<p><strong>ನವದೆಹಲಿ:</strong> ಐಸಿಸಿ ವಿಶ್ವಕಪ್ ಟಿ–20 ಟೂರ್ನಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಟೀಂ ಇಂಡಿಯಾಗೆ, ರಾಜ್ಯಸಭೆಯಲ್ಲಿ ಸೋಮವಾರ ಅಭಿನಂದನೆ ಸಲ್ಲಿಸಲಾಯಿತು. </p><p>ಭಾನುವಾರ (ಮಾ.8) ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು, ನ್ಯೂಜಿಲೆಂಡ್ ವಿರುದ್ದ 96 ರನ್ಗಳ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಚುಟುಕು ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು.</p><p>‘ಭಾರತವು ಟಿ–20 ವಿಶ್ವಕಪ್ ಗೆದ್ದಿರುವುದು ದೇಶವೇ ಹೆಮ್ಮೆ ಪಡುವ ಕ್ಷಣ.. ಮುಂಬರುವ ದಿನಗಳಲ್ಲಿ ಈ ಯಶಸ್ಸು ಮುಂದುವರೆಯಲಿ ಎಂದು ರಾಜ್ಯಸಭೆ ಆಶಿಸುತ್ತದೆ’ ಎಂದು ರಾಜ್ಯಸಭೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದ್ದಾರೆ. </p><p>‘ಟಿ–20 ವಿಶ್ವಕಪ್ಗೆ ಆತಿಥ್ಯವಹಿಸಿದ ತಂಡವೊಂದು ಇದೇ ಮೊದಲ ಬಾರಿಗೆ ಪ್ರಶಸ್ತಿ ಜಯಿಸಿದೆ. ಅದರಲ್ಲೂ ಭಾರತ ಸತತ ಎರಡನೇ ಸಲ ಚಾಂಪಿಯನ್ ಆಗಿದೆ. ಇದೊಂದು ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ. </p><p>‘ಟೂರ್ನಿಯಲ್ಲಿ ಟೀಂ ಇಂಡಿಯಾವು ಅದ್ಭುತ ಆಟವಾಡುವ ಮೂಲಕ ದೇಶದಲ್ಲಿರುವ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳಿಗೆ ಸಂತೋಷ ಹಾಗೂ ಹೆಮ್ಮೆಯನ್ನುಂಟುಮಾಡಿದೆ. ರಾಜ್ಯಸಭೆಯ ಪರವಾಗಿ ತಂಡದ ಆಟಗಾರರಿಗೆ, ಸಹಾಯಕ ಸಿಬ್ಬಂದಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐಸಿಸಿ ವಿಶ್ವಕಪ್ ಟಿ–20 ಟೂರ್ನಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಟೀಂ ಇಂಡಿಯಾಗೆ, ರಾಜ್ಯಸಭೆಯಲ್ಲಿ ಸೋಮವಾರ ಅಭಿನಂದನೆ ಸಲ್ಲಿಸಲಾಯಿತು. </p><p>ಭಾನುವಾರ (ಮಾ.8) ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು, ನ್ಯೂಜಿಲೆಂಡ್ ವಿರುದ್ದ 96 ರನ್ಗಳ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಚುಟುಕು ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು.</p><p>‘ಭಾರತವು ಟಿ–20 ವಿಶ್ವಕಪ್ ಗೆದ್ದಿರುವುದು ದೇಶವೇ ಹೆಮ್ಮೆ ಪಡುವ ಕ್ಷಣ.. ಮುಂಬರುವ ದಿನಗಳಲ್ಲಿ ಈ ಯಶಸ್ಸು ಮುಂದುವರೆಯಲಿ ಎಂದು ರಾಜ್ಯಸಭೆ ಆಶಿಸುತ್ತದೆ’ ಎಂದು ರಾಜ್ಯಸಭೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದ್ದಾರೆ. </p><p>‘ಟಿ–20 ವಿಶ್ವಕಪ್ಗೆ ಆತಿಥ್ಯವಹಿಸಿದ ತಂಡವೊಂದು ಇದೇ ಮೊದಲ ಬಾರಿಗೆ ಪ್ರಶಸ್ತಿ ಜಯಿಸಿದೆ. ಅದರಲ್ಲೂ ಭಾರತ ಸತತ ಎರಡನೇ ಸಲ ಚಾಂಪಿಯನ್ ಆಗಿದೆ. ಇದೊಂದು ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ. </p><p>‘ಟೂರ್ನಿಯಲ್ಲಿ ಟೀಂ ಇಂಡಿಯಾವು ಅದ್ಭುತ ಆಟವಾಡುವ ಮೂಲಕ ದೇಶದಲ್ಲಿರುವ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳಿಗೆ ಸಂತೋಷ ಹಾಗೂ ಹೆಮ್ಮೆಯನ್ನುಂಟುಮಾಡಿದೆ. ರಾಜ್ಯಸಭೆಯ ಪರವಾಗಿ ತಂಡದ ಆಟಗಾರರಿಗೆ, ಸಹಾಯಕ ಸಿಬ್ಬಂದಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>