<p><strong>ನವದೆಹಲಿ</strong>: ‘ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ 13ನೇ ಆವೃತ್ತಿಯನ್ನು ಈ ವರ್ಷದ ಸೆಪ್ಟೆಂಬರ್ನಲ್ಲಿ ಶ್ರೀಲಂಕಾದಲ್ಲಿ ನಡೆಸುವುದು ಸೂಕ್ತ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಈಗಾಗಲೇ ಮಳೆಗಾಲ ಶುರುವಾಗಿದೆ. ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಐಪಿಎಲ್ ಆಯೋಜಿಸಿದರೆ ಬಹುತೇಕ ಪಂದ್ಯಗಳು ಮಳೆಗೆ ಆಹುತಿಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಅಥವಾ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಪಂದ್ಯಗಳನ್ನು ನಡೆಸಿದರೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p>‘ಹಲವು ಯುವ ಕ್ರಿಕೆಟಿಗರು ಈ ಬಾರಿಯ ಐಪಿಎಲ್ನಲ್ಲಿ ಮಿಂಚಬೇಕೆಂಬ ಮಹದಾಸೆ ಹೊಂದಿದ್ದರು. ಅದಕ್ಕಾಗಿ ಸಾಕಷ್ಟು ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಕೊರೊನಾ ವೈರಾಣುವಿನ ಬಿಕ್ಕಟ್ಟಿನಿಂದಾಗಿ ಲೀಗ್ನ ಭವಿಷ್ಯ ಡೋಲಾಯಮಾನವಾಗಿದೆ. ಇದರಿಂದ ಸಹಜವಾಗಿಯೇ ಎಲ್ಲರಿಗೂ ನಿರಾಸೆಯಾಗಿದೆ’ ಎಂದೂ ಅವರು ನುಡಿದಿದ್ದಾರೆ.</p>.<p>‘ಆಸ್ಟ್ರೇಲಿಯಾದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಲ್ಲಿನ ಸರ್ಕಾರವು ಹಸಿರು ನಿಶಾನೆ ತೋರಿದೆ. ಕ್ರೀಡಾಂಗಣಗಳಲ್ಲಿರುವ ಪ್ರೇಕ್ಷಕರ ಆಸನ ಸಾಮರ್ಥ್ಯದ ಶೇ 25ರಷ್ಟು ಮಂದಿಗೆ ಪ್ರವೇಶಾವಕಾಶ ನೀಡಲು ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುತ್ತಿರುವುದಾಗಿ ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಟ್ವೆಂಟಿ–20 ವಿಶ್ವಕಪ್ ಟೂರ್ನಿಯು ನಿಗದಿತ ವೇಳಾಪಟ್ಟಿಯ ಪ್ರಕಾರ ಕಾಂಗರೂ ನಾಡಿನಲ್ಲಿ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದೊಮ್ಮೆ ಅಕ್ಟೋಬರ್ನಲ್ಲಿ ವಿಶ್ವಕಪ್ ನಡೆದರೆ ಎಲ್ಲಾ ತಂಡಗಳು ಮೂರು ವಾರ ಮುಂಚಿತವಾಗಿ ಆಸ್ಟ್ರೇಲಿಯಾಕ್ಕೆ ಹೋಗಿ 14 ದಿನಗಳ ಸ್ವಯಂ ಪ್ರತ್ಯೇಕವಾಸದಲ್ಲಿರಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ವಿಶ್ವಕಪ್ ಆಯೋಜನೆಯಾದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಐಪಿಎಲ್ ನಡೆಸುವ ಯೋಜನೆಯನ್ನು ಕೈಬಿಡಬೇಕಾಗಬಹುದು’ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ 13ನೇ ಆವೃತ್ತಿಯನ್ನು ಈ ವರ್ಷದ ಸೆಪ್ಟೆಂಬರ್ನಲ್ಲಿ ಶ್ರೀಲಂಕಾದಲ್ಲಿ ನಡೆಸುವುದು ಸೂಕ್ತ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಈಗಾಗಲೇ ಮಳೆಗಾಲ ಶುರುವಾಗಿದೆ. ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಐಪಿಎಲ್ ಆಯೋಜಿಸಿದರೆ ಬಹುತೇಕ ಪಂದ್ಯಗಳು ಮಳೆಗೆ ಆಹುತಿಯಾಗುವ ಸಾಧ್ಯತೆ ಇದೆ. ಶ್ರೀಲಂಕಾ ಅಥವಾ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಪಂದ್ಯಗಳನ್ನು ನಡೆಸಿದರೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.</p>.<p>‘ಹಲವು ಯುವ ಕ್ರಿಕೆಟಿಗರು ಈ ಬಾರಿಯ ಐಪಿಎಲ್ನಲ್ಲಿ ಮಿಂಚಬೇಕೆಂಬ ಮಹದಾಸೆ ಹೊಂದಿದ್ದರು. ಅದಕ್ಕಾಗಿ ಸಾಕಷ್ಟು ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಕೊರೊನಾ ವೈರಾಣುವಿನ ಬಿಕ್ಕಟ್ಟಿನಿಂದಾಗಿ ಲೀಗ್ನ ಭವಿಷ್ಯ ಡೋಲಾಯಮಾನವಾಗಿದೆ. ಇದರಿಂದ ಸಹಜವಾಗಿಯೇ ಎಲ್ಲರಿಗೂ ನಿರಾಸೆಯಾಗಿದೆ’ ಎಂದೂ ಅವರು ನುಡಿದಿದ್ದಾರೆ.</p>.<p>‘ಆಸ್ಟ್ರೇಲಿಯಾದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಲ್ಲಿನ ಸರ್ಕಾರವು ಹಸಿರು ನಿಶಾನೆ ತೋರಿದೆ. ಕ್ರೀಡಾಂಗಣಗಳಲ್ಲಿರುವ ಪ್ರೇಕ್ಷಕರ ಆಸನ ಸಾಮರ್ಥ್ಯದ ಶೇ 25ರಷ್ಟು ಮಂದಿಗೆ ಪ್ರವೇಶಾವಕಾಶ ನೀಡಲು ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುತ್ತಿರುವುದಾಗಿ ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಟ್ವೆಂಟಿ–20 ವಿಶ್ವಕಪ್ ಟೂರ್ನಿಯು ನಿಗದಿತ ವೇಳಾಪಟ್ಟಿಯ ಪ್ರಕಾರ ಕಾಂಗರೂ ನಾಡಿನಲ್ಲಿ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದೊಮ್ಮೆ ಅಕ್ಟೋಬರ್ನಲ್ಲಿ ವಿಶ್ವಕಪ್ ನಡೆದರೆ ಎಲ್ಲಾ ತಂಡಗಳು ಮೂರು ವಾರ ಮುಂಚಿತವಾಗಿ ಆಸ್ಟ್ರೇಲಿಯಾಕ್ಕೆ ಹೋಗಿ 14 ದಿನಗಳ ಸ್ವಯಂ ಪ್ರತ್ಯೇಕವಾಸದಲ್ಲಿರಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ವಿಶ್ವಕಪ್ ಆಯೋಜನೆಯಾದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಐಪಿಎಲ್ ನಡೆಸುವ ಯೋಜನೆಯನ್ನು ಕೈಬಿಡಬೇಕಾಗಬಹುದು’ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>