ಕೊಲಂಬೋ: ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಶ್ರೀಲಂಕಾ ತಂಡದಲ್ಲಿ ಉದಾನಾ ಬದಲಿಗೆ ಕಸುನ್ ರಜಿತಾ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿಮೊದಲ ಪಂದ್ಯವನ್ನು ಗೆದ್ದಿರುವ ಶಿಖರ್ ಧವನ್ ನೇತೃತ್ವದ ಭಾರತ ತಂಡ ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನು ಗೆದ್ದರೆ ಸರಣಿ ಭಾರತದ ಕೈವಶವಾಗಲಿದೆ.