<p><strong>ಮುಂಬೈ:</strong> ಸೂರ್ಯಕುಮಾರ್ ಯಾದವ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಯಿತು ಎಂದು ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.</p><p>ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ ಪರ ಆಡುತ್ತಿದ್ದು, ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅವರನ್ನು ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಗಿತ್ತು. </p><p>ಕಳೆದ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದರು.</p><p>ಸೂರ್ಯಕುಮಾರ್ ಯಾದವ್ ಅವರು ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಅವರು ಸಂಪೂರ್ಣ ಗುಣಮುಖರಾಗಿದ್ದಾರೆ, ಅದರೂ ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲಾಯಿತು. ಇದು ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. </p><p>ಕೆಕೆಆರ್ ವಿರುದ್ಧ ಫೀಲ್ಡಿಂಗ್ ಮಾಡದೇ ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್, 8 ಎಸೆತಗಳಲ್ಲಿ 3 ಬೌಂಡರಿ ಸಹಿತ 16 ರನ್ಗಳಿಸಿ ಕಾರ್ತಿಕ್ ತ್ಯಾಗಿಗೆ ವಿಕೆಟ್ ಒಪ್ಪಿಸಿದರು. </p><p>ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ, 14 ವರ್ಷಗಳ ಬಳಿಕ ಆವೃತ್ತಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸೂರ್ಯಕುಮಾರ್ ಯಾದವ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಯಿತು ಎಂದು ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.</p><p>ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ ಪರ ಆಡುತ್ತಿದ್ದು, ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅವರನ್ನು ಇಂಪ್ಯಾಕ್ಟ್ ಆಟಗಾರನನ್ನಾಗಿ ಕಣಕ್ಕಿಳಿಸಲಾಗಿತ್ತು. </p><p>ಕಳೆದ ಆವೃತ್ತಿಯಲ್ಲಿ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಾಣಿಸಿಕೊಂಡಿದ್ದರು.</p><p>ಸೂರ್ಯಕುಮಾರ್ ಯಾದವ್ ಅವರು ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಅವರು ಸಂಪೂರ್ಣ ಗುಣಮುಖರಾಗಿದ್ದಾರೆ, ಅದರೂ ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲಾಯಿತು. ಇದು ಬಿಟ್ಟು ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. </p><p>ಕೆಕೆಆರ್ ವಿರುದ್ಧ ಫೀಲ್ಡಿಂಗ್ ಮಾಡದೇ ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್, 8 ಎಸೆತಗಳಲ್ಲಿ 3 ಬೌಂಡರಿ ಸಹಿತ 16 ರನ್ಗಳಿಸಿ ಕಾರ್ತಿಕ್ ತ್ಯಾಗಿಗೆ ವಿಕೆಟ್ ಒಪ್ಪಿಸಿದರು. </p><p>ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ವಿರುದ್ಧ 6 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ, 14 ವರ್ಷಗಳ ಬಳಿಕ ಆವೃತ್ತಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>