<p><strong>ಢಾಕಾ</strong>: ಇಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಭೋಜನ ವಿರಾಮಕ್ಕೆ ಮುನ್ನ ಕೊನೆಯ ಓವರ್ನಲ್ಲಿ ಮೆಂಡಿಸ್ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಎದೆ ಹಿಡಿದುಕೊಂಡು ಕುಸಿದಿದ್ದಾರೆ.</p>.<p>ಕೂಡಲೇ ಅವರನ್ನು ವೈದ್ಯಕೀಯ ಸಿಬ್ಬಂದಿ ಪರೀಕ್ಷಿಸಿದೆ. ಬಳಿಕ, ಎದೆ ಹಿಡಿದುಕೊಂಡೇ ಅವರು ಹೊರಗೆ ತೆರಳಿದ್ದಾರೆ.<br /><br />ಮೆಂಡೀಸ್ ಅವರನ್ನು ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ವೈದ್ಯ ಹೊಸೈನ್ ಚೌಧರಿ ತಿಳಿಸಿದ್ದಾರೆ.</p>.<p>‘ಅವರಿಗೆ ನಿರ್ಜಲೀಕರಣ ಸಮಸ್ಯೆ ಆಗಿರಬಹುದು. ಅದೇ ಅವರ ಅನಾರೋಗ್ಯಕ್ಕೆ ಕಾರಣವಾಗಿರಬಹುದು. ಗ್ಯಾಸ್ಟ್ರೈಟಿಸ್ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ವೈದ್ಯಕೀಯ ಪರೀಕ್ಷೆಗಳು ಮುಗಿದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು’ಎಂದು ಅವರು ಹೇಳಿದ್ದಾರೆ.<br /><br />ಕುಶಲ್ ಮೆಂಡಿಸ್ ಸ್ಥಾನಕ್ಕೆ ಕಮಿಂದು ಮೆಂಡಿಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಇಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಭೋಜನ ವಿರಾಮಕ್ಕೆ ಮುನ್ನ ಕೊನೆಯ ಓವರ್ನಲ್ಲಿ ಮೆಂಡಿಸ್ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಎದೆ ಹಿಡಿದುಕೊಂಡು ಕುಸಿದಿದ್ದಾರೆ.</p>.<p>ಕೂಡಲೇ ಅವರನ್ನು ವೈದ್ಯಕೀಯ ಸಿಬ್ಬಂದಿ ಪರೀಕ್ಷಿಸಿದೆ. ಬಳಿಕ, ಎದೆ ಹಿಡಿದುಕೊಂಡೇ ಅವರು ಹೊರಗೆ ತೆರಳಿದ್ದಾರೆ.<br /><br />ಮೆಂಡೀಸ್ ಅವರನ್ನು ಹೆಚ್ಚಿನ ತಪಾಸಣೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ವೈದ್ಯ ಹೊಸೈನ್ ಚೌಧರಿ ತಿಳಿಸಿದ್ದಾರೆ.</p>.<p>‘ಅವರಿಗೆ ನಿರ್ಜಲೀಕರಣ ಸಮಸ್ಯೆ ಆಗಿರಬಹುದು. ಅದೇ ಅವರ ಅನಾರೋಗ್ಯಕ್ಕೆ ಕಾರಣವಾಗಿರಬಹುದು. ಗ್ಯಾಸ್ಟ್ರೈಟಿಸ್ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ವೈದ್ಯಕೀಯ ಪರೀಕ್ಷೆಗಳು ಮುಗಿದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು’ಎಂದು ಅವರು ಹೇಳಿದ್ದಾರೆ.<br /><br />ಕುಶಲ್ ಮೆಂಡಿಸ್ ಸ್ಥಾನಕ್ಕೆ ಕಮಿಂದು ಮೆಂಡಿಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>