ಬೆಂಗಳೂರು: ಇಸ್ರೇಲ್ ಹಾಗೂ ಹಮಾಸ್ ನಡುವಣ ಯುದ್ಧದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಗಾಜಾಪಟ್ಟಿಯಲ್ಲಿ ಅನೇಕ ಮಕ್ಕಳು ಸಾವಿಗೀಡಾಗಿದ್ದಾರೆ.
ಈ ಕುರಿತು ಧ್ವನಿ ಎತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್, ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ವಿಶ್ವ ನಾಯಕರು ತಕ್ಷಣ ಕಾರ್ಯಪ್ರವೃತರಾಗಬೇಕು ಎಂದು ಬೇಡಿಕೊಂಡಿದ್ದಾರೆ.
ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇಡೀ ಜಗತ್ತೇ ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ ನನಗೆ ನನ್ನ ಅಭಿಪ್ರಾಯ ಮಂಡಿಸಲು ಮಾತ್ರ ಸಾಧ್ಯ. ಆದರೆ ವಿಶ್ವ ನಾಯಕರು ಒಂದಾಗಿ ಈ ಪ್ರಜ್ಞಾಹೀನ ಹತ್ಯೆಯನ್ನು ತಕ್ಷಣ ಕೊನೆಗಾಣಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.