ನಮ್ಮ ದೈಹಿಕ ಭಾಷೆಯು ಧೈರ್ಯದಿಂದ ಕೂಡಿರಲಿಲ್ಲ: ವಿರಾಟ್ ಕೊಹ್ಲಿ

ದುಬೈ: ಭಾರತ ಪಂದ್ಯ ಸೋತಾಗೆಲ್ಲ ಪ್ರಾಮಾಣಿಕ ಉತ್ತರವನ್ನು ನೀಡುವ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಎದುರಾದ ಹೀನಾಯ ಸೋಲಿನ ಬಳಿಕವೂ ಆತ್ಮವಿಮರ್ಶೆ ಮಾಡಿಕೊಂಡಿದ್ದಾರೆ.
'ಬ್ಯಾಟಿಂಗ್ ಅಥವಾ ಬೌಲಿಂಗ್ನಲ್ಲಿ ನಾವು ಧೈರ್ಯಶಾಲಿ ಆಗಿರಲಿಲ್ಲ. ನಮ್ಮ ದೈಹಿಕ ಭಾಷೆಯು ಧೈರ್ಯದಿಂದ ಕೂಡಿರಲಿಲ್ಲ' ಎಂದು ಹೇಳಿದ್ದಾರೆ.
ಇದನ್ನೂ ಓದಿ: T20 WC: ಕಿವೀಸ್ ವಿರುದ್ಧ ಹೀನಾಯ ಸೋಲು; ಕೊಹ್ಲಿ ಪಡೆಗೆ ಮುಖಭಂಗ
ಪಾಕಿಸ್ತಾನ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತ ಎಂಟು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ. ಇದರೊಂದಿಗೆ ಸೆಮಿಫೈನಲ್ ಪ್ರವೇಶ ಕಠಿಣವೆನಿಸಿದೆ.
'ನಾವು ಮೈದಾನಕ್ಕಿಳಿದಾಗ ಪಂದ್ಯ ಗೆಲ್ಲಲು ಬೇಕಾಗಿರುವಷ್ಟು ರನ್ ಕೂಡ ಇರಲಿಲ್ಲ. ಭಾರತಕ್ಕಾಗಿ ಆಡುವಾಗ ಸಾಕಷ್ಟು ನಿರೀಕ್ಷೆಗಳು ಇರುತ್ತದೆ. ಕೇವಲ ಅಭಿಮಾನಿಗಳಿಂದ ಮಾತ್ರವಲ್ಲದೆ ಆಟಗಾರರಿಂದಲೂ ಇರುತ್ತದೆ. ಹಾಗಾಗಿ ನಮ್ಮ ಆಟದಲ್ಲಿ ಯಾವಾಗಲೂ ಒತ್ತಡವಿರುತ್ತದೆ. ಆದರೆ ವರ್ಷಗಳಿಂದ ಒತ್ತಡವನ್ನು ನಿಭಾಯಿಸುವುದನ್ನು ಕರಗತ ಮಾಡಿಕೊಂಡಿದ್ದೇವೆ. ದೇಶಕ್ಕಾಗಿ ಆಡುವ ಪ್ರತಿಯೊಬ್ಬನೂ ಇದಕ್ಕೆ ಒಗ್ಗಿಕೊಂಡಿರಬೇಕು. ಅವೆಲ್ಲವನ್ನು ಒಂದು ತಂಡವಾಗಿ ಎದುರಿಸಿದಾಗ ಮೀರಿ ನಿಲ್ಲಲು ಸಾಧ್ಯವಾಗುತ್ತದೆ. ಆದರೆ ಕಳೆದೆರಡು ಪಂದ್ಯಗಳಲ್ಲಿ ಅದನ್ನು ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.
ಇವೆಲ್ಲದರ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶ ಸಾಧ್ಯತೆಯ ಬಗ್ಗೆ ಕೊಹ್ಲಿ ಆಶಾವಾದ ವ್ಯಕ್ತಪಡಿಸಿದ್ದಾರೆ. 'ಟ್ವೆಂಟಿ-20 ಕ್ರಿಕೆಟ್ ಆಡುವ ರೀತಿ ಇದೊಂದೇ ಆಗಿದೆ. ನೀವು ಆಶಾವಾದಿಯಾಗಿರಬೇಕು ಹಾಗೂ ಧನಾತ್ಮಕವಾಗಿರಬೇಕು' ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.