ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಇತ್ತೀಚೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹೀದ್ ಅಫ್ರಿದಿ ಅವರತ್ತ ಭಾರತದ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ಚಾಟಿ ಬೀಸಿದ್ದಾರೆ. ಕಾಶ್ಮೀರ ವಿಚಾರವನ್ನು ಮರೆತುಪಾಕಿಸ್ತಾನದ ಏಳಿಗೆಗೆ ಶ್ರಮಿಸುವಂತೆಸಲಹೆ ನೀಡಿದ್ದಾರೆ.
ಈಚೆಗೆ ಪಾಕ್ ಆಕ್ರಮಿತ ಕಾಶ್ಮೀರದ ಗ್ರಾಮವೊಂದಕ್ಕೆ ತೆರಳಿದ್ದ ಆಫ್ರಿದಿಯು, ‘ಇದೊಂದು ಸುಂದರ ಗ್ರಾಮ. ಇಲ್ಲಿಗೆ ಬಹಳ ದಿನಗಳಿಂದ ಬರಬೇಕೆಂಬ ಆಸೆಯಿತ್ತು. ಈಗ ಈಡೇರಿದೆ. ಈಗ ಜಗತ್ತನ್ನು ಮಹಾಮಾರಿ ಕೊರೊನಾ ಆವರಿಸಿಕೊಂಡಿದೆ. ಆದರೆ ಅದಕ್ಕಿಂತ ಭಯಂಕರ ರೋಗವು ಇನ್ನೊಂದಿದೆ. ಅದು ಭಾರತದ ಪ್ರಧಾನಿ ಮೋದಿಯವರ ಮನೋಭಾವ.ಈ ಸ್ಥಳದಿಂದ ಎರಡು ಕಿಲೊಮೀಟರ್ ದೂರದ ಕಾಶ್ಮೀರದಲ್ಲಿ ನಮ್ಮ ಬಂಧು, ಬಾಂಧವರಿಗೆ ಮೋದಿ ಬಹಳ ತೊಂದರೆ ಕೊಡುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರು ಈ ಬಗ್ಗೆ ಇಲ್ಲಿಯೂ ಮತ್ತು ನಾಳೆ ದೇವರ ಮುಂದೆ ಉತ್ತರ ಕೊಡಲೇಬೇಕು‘ ಎಂದು ಹೇಳಿದ್ದರು.
ಈ ಹೇಳಿಕೆಗೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ರೈನಾ, ‘ಗೋಶ್! ತಾನು ಪ್ರಸ್ತುತವಾಗಿರಲು ವ್ಯಕ್ತಿಯೊಬ್ಬ ಏನೆಲ್ಲಾ ಮಾಡಬೇಕು! ಅದರಲ್ಲೂ ಭಿಕ್ಷೆಯ ಮೇಲೆ ಬದುಕುತ್ತಿರುವ ರಾಷ್ಟ್ರಕ್ಕಾಗಿ. ಕಾಶ್ಮೀರವನ್ನು ಮುಕ್ತವಾಗಿರಲು ಬಿಡಿ.ವೈಫಲ್ಯ ಕಂಡಿರುವ ನಿಮ್ಮ ದೇಶಕ್ಕೆ ಉತ್ತಮವಾದದ್ದೇನಾದರೂ ಮಾಡಿ. ನಾನು ಹೆಮ್ಮೆಯ ಕಾಶ್ಮೀರಿ ಮತ್ತು ಅದು ಯಾವಾಗಲೂ ಭಾರತದ ಅಳಿಸಲಾಗದ ಭಾಗವಾಗಿ ಉಳಿಯುತ್ತದೆ. ಜೈ ಹಿಂದ್!’ ಎಂದು ಟ್ವೀಟ್ ಮಾಡಿದ್ದಾರೆ.
Gosh! What all a person must do to remain relevant! Even more so for a nation that is living on alms. So, better do something for your failed nation and leave #Kashmir alone. I am a proud Kashmiri and it is and will always remain an inalienable part of India. Jai Hind!🇮🇳❤️💪
— Suresh Raina🇮🇳 (@ImRaina) May 17, 2020
ಇದಕ್ಕೂ ಮೊದಲು ಅಫ್ರಿದಿ ವಿರುದ್ಧ ಗುಡುಗಿದ್ದ ದೆಹಲಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ‘ಪಾಕಿಸ್ತಾನ ಸೇನೆಯಲ್ಲಿ ಏಳು ಲಕ್ಷ ಸೈನಿಕರು ಇದ್ದಾರೆ. ಅವರಿಗೆ 20 ಕೋಟಿ ಜನರ ಬೆಂಬಲವಿದೆ ಎಂದು 16ರ ಬಾಲಕ ಆಫ್ರಿದಿ ಹೇಳಿದ್ದಾನೆ. ಆದರೂ ಪಾಕ್ 70 ವರ್ಷದಿಂದ ಕಾಶ್ಮೀರಕ್ಕಾಗಿ ಭಿಕ್ಷೆ ಬೇಡುತ್ತಿದೆ. ಆಫ್ರಿದಿ, ಇಮ್ರಾನ್ ಮತ್ತು ಬಜ್ವಾ ಜೋಕರ್ಗಳಾಗಿದ್ದಾರೆ. ಪಾಕಿಸ್ತಾನದ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಭಾರತ ಮತ್ತು ನಮ್ಮ ಪ್ರಧಾನಿಯ ವಿರುದ್ಧ ಸದಾ ವಿಷ ಕಕ್ಕುತ್ತಲೇ ಇರುತ್ತಾರೆ. ಆದರೆ ‘ಜಡ್ಜ್ಮೆಂಟ್ ಡೇ’ವರೆಗೂ ಕಾಶ್ಮೀರ ನಿಮಗೆ ಸಿಗುವುದಿಲ್ಲ. ಬಾಂಗ್ಲಾದೇಶ ನೆನಪಿದೆಯಲ್ಲವೇ?’ಎಂದು ಟ್ವೀಟ್ ಮಾಡಿದ್ದರು.
Pak has 7 lakh force backed by 20 Cr ppl says 16 yr old man @SAfridiOfficial. Yet begging for Kashmir for 70 yrs. Jokers like Afridi, Imran & Bajwa can spew venom against India & PM @narendramodi ji to fool Pak ppl but won't get Kashmir till judgment day! Remember Bangladesh?
— Gautam Gambhir (@GautamGambhir) May 17, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.