'ನಾವು ಮೈದಾನಕ್ಕಿಳಿದಾಗ ಪಂದ್ಯ ಗೆಲ್ಲಲು ಬೇಕಾಗಿರುವಷ್ಟು ರನ್ ಕೂಡ ಇರಲಿಲ್ಲ. ಭಾರತಕ್ಕಾಗಿ ಆಡುವಾಗ ಸಾಕಷ್ಟು ನಿರೀಕ್ಷೆಗಳು ಇರುತ್ತದೆ. ಕೇವಲ ಅಭಿಮಾನಿಗಳಿಂದ ಮಾತ್ರವಲ್ಲದೆ ಆಟಗಾರರಿಂದಲೂ ಇರುತ್ತದೆ. ಹಾಗಾಗಿ ನಮ್ಮ ಆಟದಲ್ಲಿ ಯಾವಾಗಲೂ ಒತ್ತಡವಿರುತ್ತದೆ. ಆದರೆ ವರ್ಷಗಳಿಂದ ಒತ್ತಡವನ್ನು ನಿಭಾಯಿಸುವುದನ್ನು ಕರಗತ ಮಾಡಿಕೊಂಡಿದ್ದೇವೆ. ದೇಶಕ್ಕಾಗಿ ಆಡುವ ಪ್ರತಿಯೊಬ್ಬನೂ ಇದಕ್ಕೆ ಒಗ್ಗಿಕೊಂಡಿರಬೇಕು. ಅವೆಲ್ಲವನ್ನು ಒಂದು ತಂಡವಾಗಿ ಎದುರಿಸಿದಾಗ ಮೀರಿ ನಿಲ್ಲಲು ಸಾಧ್ಯವಾಗುತ್ತದೆ. ಆದರೆ ಕಳೆದೆರಡು ಪಂದ್ಯಗಳಲ್ಲಿ ಅದನ್ನು ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.