<p><strong>ನವದೆಹಲಿ</strong>: ಏಷ್ಯಾ ಕಪ್ ಟೂರ್ನಿಯ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನೀಡಲು ನಿರ್ಧರಿಸಿರುವುದಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.</p><p>‘ನಮ್ಮ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿಗೆ ಒಳಗಾದ ಕುಟುಂಬಗಳಿಗೆ ಬೆಂಬಲ ನೀಡುವ ಸಲುವಾಗಿ ಈ ಟೂರ್ನಿಯ ಪಂದ್ಯ ಶುಲ್ಕವನ್ನು ದೇಣಿಗೆಯಾಗಿ ನೀಡಲು ನಾನು ನಿರ್ಧರಿಸಿದ್ದೇನೆ. ನಿಮ್ಮೊಂದಿಗೆ ನಾನು ಸದಾ ನಿಲ್ಲುತ್ತೇನೆ. ಜೈ ಹಿಂದ್’ ಎಂದು ಸೂರ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಭಾನುವಾರ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೂರ್ಯ ಪಡೆ ರೋಚಕ ಜಯ ಸಾಧಿಸಿತ್ತು.</p>.<p>ಪ್ರತಿ ಟಿ20 ಪಂದ್ಯಕ್ಕೆ ಭಾರತ ಆಟಗಾರರು ₹4 ಲಕ್ಷ ಗಳಿಸುತ್ತಾರೆ. ಒಟ್ಟು ಏಳು ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ₹28 ಲಕ್ಷ ಗಳಿಸಿದ್ದಾರೆ. ಈ ಮೊತ್ತವನ್ನು ಅವರು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆಯಾಗಿ ನೀಡಲಿದ್ದಾರೆ.</p><p>ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡದಿರುವುದರಿಂದ ಹಿಡಿದು ಪಾಕ್ ಸಚಿವ ಮೊಹಸೀನ್ ನಖ್ವಿ ಕೈಯಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸುವವರೆಗೆ ಹಲವು ಘಟನೆಗಳಿಗೆ ಈ ಟೂರ್ನಿ ಸಾಕ್ಷಿಯಾಗಿತ್ತು. ಪಾಕ್ ಜತೆಗಿನ ಮೊದಲ ಗೆಲುವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಕುಟುಂಬಗಳಿಗೆ ಅರ್ಪಿಸುವ ಮೂಲಕ ಸೂರ್ಯ ದಂಡನೆಗೂ ಗುರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಏಷ್ಯಾ ಕಪ್ ಟೂರ್ನಿಯ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನೀಡಲು ನಿರ್ಧರಿಸಿರುವುದಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.</p><p>‘ನಮ್ಮ ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿಗೆ ಒಳಗಾದ ಕುಟುಂಬಗಳಿಗೆ ಬೆಂಬಲ ನೀಡುವ ಸಲುವಾಗಿ ಈ ಟೂರ್ನಿಯ ಪಂದ್ಯ ಶುಲ್ಕವನ್ನು ದೇಣಿಗೆಯಾಗಿ ನೀಡಲು ನಾನು ನಿರ್ಧರಿಸಿದ್ದೇನೆ. ನಿಮ್ಮೊಂದಿಗೆ ನಾನು ಸದಾ ನಿಲ್ಲುತ್ತೇನೆ. ಜೈ ಹಿಂದ್’ ಎಂದು ಸೂರ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>ಭಾನುವಾರ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೂರ್ಯ ಪಡೆ ರೋಚಕ ಜಯ ಸಾಧಿಸಿತ್ತು.</p>.<p>ಪ್ರತಿ ಟಿ20 ಪಂದ್ಯಕ್ಕೆ ಭಾರತ ಆಟಗಾರರು ₹4 ಲಕ್ಷ ಗಳಿಸುತ್ತಾರೆ. ಒಟ್ಟು ಏಳು ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ₹28 ಲಕ್ಷ ಗಳಿಸಿದ್ದಾರೆ. ಈ ಮೊತ್ತವನ್ನು ಅವರು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆಯಾಗಿ ನೀಡಲಿದ್ದಾರೆ.</p><p>ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡದಿರುವುದರಿಂದ ಹಿಡಿದು ಪಾಕ್ ಸಚಿವ ಮೊಹಸೀನ್ ನಖ್ವಿ ಕೈಯಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸುವವರೆಗೆ ಹಲವು ಘಟನೆಗಳಿಗೆ ಈ ಟೂರ್ನಿ ಸಾಕ್ಷಿಯಾಗಿತ್ತು. ಪಾಕ್ ಜತೆಗಿನ ಮೊದಲ ಗೆಲುವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಕುಟುಂಬಗಳಿಗೆ ಅರ್ಪಿಸುವ ಮೂಲಕ ಸೂರ್ಯ ದಂಡನೆಗೂ ಗುರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>