ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ತಂಡವು ಕರ್ನಾಟಕ ಬಳಗವನ್ನು ಕೇವಲ 87 ರನ್ಗಳಿಗೆ ನಿಯಂತ್ರಿಸಿತು. ಮಧ್ಯಮವೇಗಿ ಸಿದ್ಧಾರ್ಥ್ ಕೌಲ್ (15ಕ್ಕೆ3) ಕರ್ನಾಟಕಕ್ಕೆ ಪೆಟ್ಟುಕೊಟ್ಟರು. ಅವರಿಗೆ ತಕ್ಕ ಜೊತೆ ನೀಡಿದ ಸಂದೀಪ್ ಶರ್ಮಾ, ಆರ್ಷದೀಪ್ ಸಿಂಗ್ ಮತ್ತು ರಮಣದೀಪ್ ಸಿಂಗ್ ತಲಾ ಎರಡು ವಿಕೆಟ್ ಗಳಿಸಿದರು. ಗುರಿ ಬೆನ್ನತ್ತಿದ ಪಂಜಾಬ್ ತಂಡವು ಸುಲಭವಾಗಿ ಜಯಿಸಿತು. ಪ್ರಭಸಿಮ್ರನ್ ಸಿಂಗ್ (ಔಟಾಗದೆ 49) ಮತ್ತು ಮನದೀಪ್ ಸಿಂಗ್ (ಔಟಾಗದೆ 35) ಅವರ ಬ್ಯಾಟಿಂಗ್ನಿಂದ 12. 4 ಓವರ್ಗಳಲ್ಲಿ 1 ವಿಕೆಟ್ಗೆ 89 ರನ್ ಗಳಿಸಿ ಸೆಮಿಫೈನಲ್ಗೆ ಲಗ್ಗೆ ಹಾಕಿತು.