ದೀಪ್ ದಾಸ್ ಗುಪ್ತಾ ನಡೆಸಿಕೊಡುವ ‘ಕ್ರಿಕೆಟ್ ಬಾಜಿ’ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿರುವ ಭುವನೇಶ್ವರ್ ‘ಯಾರ್ಕರ್ ಎಸೆತಗಳನ್ನು ಹಾಕುವ ಸಾಮರ್ಥ್ಯ ನನ್ನಲ್ಲಿತ್ತು. ಕ್ರಮೇಣ ಅದನ್ನು ಕಳೆದುಕೊಂಡೆ. ಸನ್ರೈಸರ್ಸ್ ಸೇರಿದ ಬಳಿಕ ಹೊಸ ಚೆಂಡಿನೊಂದಿಗೆ ದಾಳಿ ನಡೆಸುವ ಹಾಗೂ ಡೆತ್ ಓವರ್ಗಳಲ್ಲಿ ಬೌಲ್ ಮಾಡುವ ಜವಾಬ್ದಾರಿ ನನ್ನ ಹೆಗಲೇರಿತು. ಈ ಹೊಣೆಗಳನ್ನು ಯಶಸ್ವಿಯಾಗಿ ನಿಭಾಯಿಸುವ ಕಲೆಯೂ ಕರಗತವಾಯಿತು’ ಎಂದಿದ್ದಾರೆ.