<p><strong>ಬೆಂಗಳೂರು:</strong> ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಬಿರುಸಿನ ಅರ್ಧಶತಕದ (98) ನೆರವಿನಿಂದ ಸೈಯದ್ ಮುಷ್ತಾಕ್ ಅಲಿ ದೇಶೀಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬರೋಡಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಮುಂಬೈ ಫೈನಲ್ಗೆ ಲಗ್ಗೆ ಇಟ್ಟಿದೆ. </p><p>ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಾಂಡ್ಯ ಬ್ರದರ್ಸ್ ಅವರನ್ನು ಒಳಗೊಂಡ ಬರೋಡಾ ತಂಡವು ಏಳು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. </p><p>ನಾಯಕ ಕೃಣಾಲ್ ಪಾಂಡ್ಯ 30 ಹಾಗೂ ಹಾರ್ದಿಕ್ ಪಾಂಡ್ಯ ಐದು ರನ್ ಗಳಿಸಿ ಔಟ್ ಆದರು. ಶಿವಲಿಕ್ ಶರ್ಮಾ ಅಜೇಯ 36 ರನ್ ಗಳಿಸಿದರು. </p><p>ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ಆಘಾತಕ್ಕೊಳಗಾಯಿತು. ಪೃಥ್ವಿ ಶಾ ಎಂಟು ರನ್ ಗಳಿಸಿ ಪೆವಿಲಿಯನ್ ಸೇರಿದರು. </p><p>ಆದರೆ ನಾಯಕ ಶ್ರೇಯಸ್ ಅಯ್ಯರ್ ಜೊತೆಗೂಡಿದ ರಹಾನೆ ದ್ವಿತೀಯ ವಿಕೆಟ್ಗೆ 88 ರನ್ಗಳ ಅಮೂಲ್ಯ ಜೊತೆಯಾಟ ಕಟ್ಟಿದರು. </p><p>ಬರೋಡಾ ಬೌಲರ್ಗಳನ್ನು ಸಮರ್ಥವಾಗಿ ಎದುರುಸಿದ ರಹಾನೆ 56 ಎಸೆತಗಳಲ್ಲಿ 98 ರನ್ ಗಳಿಸಿ ಅಬ್ಬರಿಸಿದರು. ಕೇವಲ ಎರಡು ರನ್ಗಳಿಂದ ಶತಕ ವಂಚಿತರಾದ ರಹಾನೆ ಇನಿಂಗ್ಸ್ನಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ಗಳು ಸೇರಿದ್ದವು.</p><p>ರಹಾನೆಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ 30 ಎಸೆತಗಳಲ್ಲಿ 46 ರನ್ (4 ಬೌಂಡರಿ, 3 ಸಿಕ್ಸರ್) ಗಳಿಸಿದರು. ಈ ನಡುವೆ ಸೂರ್ಯ ಕುಮಾರ್ ಯಾದವ್ ಒಂದು ರನ್ ಗಳಿಸಿ ಔಟ್ ಆದರು. </p><p>ಅಂತಿಮವಾಗಿ 17.2 ಓವರ್ಗಳಲ್ಲಿ ಮುಂಬೈ ಗೆಲುವು ದಾಖಲಿಸಿತು. ಅಜಿಂಕ್ಯ ರಹಾನೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. </p><p>ಮಗದೊಂದು ಸೆಮಿಫೈನಲ್ನಲ್ಲಿ ದೆಹಲಿ ಮತ್ತು ಮಧ್ಯಪ್ರದೇಶ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯವು ಡಿಸೆಂಬರ್ 15, ಭಾನುವಾರ ನಡೆಯಲಿದೆ. </p>.ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ: ಚಿನ್ನಸ್ವಾಮಿ ಅಂಗಳದಲ್ಲಿ ತಾರೆಗಳ ಮುಖಾಮುಖಿ.ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್: ಕರ್ನಾಟಕದ ಕ್ವಾರ್ಟರ್ಫೈನಲ್ ಕನಸು ಭಗ್ನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಬಿರುಸಿನ ಅರ್ಧಶತಕದ (98) ನೆರವಿನಿಂದ ಸೈಯದ್ ಮುಷ್ತಾಕ್ ಅಲಿ ದೇಶೀಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬರೋಡಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಮುಂಬೈ ಫೈನಲ್ಗೆ ಲಗ್ಗೆ ಇಟ್ಟಿದೆ. </p><p>ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಾಂಡ್ಯ ಬ್ರದರ್ಸ್ ಅವರನ್ನು ಒಳಗೊಂಡ ಬರೋಡಾ ತಂಡವು ಏಳು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. </p><p>ನಾಯಕ ಕೃಣಾಲ್ ಪಾಂಡ್ಯ 30 ಹಾಗೂ ಹಾರ್ದಿಕ್ ಪಾಂಡ್ಯ ಐದು ರನ್ ಗಳಿಸಿ ಔಟ್ ಆದರು. ಶಿವಲಿಕ್ ಶರ್ಮಾ ಅಜೇಯ 36 ರನ್ ಗಳಿಸಿದರು. </p><p>ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ಆಘಾತಕ್ಕೊಳಗಾಯಿತು. ಪೃಥ್ವಿ ಶಾ ಎಂಟು ರನ್ ಗಳಿಸಿ ಪೆವಿಲಿಯನ್ ಸೇರಿದರು. </p><p>ಆದರೆ ನಾಯಕ ಶ್ರೇಯಸ್ ಅಯ್ಯರ್ ಜೊತೆಗೂಡಿದ ರಹಾನೆ ದ್ವಿತೀಯ ವಿಕೆಟ್ಗೆ 88 ರನ್ಗಳ ಅಮೂಲ್ಯ ಜೊತೆಯಾಟ ಕಟ್ಟಿದರು. </p><p>ಬರೋಡಾ ಬೌಲರ್ಗಳನ್ನು ಸಮರ್ಥವಾಗಿ ಎದುರುಸಿದ ರಹಾನೆ 56 ಎಸೆತಗಳಲ್ಲಿ 98 ರನ್ ಗಳಿಸಿ ಅಬ್ಬರಿಸಿದರು. ಕೇವಲ ಎರಡು ರನ್ಗಳಿಂದ ಶತಕ ವಂಚಿತರಾದ ರಹಾನೆ ಇನಿಂಗ್ಸ್ನಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ಗಳು ಸೇರಿದ್ದವು.</p><p>ರಹಾನೆಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ 30 ಎಸೆತಗಳಲ್ಲಿ 46 ರನ್ (4 ಬೌಂಡರಿ, 3 ಸಿಕ್ಸರ್) ಗಳಿಸಿದರು. ಈ ನಡುವೆ ಸೂರ್ಯ ಕುಮಾರ್ ಯಾದವ್ ಒಂದು ರನ್ ಗಳಿಸಿ ಔಟ್ ಆದರು. </p><p>ಅಂತಿಮವಾಗಿ 17.2 ಓವರ್ಗಳಲ್ಲಿ ಮುಂಬೈ ಗೆಲುವು ದಾಖಲಿಸಿತು. ಅಜಿಂಕ್ಯ ರಹಾನೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. </p><p>ಮಗದೊಂದು ಸೆಮಿಫೈನಲ್ನಲ್ಲಿ ದೆಹಲಿ ಮತ್ತು ಮಧ್ಯಪ್ರದೇಶ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯವು ಡಿಸೆಂಬರ್ 15, ಭಾನುವಾರ ನಡೆಯಲಿದೆ. </p>.ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ: ಚಿನ್ನಸ್ವಾಮಿ ಅಂಗಳದಲ್ಲಿ ತಾರೆಗಳ ಮುಖಾಮುಖಿ.ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್: ಕರ್ನಾಟಕದ ಕ್ವಾರ್ಟರ್ಫೈನಲ್ ಕನಸು ಭಗ್ನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>