ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರು ಎಷ್ಟು ಹಣ ಕೊಟ್ಟರು ಎಂಬುದು ಈಗ ಮುಖ್ಯವಲ್ಲ: ಓಜಾ

Last Updated 31 ಮಾರ್ಚ್ 2020, 3:44 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌ ಪೀಡಿತರ ಸಂಕಷ್ಟಕ್ಕೆ ಮಿಡಿದಿರುವಕ್ರೀಡಾಪಟುಗಳು ತಮ್ಮ ಕೈಲಾದಷ್ಟು ದೇಣಿಗೆ ನೀಡುತ್ತಿದ್ದಾರೆ. ಅವರು ನೀಡುವ ಮೊತ್ತವನ್ನೇ ಮುಂದಿಟ್ಟುಕೊಂಡು ಕೆಲವರು ಟೀಕೆ ಮಾಡುತ್ತಿರುವುದು ಸರಿಯಲ್ಲ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಪ್ರಗ್ಯಾನ್‌ ಓಜಾ ಸೋಮವಾರ ಹೇಳಿದ್ದಾರೆ.

‘ಯಾರು ಎಷ್ಟು ಹಣ ಕೊಟ್ಟರು ಎಂಬುದು ಈಗ ಮುಖ್ಯವಲ್ಲ. ಇಂತಹ ಸವಾಲಿನ ಸಮಯದಲ್ಲಿ ಕೆಲವರಾದರೂ ನೆರವು ನೀಡಲು ಮುಂದಾಗಿದ್ದಾರೆ. ಅಂತಹವರನ್ನು ನಾವು ಶ್ಲಾಘಿಸಬೇಕು. ಅದನ್ನು ಬಿಟ್ಟು ಅವರ ಬಳಿ ಅಷ್ಟು ಆಸ್ತಿ ಇದೆ, ಕೊಟ್ಟಿದ್ದು ಮಾತ್ರ ಬಿಡಿಗಾಸು ಅಂತೆಲ್ಲಾ ದೂಷಿಸುವುದು ಎಳ್ಳಷ್ಟೂ ಸರಿಯಲ್ಲ’ ಎಂದು ಲೆಗ್‌ ಸ್ಪಿನ್ನರ್‌ ಓಜಾ, ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT