<p><strong>ಬೆಂಗಳೂರು:</strong> ಮುಂದಿನ ತಿಂಗಳು ನಡೆಯಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಒಂದೊಮ್ಮೆ ಕರ್ನಾಟಕ ತಂಡವು ಕ್ವಾರ್ಟರ್ಫೈನಲ್ ತಲುಪಿದರೆ, ಕೆ.ಎಲ್ ರಾಹುಲ್ ಮತ್ತು ಮಯಂಕ್ ಅಗರವಾಲ್ ಕಣಕ್ಕಿಳಿಯುವ ಸಾಧ್ಯತೆ ಇದೆ.</p>.<p>ಸದ್ಯ ರಾಹುಲ್ ಮತ್ತು ಮಯಂಕ್ ಆಸ್ಟ್ರೇಲಿಯಾದಲ್ಲಿ ಆಡುತ್ತಿರುವ ಭಾರತ ತಂಡದಲ್ಲಿದ್ದಾರೆ. ಜ.19ರಂದು ಲೀಗ್ ಹಂತದ ಪಂದ್ಯಗಳು ಮುಗಿಯಲಿವೆ. ಅದೇ ವೇಳೆಗೆ ಆಸ್ಟ್ರೇಲಿಯಾದಲ್ಲಿ ಸರಣಿಯು ಮುಗಿಯಲಿದೆ. ಜ 26ರಿಂದ ಅಹಮದಾಬಾದಿನಲ್ಲಿ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿ ಎಂಟರ ಘಟ್ಟದ ಪಂದ್ಯಗಳು ಆರಂಭವಾಗುತ್ತವೆ.</p>.<p>ಜೀವ ಸುರಕ್ಷಾ ವಲಯದಿಂದಲೇ ಬರುವ ಇಬ್ಬರೂ ಆಟಗಾರರಿಗೆ ಇಲ್ಲಿ ಕಡಿಮೆ ಅವಧಿಯ ಕ್ವಾರಂಟೈನ್ ನಿಯಮ ಅನ್ವಯವಾಗಬಹುದು. ಆದ್ದರಿಂದ ಕರ್ನಾಟಕ ತಂಡಕ್ಕೆ ಎಂಟರ ಘಟ್ಟದಲ್ಲಿ ಇಬ್ಬರೂ ಅನುಭವಿ ಆಟಗಾರರ ಬಲ ಸಿಗಬಹುದು.</p>.<p><strong>ಪಾಂಡೆ ಅಲಭ್ಯ:</strong> ಕರ್ನಾಟಕ ರಾಜ್ಯ ತಂಡದ ನಾಯಕ ಮನೀಷ್ ಪಾಂಡೆ ಮೊಣಕೈ ಗಾಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರು ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ.</p>.<p><strong>ಕರ್ನಾಟಕ ತಂಡದ ಆಯ್ಕೆ ಇಂದು</strong><br />ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯಗಳು ಜನವರಿ 10ರಿಂದ 19ರವರೆಗೆ ಬೆಂಗಳೂರಿನಲ್ಲಿ ನಡೆಯಲಿವೆ. ಈ ಟೂರ್ನಿಯಲ್ಲಿ ಆಡುವ ಕರ್ನಾಟಕ ತಂಡವನ್ನು ಭಾನುವಾರ ಆಯ್ಕೆ ಮಾಡಲಾಗುತ್ತಿದೆ.</p>.<p>ನಗರದ ಹೊರವಲಯದಲ್ಲಿರುವ ಆಲೂರಿನ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಜನವರಿ 2ರಂದು ತಂಡಗಳು ಬರಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂದಿನ ತಿಂಗಳು ನಡೆಯಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಒಂದೊಮ್ಮೆ ಕರ್ನಾಟಕ ತಂಡವು ಕ್ವಾರ್ಟರ್ಫೈನಲ್ ತಲುಪಿದರೆ, ಕೆ.ಎಲ್ ರಾಹುಲ್ ಮತ್ತು ಮಯಂಕ್ ಅಗರವಾಲ್ ಕಣಕ್ಕಿಳಿಯುವ ಸಾಧ್ಯತೆ ಇದೆ.</p>.<p>ಸದ್ಯ ರಾಹುಲ್ ಮತ್ತು ಮಯಂಕ್ ಆಸ್ಟ್ರೇಲಿಯಾದಲ್ಲಿ ಆಡುತ್ತಿರುವ ಭಾರತ ತಂಡದಲ್ಲಿದ್ದಾರೆ. ಜ.19ರಂದು ಲೀಗ್ ಹಂತದ ಪಂದ್ಯಗಳು ಮುಗಿಯಲಿವೆ. ಅದೇ ವೇಳೆಗೆ ಆಸ್ಟ್ರೇಲಿಯಾದಲ್ಲಿ ಸರಣಿಯು ಮುಗಿಯಲಿದೆ. ಜ 26ರಿಂದ ಅಹಮದಾಬಾದಿನಲ್ಲಿ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿ ಎಂಟರ ಘಟ್ಟದ ಪಂದ್ಯಗಳು ಆರಂಭವಾಗುತ್ತವೆ.</p>.<p>ಜೀವ ಸುರಕ್ಷಾ ವಲಯದಿಂದಲೇ ಬರುವ ಇಬ್ಬರೂ ಆಟಗಾರರಿಗೆ ಇಲ್ಲಿ ಕಡಿಮೆ ಅವಧಿಯ ಕ್ವಾರಂಟೈನ್ ನಿಯಮ ಅನ್ವಯವಾಗಬಹುದು. ಆದ್ದರಿಂದ ಕರ್ನಾಟಕ ತಂಡಕ್ಕೆ ಎಂಟರ ಘಟ್ಟದಲ್ಲಿ ಇಬ್ಬರೂ ಅನುಭವಿ ಆಟಗಾರರ ಬಲ ಸಿಗಬಹುದು.</p>.<p><strong>ಪಾಂಡೆ ಅಲಭ್ಯ:</strong> ಕರ್ನಾಟಕ ರಾಜ್ಯ ತಂಡದ ನಾಯಕ ಮನೀಷ್ ಪಾಂಡೆ ಮೊಣಕೈ ಗಾಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ಅವರು ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ.</p>.<p><strong>ಕರ್ನಾಟಕ ತಂಡದ ಆಯ್ಕೆ ಇಂದು</strong><br />ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯಗಳು ಜನವರಿ 10ರಿಂದ 19ರವರೆಗೆ ಬೆಂಗಳೂರಿನಲ್ಲಿ ನಡೆಯಲಿವೆ. ಈ ಟೂರ್ನಿಯಲ್ಲಿ ಆಡುವ ಕರ್ನಾಟಕ ತಂಡವನ್ನು ಭಾನುವಾರ ಆಯ್ಕೆ ಮಾಡಲಾಗುತ್ತಿದೆ.</p>.<p>ನಗರದ ಹೊರವಲಯದಲ್ಲಿರುವ ಆಲೂರಿನ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಜನವರಿ 2ರಂದು ತಂಡಗಳು ಬರಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>