<p><strong>ಕೊಲಂಬೊ</strong>: ಶಿಖರ್ ಧವನ್ ನಾಯಕತ್ವದ ಭಾರತ ತಂಡವು ಗುರುವಾರ ಕಳಪೆ ಬ್ಯಾಟಿಂಗ್ಗೆ ಬೆಲೆ ತೆರಬೇಕಾಯಿತು.</p>.<p>ಲೆಗ್ಸ್ಪಿನ್ನರ್ ವಾಣಿಂದು ಹಸರಂಗಾ (9ಕ್ಕೆ4 ವಿಕೆಟ್ ಹಾಗೂ ಔಟಾಗದೆ 14 ರನ್) ಅವರ ಆಲ್ರೌಂಡ್ ಆಟದ ನೆರವಿನಿಂದ ಶ್ರೀಲಂಕಾ ತಂಡವು ಮೂರನೇ ಟ್ವೆಂಟಿ–20 ಪಂದ್ಯದಲ್ಲಿ ಜಯಿಸಿತು.</p>.<p>ಏಳು ವಿಕೆಟ್ಗಳಿಂದ ಪಂದ್ಯ ಗೆದ್ದುಕೊಂಡ ಆತಿಥೇಯ ಬಳಗ 2–1ರಿಂದ ಸರಣಿಯನ್ನೂ ತನ್ನದಾಗಿಸಿಕೊಂಡಿತು.</p>.<p>ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 81 ರನ್ ಗಳಿಸಿತ್ತು.</p>.<p>ಸಾಧಾರಣ ಗುರಿ ಬೆನ್ನತ್ತಿದ ಲಂಕಾ, ಇನ್ನೂ 33 ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.</p>.<p>ಧನಂಜಯ ಡಿಸಿಲ್ವಾ (ಔಟಾಗದೆ 23) ಹಾಗೂ ವಾಣಿಂದು ಮುರಿಯದ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 26 ರನ್ ಸೇರಿಸಿ ತಂಡದ ಜಯವನ್ನು ಸುಲಭಗೊಳಿಸಿದರು.</p>.<p>ಭಾರತ ತಂಡದ ಪರ ರಾಹುಲ್ ಚಾಹರ್ (15ಕ್ಕೆ 3) ಮಾತ್ರ ಬೌಲಿಂಗ್ ನಲ್ಲಿ ಪರಿಣಾಮಕಾರಿ ಎನಿಸಿದರು.</p>.<p><strong>ಬ್ಯಾಟಿಂಗ್ ವೈಫಲ್ಯ:</strong> ಭಾರತದ ಪರ ಆರಂಭಿಕ ಬ್ಯಾಟ್ಸ್ಮನ್ ಋತುರಾಜ್ ಗಾಯಕವಾಡ್ (14 ರನ್), ಭುವನೇ ಶ್ವರ್ ಕುಮಾರ್ (16) ಮತ್ತು ಕುಲ ದೀಪ್ ಯಾದವ್ (ಔಟಾಗದೆ 23) ಬಿಟ್ಟರೆ ಉಳಿದವರು ಎರಡಂಕಿ ಮೊತ್ತ ಮುಟ್ಟಲಿಲ್ಲ.</p>.<p>ನಾಯಕ ಶಿಖರ್ ಧವನ್ ಅವರು ಮೊದಲ ಓವರ್ನ ನಾಲ್ಕನೇ ಎಸೆತದಲ್ಲಿ ದುಷ್ಮಂತ ಚಾಮೀರ ಬೌಲಿಂಗ್ನಲ್ಲಿ ಔಟಾದರು. ಖಾತೆಯನ್ನೂ ತೆರೆಯಲಿಲ್ಲ.</p>.<p>ಕರ್ನಾಟಕದ ದೇವದತ್ತ ಪಡಿಕ್ಕಲ್ (9 ರನ್) ನಾಲ್ಕನೇ ಓವರ್ನಲ್ಲಿ ಆಟ ಮುಗಿಸಿದರು. 36 ರನ್ಗಳು ಸೇರುವಷ್ಟರಲ್ಲಿ ಐವರು ಬ್ಯಾಟ್ಸ್ಮನ್ಗಳು ಪೆವಿಲಿಯನ್ ಸೇರಿಯಾಗಿತ್ತು. ಅಗ್ರಕ್ರಮಾಂಕದ ಬ್ಯಾಟ್ಸ್ಮನ್ಗಳು ಸ್ಪಿನ್ ಬೌಲಿಂಗ್ ಎದುರಿಸುವಲ್ಲಿ ವಿಫಲರಾದರು.</p>.<p>ಋತುರಾಜ್ ಗಾಯಕವಾಡ್, ಸಂಜು ಸ್ಯಾಮ್ಸನ್, ಭುವನೇಶ್ವರ್ ಕುಮಾರ್ ಮತ್ತು ವರುಣ್ ಚಕ್ರವರ್ತಿ ಅವರ ವಿಕೆಟ್ಗಳನ್ನು ಹಸರಂಗಾ ತಮ್ಮ ಬುಟ್ಟಿಗೆ ಹಾಕಿಕೊಂಡರು. ಆದರೆ ತಂಡವನ್ನು ಆಲೌಟ್ ಆಗದಂತೆ ತಡೆಯುವಲ್ಲಿ ಭುವನೇಶ್ವರ್ ಮತ್ತು ಕುಲದೀಪ್ ಪ್ರಮುಖ ಪಾತ್ರ ವಹಿಸಿದರು.</p>.<p>ಚೈನಾಮನ್ ಬೌಲರ್ ಕುಲದೀಪ್ 28 ಎಸೆತಗಳನ್ನು ಎದುರಿಸಿದರು. ಭುವಿ 32 ಎಸೆತಗಳನ್ನು ಆಡಿದರು. ಶ್ರೀಲಂಕಾ ಬೌಲರ್ಗಳನ್ನು ಧೈರ್ಯದಿಂದ ಎದುರಿ ಸಿದರು.</p>.<p>ಏಕದಿನ ಸರಣಿಯಲ್ಲಿ ಸೋತಿದ್ದ ಶ್ರೀಲಂಕಾ ತಂಡವು ಟಿ20 ಸರಣಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಎರಡನೇ ಪಂದ್ಯ ದಲ್ಲಿಯೂ ಉತ್ತಮ ಬೌಲಿಂಗ್ ಮತ್ತು ಫೀಲ್ಡಿಂಗ್ನಿಂದ ಭಾರತ ತಂಡವನ್ನು ಸೋಲಿಸಿ ಸರಣಿಯಲ್ಲಿ 1–1ರ ಸಮಬಲ ಸಾಧಿಸಿದ್ದರು. ಈ ಪಂದ್ಯದಲ್ಲಿಯೂ ತಮ್ಮ ಸ್ಪಿನ್ ಬೌಲರ್ಗಳ ಬಲದಿಂದ ಭಾರತ ತಂಡವು ನೂರರ ಗಡಿಯನ್ನು ದಾಟದಂತೆ ಶ್ರೀಲಂಕಾ ತಂಡವುನೋಡಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಶಿಖರ್ ಧವನ್ ನಾಯಕತ್ವದ ಭಾರತ ತಂಡವು ಗುರುವಾರ ಕಳಪೆ ಬ್ಯಾಟಿಂಗ್ಗೆ ಬೆಲೆ ತೆರಬೇಕಾಯಿತು.</p>.<p>ಲೆಗ್ಸ್ಪಿನ್ನರ್ ವಾಣಿಂದು ಹಸರಂಗಾ (9ಕ್ಕೆ4 ವಿಕೆಟ್ ಹಾಗೂ ಔಟಾಗದೆ 14 ರನ್) ಅವರ ಆಲ್ರೌಂಡ್ ಆಟದ ನೆರವಿನಿಂದ ಶ್ರೀಲಂಕಾ ತಂಡವು ಮೂರನೇ ಟ್ವೆಂಟಿ–20 ಪಂದ್ಯದಲ್ಲಿ ಜಯಿಸಿತು.</p>.<p>ಏಳು ವಿಕೆಟ್ಗಳಿಂದ ಪಂದ್ಯ ಗೆದ್ದುಕೊಂಡ ಆತಿಥೇಯ ಬಳಗ 2–1ರಿಂದ ಸರಣಿಯನ್ನೂ ತನ್ನದಾಗಿಸಿಕೊಂಡಿತು.</p>.<p>ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 81 ರನ್ ಗಳಿಸಿತ್ತು.</p>.<p>ಸಾಧಾರಣ ಗುರಿ ಬೆನ್ನತ್ತಿದ ಲಂಕಾ, ಇನ್ನೂ 33 ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.</p>.<p>ಧನಂಜಯ ಡಿಸಿಲ್ವಾ (ಔಟಾಗದೆ 23) ಹಾಗೂ ವಾಣಿಂದು ಮುರಿಯದ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 26 ರನ್ ಸೇರಿಸಿ ತಂಡದ ಜಯವನ್ನು ಸುಲಭಗೊಳಿಸಿದರು.</p>.<p>ಭಾರತ ತಂಡದ ಪರ ರಾಹುಲ್ ಚಾಹರ್ (15ಕ್ಕೆ 3) ಮಾತ್ರ ಬೌಲಿಂಗ್ ನಲ್ಲಿ ಪರಿಣಾಮಕಾರಿ ಎನಿಸಿದರು.</p>.<p><strong>ಬ್ಯಾಟಿಂಗ್ ವೈಫಲ್ಯ:</strong> ಭಾರತದ ಪರ ಆರಂಭಿಕ ಬ್ಯಾಟ್ಸ್ಮನ್ ಋತುರಾಜ್ ಗಾಯಕವಾಡ್ (14 ರನ್), ಭುವನೇ ಶ್ವರ್ ಕುಮಾರ್ (16) ಮತ್ತು ಕುಲ ದೀಪ್ ಯಾದವ್ (ಔಟಾಗದೆ 23) ಬಿಟ್ಟರೆ ಉಳಿದವರು ಎರಡಂಕಿ ಮೊತ್ತ ಮುಟ್ಟಲಿಲ್ಲ.</p>.<p>ನಾಯಕ ಶಿಖರ್ ಧವನ್ ಅವರು ಮೊದಲ ಓವರ್ನ ನಾಲ್ಕನೇ ಎಸೆತದಲ್ಲಿ ದುಷ್ಮಂತ ಚಾಮೀರ ಬೌಲಿಂಗ್ನಲ್ಲಿ ಔಟಾದರು. ಖಾತೆಯನ್ನೂ ತೆರೆಯಲಿಲ್ಲ.</p>.<p>ಕರ್ನಾಟಕದ ದೇವದತ್ತ ಪಡಿಕ್ಕಲ್ (9 ರನ್) ನಾಲ್ಕನೇ ಓವರ್ನಲ್ಲಿ ಆಟ ಮುಗಿಸಿದರು. 36 ರನ್ಗಳು ಸೇರುವಷ್ಟರಲ್ಲಿ ಐವರು ಬ್ಯಾಟ್ಸ್ಮನ್ಗಳು ಪೆವಿಲಿಯನ್ ಸೇರಿಯಾಗಿತ್ತು. ಅಗ್ರಕ್ರಮಾಂಕದ ಬ್ಯಾಟ್ಸ್ಮನ್ಗಳು ಸ್ಪಿನ್ ಬೌಲಿಂಗ್ ಎದುರಿಸುವಲ್ಲಿ ವಿಫಲರಾದರು.</p>.<p>ಋತುರಾಜ್ ಗಾಯಕವಾಡ್, ಸಂಜು ಸ್ಯಾಮ್ಸನ್, ಭುವನೇಶ್ವರ್ ಕುಮಾರ್ ಮತ್ತು ವರುಣ್ ಚಕ್ರವರ್ತಿ ಅವರ ವಿಕೆಟ್ಗಳನ್ನು ಹಸರಂಗಾ ತಮ್ಮ ಬುಟ್ಟಿಗೆ ಹಾಕಿಕೊಂಡರು. ಆದರೆ ತಂಡವನ್ನು ಆಲೌಟ್ ಆಗದಂತೆ ತಡೆಯುವಲ್ಲಿ ಭುವನೇಶ್ವರ್ ಮತ್ತು ಕುಲದೀಪ್ ಪ್ರಮುಖ ಪಾತ್ರ ವಹಿಸಿದರು.</p>.<p>ಚೈನಾಮನ್ ಬೌಲರ್ ಕುಲದೀಪ್ 28 ಎಸೆತಗಳನ್ನು ಎದುರಿಸಿದರು. ಭುವಿ 32 ಎಸೆತಗಳನ್ನು ಆಡಿದರು. ಶ್ರೀಲಂಕಾ ಬೌಲರ್ಗಳನ್ನು ಧೈರ್ಯದಿಂದ ಎದುರಿ ಸಿದರು.</p>.<p>ಏಕದಿನ ಸರಣಿಯಲ್ಲಿ ಸೋತಿದ್ದ ಶ್ರೀಲಂಕಾ ತಂಡವು ಟಿ20 ಸರಣಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ಎರಡನೇ ಪಂದ್ಯ ದಲ್ಲಿಯೂ ಉತ್ತಮ ಬೌಲಿಂಗ್ ಮತ್ತು ಫೀಲ್ಡಿಂಗ್ನಿಂದ ಭಾರತ ತಂಡವನ್ನು ಸೋಲಿಸಿ ಸರಣಿಯಲ್ಲಿ 1–1ರ ಸಮಬಲ ಸಾಧಿಸಿದ್ದರು. ಈ ಪಂದ್ಯದಲ್ಲಿಯೂ ತಮ್ಮ ಸ್ಪಿನ್ ಬೌಲರ್ಗಳ ಬಲದಿಂದ ಭಾರತ ತಂಡವು ನೂರರ ಗಡಿಯನ್ನು ದಾಟದಂತೆ ಶ್ರೀಲಂಕಾ ತಂಡವುನೋಡಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>