ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿಭಾರತ ತಂಡ, ನಾಯಕ ರೋಹಿತ್ ಶರ್ಮಾ, ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ಜಸ್ಪ್ರೀತ್ ಬೂರ್ಮಾ ಅವರಿಲ್ಲದೆ ಕಣಕ್ಕಿಳಿದಿತ್ತು. ರೋಹಿತ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ತಂಡ ಮುನ್ನಡೆಸಿದ್ದರು. ಟೂರ್ನಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ತಲಾ ಎರಡರಲ್ಲಿ ಗೆದ್ದು, ಉಭಯ ತಂಡಗಳು ಸಮಬಲ ಸಾಧಿಸಿದ್ದವು. ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.