<p><strong>ಜೈಪುರ: </strong>ರಾಜಸ್ಥಾನ ರಾಯಲ್ಸ್ ಐಪಿಎಲ್ ತಂಡವು ಅಜಿಂಕ್ಯಾ ರಹಾನೆ ಅವರನ್ನು ತಂಡದ ನಾಯಕತ್ವದಿಂದ ಕೆಳಗಿಳಿಸಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಅವರನ್ನು ದಿಢೀರನೇ ನಾಯಕನನ್ನಾಗಿ ಮಾಡಿದೆ.</p>.<p>ಇನ್ನುಳಿದ ಎಲ್ಲ ಪಂದ್ಯಗಳನ್ನೂ ಸ್ಟೀವ್ ಸ್ಮಿತ್ ಅವರೇ ಮುನ್ನಡೆಸುವುದಾಗಿ ರಾಜಸ್ಥಾನ ರಾಯಲ್ಸ್ ತಂಡ <a href="https://www.rajasthanroyals.com/steven-smith-returns-to-lead-the-royals-playoff-campaign/" target="_blank">ಪ್ರಕಟಿಸಿದೆ</a>. ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಅಜಿಂಕ್ಯಾ ರಹಾನೆ ನಾಯಕತ್ವದಲ್ಲಿ ಈ ವರೆಗೆ 8 ಪಂದ್ಯಗಳನ್ನಾಡಿದ್ದು, ಕೇವಲ ಎರಡರಲ್ಲಿ ಮಾತ್ರ ಗೆದ್ದಿದೆ. ಈ ವರೆಗೆ ಸೋಲಿನ ಯಾನ ಮಾಡಿರುವ ತಂಡಏ.20ರಂದು 9ನೇ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿದೆ. ಅದು ಮಾಡು ಇಲ್ಲವೇ ಮಡಿ ಎಂಬಂತಾಗಿದ್ದು, ಗೆಲ್ಲಲೇ ಬೇಕಾದ ಅನಿರ್ವಾರ್ಯತೆಯಲ್ಲಿದೆ. ಈ ಹಿನ್ನೆಲೆಯಲ್ಲಿ ತಂಡದ ಮಾಲೀಕರು ರಹಾನೆ ಅವರನ್ನು ಬದಿಗೊತ್ತಿ ಸ್ಮಿತ್ಗೆ ಜವಾಬ್ದಾರಿ ಹೊರಿಸಿ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. </p>.<p>ಈ ಬಗ್ಗೆ ಮಾತನಾಡಿರುವ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯಸ್ಥ ಝುಬಿನ್ ಬರುಚಾ, ‘ಕ್ರಿಕೆಟ್ನ ಎಲ್ಲ ಪ್ರಕಾರಗಳಲ್ಲಿಯೂಸ್ಟೀವ್ ಸ್ಮಿತ್ ಅವರು ಜಗತ್ತಿನ ಅತ್ಯಂತ ಯಶಸ್ವಿ ಮತ್ತು ಪ್ರಯೋಗಶೀಲ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.ಅವರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾರೆ ಎಂಬ ನಂಬಿಕೆ ನಮಗಿದೆ,’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ರಾಜಸ್ಥಾನ ರಾಯಲ್ಸ್ ಐಪಿಎಲ್ ತಂಡವು ಅಜಿಂಕ್ಯಾ ರಹಾನೆ ಅವರನ್ನು ತಂಡದ ನಾಯಕತ್ವದಿಂದ ಕೆಳಗಿಳಿಸಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಅವರನ್ನು ದಿಢೀರನೇ ನಾಯಕನನ್ನಾಗಿ ಮಾಡಿದೆ.</p>.<p>ಇನ್ನುಳಿದ ಎಲ್ಲ ಪಂದ್ಯಗಳನ್ನೂ ಸ್ಟೀವ್ ಸ್ಮಿತ್ ಅವರೇ ಮುನ್ನಡೆಸುವುದಾಗಿ ರಾಜಸ್ಥಾನ ರಾಯಲ್ಸ್ ತಂಡ <a href="https://www.rajasthanroyals.com/steven-smith-returns-to-lead-the-royals-playoff-campaign/" target="_blank">ಪ್ರಕಟಿಸಿದೆ</a>. ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಅಜಿಂಕ್ಯಾ ರಹಾನೆ ನಾಯಕತ್ವದಲ್ಲಿ ಈ ವರೆಗೆ 8 ಪಂದ್ಯಗಳನ್ನಾಡಿದ್ದು, ಕೇವಲ ಎರಡರಲ್ಲಿ ಮಾತ್ರ ಗೆದ್ದಿದೆ. ಈ ವರೆಗೆ ಸೋಲಿನ ಯಾನ ಮಾಡಿರುವ ತಂಡಏ.20ರಂದು 9ನೇ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿದೆ. ಅದು ಮಾಡು ಇಲ್ಲವೇ ಮಡಿ ಎಂಬಂತಾಗಿದ್ದು, ಗೆಲ್ಲಲೇ ಬೇಕಾದ ಅನಿರ್ವಾರ್ಯತೆಯಲ್ಲಿದೆ. ಈ ಹಿನ್ನೆಲೆಯಲ್ಲಿ ತಂಡದ ಮಾಲೀಕರು ರಹಾನೆ ಅವರನ್ನು ಬದಿಗೊತ್ತಿ ಸ್ಮಿತ್ಗೆ ಜವಾಬ್ದಾರಿ ಹೊರಿಸಿ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. </p>.<p>ಈ ಬಗ್ಗೆ ಮಾತನಾಡಿರುವ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯಸ್ಥ ಝುಬಿನ್ ಬರುಚಾ, ‘ಕ್ರಿಕೆಟ್ನ ಎಲ್ಲ ಪ್ರಕಾರಗಳಲ್ಲಿಯೂಸ್ಟೀವ್ ಸ್ಮಿತ್ ಅವರು ಜಗತ್ತಿನ ಅತ್ಯಂತ ಯಶಸ್ವಿ ಮತ್ತು ಪ್ರಯೋಗಶೀಲ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.ಅವರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾರೆ ಎಂಬ ನಂಬಿಕೆ ನಮಗಿದೆ,’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>