<p><strong>ಕೊಲಂಬೊ: </strong>ಮುಂಬೈನಲ್ಲಿ ನಡೆದಿದ್ದ 2011ರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯವನ್ನು ಶ್ರೀಲಂಕಾ ‘ಮಾರಾಟ’ ಮಾಡಿತ್ತು ಎಂದು ಮಾಜಿ ಕ್ರೀಡಾ ಸಚಿವ ಮಾಡಿರುವ ಆರೋಪವನ್ನು ಲಂಕಾ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆದೇಶ ಹೊರಡಿಸಿದೆ.</p>.<p>ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿದಾನಂದ ಅಳುತಗಾಮಗೆ. ‘ಭಾರತ ಮತ್ತು ಶ್ರೀಲಂಖಾ ನಡುವಣ ನಡೆಇದ್ದ ಫೈನಲ್ ಪಂದ್ಯವು ಫಿಕ್ಸ್ ಆಗಿತ್ತು. ಆದರೆ ಆಟಗಾರರು ಭಾಗಿಯಾಗಿರಲಿಲ್ಲ. ಹೊರಗಿನ ಎರಡು ಗುಂಪುಗಳು ಶಾಮೀಲಾಗಿದ್ದವು. ಶ್ರೀಲಂಕಾ ಆ ಪಂದ್ಯವನ್ನು ಮಾರಾಟ ಮಾಡಿತ್ತು’ ಎಂದು ಸ್ಥಳೀಯ ಟಿವಿ ವಾಹಿನಿಯ ಸಂದರ್ಶನದಲ್ಲಿ ಆರೋಪಿಸಿದ್ದರು.</p>.<p>‘ಈ ವಿಷಯದ ಕುರಿತು ತನಿಖೆ ನಡೆಸಿ ವರದಿ ನೀಡಬೇಕು’ ಎಂದು ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಕೆ.ಎ.ಡಿ.ಎಸ್. ರುವಾನಚಂದ್ರ ಸೂಚಿಸಿದ್ದಾರೆ.</p>.<p>2011ರಲ್ಲಿ ಮಹಿದಾನಂದ ಅವರು ಕ್ರೀಡಾ ಸಚಿವರಾಗಿದ್ದರು. ಅವರೂ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ್ದರು.</p>.<p>ಅವರ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಆಗಿನ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಕುಮಾರ ಸಂಗಕ್ಕಾರ ಮತ್ತು ಬ್ಯಾಟ್ಸ್ಮನ್ ಮಹೇಲ ಜಯವರ್ಧನೆ, ‘ಸಾಕ್ಷ್ಯಾಧಾರಗಳನ್ನು ತೋರಿಸಿ ಆರೋಪವನ್ನು ಸಾಬೀತುಪಡಿಸಿ’ ಎಂದು ಸವಾಲು ಹಾಕಿದ್ದರು.</p>.<p>ಈ ಹಿಂದೆಯೂ ಮಹಿದಾನಂದ ಇಂತಹ ಆರೋಪ ಮಾಡಿದ್ದರು. ಲಂಕಾ ತಂಡದ ಮಾಜಿ ನಾಯಕ ಅರ್ಜುನ ರಣತುಂಗಾ ಅವರೂ ಕೆಲವು ತಿಂಗಳುಗಳ ಹಿಂದೆ ಫೈನಲ್ ಪಂದ್ಯ ಫಿಕ್ಸಿಂಗ್ ಆಗಿತ್ತೆಂದು ಆರೋಪಿಸಿದ್ದರು.</p>.<p>ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡವು 275 ರನ್ಗಳ ಗುರಿಯನ್ನು ಭಾರತಕ್ಕೆ ಒಡ್ಡಿತ್ತು. ಗೌತಮ್ ಗಂಭೀರ್ (97 ರನ್) ಮತ್ತು ನಾಯಕ ಮಹೇಂದ್ರಸಿಂಗ್ ಧೋನಿ (91 ರನ್) ಅವರ ಅಮೋಘ ಬ್ಯಾಟಿಂಗ್ ಬಲದಿಂದ ಭಾರತವು ಗೆದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಮುಂಬೈನಲ್ಲಿ ನಡೆದಿದ್ದ 2011ರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯವನ್ನು ಶ್ರೀಲಂಕಾ ‘ಮಾರಾಟ’ ಮಾಡಿತ್ತು ಎಂದು ಮಾಜಿ ಕ್ರೀಡಾ ಸಚಿವ ಮಾಡಿರುವ ಆರೋಪವನ್ನು ಲಂಕಾ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆದೇಶ ಹೊರಡಿಸಿದೆ.</p>.<p>ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿದಾನಂದ ಅಳುತಗಾಮಗೆ. ‘ಭಾರತ ಮತ್ತು ಶ್ರೀಲಂಖಾ ನಡುವಣ ನಡೆಇದ್ದ ಫೈನಲ್ ಪಂದ್ಯವು ಫಿಕ್ಸ್ ಆಗಿತ್ತು. ಆದರೆ ಆಟಗಾರರು ಭಾಗಿಯಾಗಿರಲಿಲ್ಲ. ಹೊರಗಿನ ಎರಡು ಗುಂಪುಗಳು ಶಾಮೀಲಾಗಿದ್ದವು. ಶ್ರೀಲಂಕಾ ಆ ಪಂದ್ಯವನ್ನು ಮಾರಾಟ ಮಾಡಿತ್ತು’ ಎಂದು ಸ್ಥಳೀಯ ಟಿವಿ ವಾಹಿನಿಯ ಸಂದರ್ಶನದಲ್ಲಿ ಆರೋಪಿಸಿದ್ದರು.</p>.<p>‘ಈ ವಿಷಯದ ಕುರಿತು ತನಿಖೆ ನಡೆಸಿ ವರದಿ ನೀಡಬೇಕು’ ಎಂದು ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಕೆ.ಎ.ಡಿ.ಎಸ್. ರುವಾನಚಂದ್ರ ಸೂಚಿಸಿದ್ದಾರೆ.</p>.<p>2011ರಲ್ಲಿ ಮಹಿದಾನಂದ ಅವರು ಕ್ರೀಡಾ ಸಚಿವರಾಗಿದ್ದರು. ಅವರೂ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ್ದರು.</p>.<p>ಅವರ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಆಗಿನ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ಕುಮಾರ ಸಂಗಕ್ಕಾರ ಮತ್ತು ಬ್ಯಾಟ್ಸ್ಮನ್ ಮಹೇಲ ಜಯವರ್ಧನೆ, ‘ಸಾಕ್ಷ್ಯಾಧಾರಗಳನ್ನು ತೋರಿಸಿ ಆರೋಪವನ್ನು ಸಾಬೀತುಪಡಿಸಿ’ ಎಂದು ಸವಾಲು ಹಾಕಿದ್ದರು.</p>.<p>ಈ ಹಿಂದೆಯೂ ಮಹಿದಾನಂದ ಇಂತಹ ಆರೋಪ ಮಾಡಿದ್ದರು. ಲಂಕಾ ತಂಡದ ಮಾಜಿ ನಾಯಕ ಅರ್ಜುನ ರಣತುಂಗಾ ಅವರೂ ಕೆಲವು ತಿಂಗಳುಗಳ ಹಿಂದೆ ಫೈನಲ್ ಪಂದ್ಯ ಫಿಕ್ಸಿಂಗ್ ಆಗಿತ್ತೆಂದು ಆರೋಪಿಸಿದ್ದರು.</p>.<p>ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡವು 275 ರನ್ಗಳ ಗುರಿಯನ್ನು ಭಾರತಕ್ಕೆ ಒಡ್ಡಿತ್ತು. ಗೌತಮ್ ಗಂಭೀರ್ (97 ರನ್) ಮತ್ತು ನಾಯಕ ಮಹೇಂದ್ರಸಿಂಗ್ ಧೋನಿ (91 ರನ್) ಅವರ ಅಮೋಘ ಬ್ಯಾಟಿಂಗ್ ಬಲದಿಂದ ಭಾರತವು ಗೆದ್ದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>