು ಅಗತ್ಯವಿರುವ ಎಲ್ಲಾ ಸಾಕ್ಷ್ಯಾಧಾರಗಳನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ನೀಡಲು ತಯಾರಿದ್ದೇನೆ’ ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಳತಗಮಗೆ ಶನಿವಾರ ಹೇಳಿದ್ದಾರೆ.</p>.<p>ಫಿಕ್ಸಿಂಗ್ ನಡೆದಿತ್ತು ಎಂಬುದನ್ನು ನಿರೂಪಿಸಲು ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಕಾರಣ ಶ್ರೀಲಂಕಾ ಪೊಲೀಸ್ ಶುಕ್ರವಾರ ಈ ಪ್ರಕರಣದ ತನಿಖೆಯನ್ನು ಕೈಬಿಟ್ಟಿತ್ತು.</p>.<p>ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ನಲ್ಲಿ ಲಂಕಾ ತಂಡವು ಭಾರತದ ಎದುರು ಪರಾಭವಗೊಂಡಿತ್ತು. ಆ ಪಂದ್ಯವನ್ನು ಎರಡು ಪಕ್ಷಗಳು ಸೇರಿ ಮಾರಾಟ ಮಾಡಿವೆ ಎಂದು ಆರೋಪಿಸಿದ್ದ ಮಹಿಂದಾನಂದ ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಒತ್ತಾಯಿಸಿದ್ದರು.</p>.<p>‘ಪ್ರಭಾವಿ ವ್ಯಕ್ತಿಗಳು ಹಣಬಲದಿಂದ ತನಿಖೆಯ ದಾರಿ ತಪ್ಪಿಸಿದ್ದಾರೆ. ಪೊಲೀಸರು ಪ್ರಾಮಾಣಿಕತೆಯಿಂದ ತನಿಖೆ ನಡೆಸಲು ವಿಫಲರಾಗಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಷೆ ಅವರು ಮಧ್ಯಪ್ರವೇಶಿಸಿ ಮರು ತನಿಖೆ ನಡೆಸುವಂತೆ ಐಸಿಸಿ ಮೇಲೆ ಒತ್ತಡ ಹೇರಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ನೀಡಲು ಸಿದ್ಧನಿದ್ದೇನೆ. ಈ ಕುರಿತು ಐಸಿಸಿಯ ಭ್ರಷ್ಟಾಚಾರ ತಡೆ ಘಟಕದ ಮುಖ್ಯಸ್ಥ ಅಲೆಕ್ಸ್ ಮಾರ್ಷಲ್ ಅವರಿಗೂ ಮಾಹಿತಿ ನೀಡಿದ್ದೇನೆ’ ಎಂದೂ ಅವರು ನುಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>