<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಳಿಕ ಉಭಯ ತಂಡದ ಆಟಗಾರರು ಪರಸ್ಪರ ಸೌಹಾರ್ದಯುತ ಒಡನಾಟದಲ್ಲಿ ಭಾಗಿಯಾಗಿರುವುದು ಕ್ರಿಕೆಟ್ ಪ್ರೇಮಿಗಳ ಹೃದಯ ಗೆಲ್ಲುವಲ್ಲಿ ಕಾರಣವಾಗಿದೆ.</p>.<p>ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 10 ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು. ಆದರೆ ಪಂದ್ಯದ ಬಳಿಕ ಪ್ರಬುದ್ಧತೆ ಮೆರೆದಿರುವ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ಆಟಗಾರರನ್ನು ಪ್ರಶಂಸಿಸಲು ಮರೆಯಲಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-pakistan-cricket-match-virat-kohli-t20-wc-babar-azam-mohammad-rizwan-878440.html" itemprop="url">T20 WC: ಪಾಕ್ ಆಟಗಾರನನ್ನು ಅಪ್ಪಿ ಅಭಿನಂದಿಸಿದ ಕೊಹ್ಲಿಗೆ ಪ್ರಶಂಸೆಯ ಸುರಿಮಳೆ </a></p>.<p>ಎದುರಾಳಿ ತಂಡವು ತಮಗಿಂತಲೂ ಉತ್ತಮ ಕ್ರಿಕೆಟ್ ಆಡಿರುವುವನ್ನು ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಇದು ಕೇವಲ ಆರಂಭವಷ್ಟೇ, ತಪ್ಪನ್ನು ತಿದ್ದಿಕೊಂಡು ಇನ್ನಷ್ಟು ಬಲಿಷ್ಠರಾಗಿ ಬರುವುದಾಗಿ ತಿಳಿಸಿದ್ದಾರೆ.</p>.<p>ಅಮೋಘ ಆಟವಾಡಿದ ಪಾಕಿಸ್ತಾನ ನಾಯಕ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರನ್ನು ಪಂದ್ಯದ ಬಳಿಕ ಕೊಹ್ಲಿ ಅಭಿನಂದಿಸಿದರು. ಈ ಪೈಕಿ ರಿಜ್ವಾನ್ ಅವರನ್ನು ಅಪ್ಪಿಕೊಂಡು 'ಭಲೇ ಭೇಷ್' ಎಂದರು. ಬಳಿಕ ಪಾಕ್ ನಾಯಕರೊಂದಿಗೂ ಪಂದ್ಯದ ಬಗ್ಗೆ ಸಮಾಲೋಚನೆ ನಡೆಸಿದರು.</p>.<p>ಇನ್ನೊಂದೆಡೆ ಟೀಮ್ ಇಂಡಿಯಾ ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ, ಪಾಕ್ ನಾಯಕ ಬಾಬರ್ ಆಜಂ ಹಾಗೂ ಶೋಯಬ್ ಮಲಿಕ್ ಜೊತೆಗೆ ಮಾತುಕತೆ ನಡೆಸಿದರು. ಈ ವೇಳೆ ಪಾಕಿಸ್ತಾನದ ಯುವ ಆಟಗಾರರು ಮಹಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ್ದರು.</p>.<p>ಎರಡೂ ತಂಡಗಳಆಟಗಾರರ ಒಡನಾಟವು ಕ್ರಿಕೆಟ್ ಪ್ರೇಮಿಗಳ ಹೃದಯವನ್ನು ಗೆದ್ದಿದೆ. ಅಲ್ಲದೆ ಉಭಯ ತಂಡಗಳ ನಡುವೆ ಇನ್ನಷ್ಟು ಹೆಚ್ಚಿನ ಪಂದ್ಯಗಳು ನಡೆಯಬೇಕು ಎಂದು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಳಿಕ ಉಭಯ ತಂಡದ ಆಟಗಾರರು ಪರಸ್ಪರ ಸೌಹಾರ್ದಯುತ ಒಡನಾಟದಲ್ಲಿ ಭಾಗಿಯಾಗಿರುವುದು ಕ್ರಿಕೆಟ್ ಪ್ರೇಮಿಗಳ ಹೃದಯ ಗೆಲ್ಲುವಲ್ಲಿ ಕಾರಣವಾಗಿದೆ.</p>.<p>ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 10 ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು. ಆದರೆ ಪಂದ್ಯದ ಬಳಿಕ ಪ್ರಬುದ್ಧತೆ ಮೆರೆದಿರುವ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ಆಟಗಾರರನ್ನು ಪ್ರಶಂಸಿಸಲು ಮರೆಯಲಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-pakistan-cricket-match-virat-kohli-t20-wc-babar-azam-mohammad-rizwan-878440.html" itemprop="url">T20 WC: ಪಾಕ್ ಆಟಗಾರನನ್ನು ಅಪ್ಪಿ ಅಭಿನಂದಿಸಿದ ಕೊಹ್ಲಿಗೆ ಪ್ರಶಂಸೆಯ ಸುರಿಮಳೆ </a></p>.<p>ಎದುರಾಳಿ ತಂಡವು ತಮಗಿಂತಲೂ ಉತ್ತಮ ಕ್ರಿಕೆಟ್ ಆಡಿರುವುವನ್ನು ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಅಲ್ಲದೆ ಇದು ಕೇವಲ ಆರಂಭವಷ್ಟೇ, ತಪ್ಪನ್ನು ತಿದ್ದಿಕೊಂಡು ಇನ್ನಷ್ಟು ಬಲಿಷ್ಠರಾಗಿ ಬರುವುದಾಗಿ ತಿಳಿಸಿದ್ದಾರೆ.</p>.<p>ಅಮೋಘ ಆಟವಾಡಿದ ಪಾಕಿಸ್ತಾನ ನಾಯಕ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರನ್ನು ಪಂದ್ಯದ ಬಳಿಕ ಕೊಹ್ಲಿ ಅಭಿನಂದಿಸಿದರು. ಈ ಪೈಕಿ ರಿಜ್ವಾನ್ ಅವರನ್ನು ಅಪ್ಪಿಕೊಂಡು 'ಭಲೇ ಭೇಷ್' ಎಂದರು. ಬಳಿಕ ಪಾಕ್ ನಾಯಕರೊಂದಿಗೂ ಪಂದ್ಯದ ಬಗ್ಗೆ ಸಮಾಲೋಚನೆ ನಡೆಸಿದರು.</p>.<p>ಇನ್ನೊಂದೆಡೆ ಟೀಮ್ ಇಂಡಿಯಾ ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ, ಪಾಕ್ ನಾಯಕ ಬಾಬರ್ ಆಜಂ ಹಾಗೂ ಶೋಯಬ್ ಮಲಿಕ್ ಜೊತೆಗೆ ಮಾತುಕತೆ ನಡೆಸಿದರು. ಈ ವೇಳೆ ಪಾಕಿಸ್ತಾನದ ಯುವ ಆಟಗಾರರು ಮಹಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ್ದರು.</p>.<p>ಎರಡೂ ತಂಡಗಳಆಟಗಾರರ ಒಡನಾಟವು ಕ್ರಿಕೆಟ್ ಪ್ರೇಮಿಗಳ ಹೃದಯವನ್ನು ಗೆದ್ದಿದೆ. ಅಲ್ಲದೆ ಉಭಯ ತಂಡಗಳ ನಡುವೆ ಇನ್ನಷ್ಟು ಹೆಚ್ಚಿನ ಪಂದ್ಯಗಳು ನಡೆಯಬೇಕು ಎಂದು ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>