<p><strong>ಶಾರ್ಜಾ: </strong>ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಶಾರ್ಜಾದಲ್ಲಿ ನಡೆಯುತ್ತಿರುವ ಸೂಪರ್-12 ಹಂತದ ಗ್ರೂಪ್ 1ರ ಪಂದ್ಯದ ವೇಳೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>ಶ್ರೀಲಂಕಾದ ವೇಗದ ಬೌಲರ್ ಲಾಹಿರು ಕುಮಾರ ಹಾಗೂ ಬಾಂಗ್ಲಾದೇಶದ ಆರಂಭಿಕ ಬ್ಯಾಟರ್ ಲಿಟನ್ ದಾಸ್ ನಡುವೆ ನೇರ ವಾಗ್ವಾದ ನಡೆಯಿತು.<br /><br /><a href="https://www.prajavani.net/sports/cricket/icc-t20-world-cup-2021-india-vs-pakistan-super-12-group-2-match-dubai-live-updates-in-kannada-878212.html" itemprop="url">T20 WC LIVE | IND vs PAK: ಸೂಪರ್ ಸಂಡೇ; ಭಾರತಕ್ಕೆ ಪಾಕ್ ಸವಾಲು </a></p>.<p>ಇನ್ನಿಂಗ್ಸ್ನ ಆರನೇ ಓವರ್ನಲ್ಲಿ ಲಾಹಿರು ಕುಮಾರ ದಾಳಿಯಲ್ಲಿ ದೊಡ್ಡ ಹೊಡೆತಕ್ಕೆ ಮುಂದಾದ ಲಿಟನ್ ದಾಸ್, ಲಂಕಾ ನಾಯಕ ದಸುನ್ ಶನಕ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಈ ವೇಳೆ ಲಿಟನ್ ಬಳಿ ತೆರಳಿದ ಲಾಹಿರು, ಪದ ಪ್ರಯೋಗ ಮಾಡಿದರು. ಇದರಿಂದ ಸಿಟ್ಟಿಗೆದ್ದ ದಾಸ್ ಪ್ರತ್ಯುತ್ತರ ನೀಡಿದರು. ಇದರಿಂದಾಗಿ ಬಿಗುವಾದ ವಾತಾವರಣ ನಿರ್ಮಾಣವಾಯಿತು.</p>.<p>ಬಳಿಕ ಸಹ ಆಟಗಾರರು ಮಧ್ಯೆ ಪ್ರವೇಶಿಸಿ ವಾತಾವರಣವನ್ನು ಶಾಂತಗೊಳಿಸಿದರು. ಅವರಿಬ್ಬರ ನಡುವೆ ಯಾವ ಕಾರಣಕ್ಕೆ ವಾಗ್ವಾದ ನಡೆದಿದೆ ಎಂಬುದು ತಿಳಿದು ಬಂದಿಲ್ಲ.</p>.<p>ಬಾಂಗ್ಲಾದೇಶ ಹಾಗೂ ಶ್ರೀಲಂಕಾ ತಂಡಗಳು ಅರ್ಹತಾ ಸುತ್ತಿನಲ್ಲಿ ತೇರ್ಗಡೆಯನ್ನು ಹೊಂದಿ ಸೂಪರ್-12 ಹಂತಕ್ಕೆ ಲಗ್ಗೆಯಿಟ್ಟಿತ್ತು. ಲಂಕಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿರುವ ಬಾಂಗ್ಲಾದೇಶ ಮೊಹಮ್ಮದ್ ನಯೀಮ್ (62) ಹಾಗೂ ಮುಷ್ಫಿಕುರ್ ರಹೀಮ್ (57*) ಅರ್ಧಶತಕಗಳ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾರ್ಜಾ: </strong>ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಶಾರ್ಜಾದಲ್ಲಿ ನಡೆಯುತ್ತಿರುವ ಸೂಪರ್-12 ಹಂತದ ಗ್ರೂಪ್ 1ರ ಪಂದ್ಯದ ವೇಳೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>ಶ್ರೀಲಂಕಾದ ವೇಗದ ಬೌಲರ್ ಲಾಹಿರು ಕುಮಾರ ಹಾಗೂ ಬಾಂಗ್ಲಾದೇಶದ ಆರಂಭಿಕ ಬ್ಯಾಟರ್ ಲಿಟನ್ ದಾಸ್ ನಡುವೆ ನೇರ ವಾಗ್ವಾದ ನಡೆಯಿತು.<br /><br /><a href="https://www.prajavani.net/sports/cricket/icc-t20-world-cup-2021-india-vs-pakistan-super-12-group-2-match-dubai-live-updates-in-kannada-878212.html" itemprop="url">T20 WC LIVE | IND vs PAK: ಸೂಪರ್ ಸಂಡೇ; ಭಾರತಕ್ಕೆ ಪಾಕ್ ಸವಾಲು </a></p>.<p>ಇನ್ನಿಂಗ್ಸ್ನ ಆರನೇ ಓವರ್ನಲ್ಲಿ ಲಾಹಿರು ಕುಮಾರ ದಾಳಿಯಲ್ಲಿ ದೊಡ್ಡ ಹೊಡೆತಕ್ಕೆ ಮುಂದಾದ ಲಿಟನ್ ದಾಸ್, ಲಂಕಾ ನಾಯಕ ದಸುನ್ ಶನಕ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಈ ವೇಳೆ ಲಿಟನ್ ಬಳಿ ತೆರಳಿದ ಲಾಹಿರು, ಪದ ಪ್ರಯೋಗ ಮಾಡಿದರು. ಇದರಿಂದ ಸಿಟ್ಟಿಗೆದ್ದ ದಾಸ್ ಪ್ರತ್ಯುತ್ತರ ನೀಡಿದರು. ಇದರಿಂದಾಗಿ ಬಿಗುವಾದ ವಾತಾವರಣ ನಿರ್ಮಾಣವಾಯಿತು.</p>.<p>ಬಳಿಕ ಸಹ ಆಟಗಾರರು ಮಧ್ಯೆ ಪ್ರವೇಶಿಸಿ ವಾತಾವರಣವನ್ನು ಶಾಂತಗೊಳಿಸಿದರು. ಅವರಿಬ್ಬರ ನಡುವೆ ಯಾವ ಕಾರಣಕ್ಕೆ ವಾಗ್ವಾದ ನಡೆದಿದೆ ಎಂಬುದು ತಿಳಿದು ಬಂದಿಲ್ಲ.</p>.<p>ಬಾಂಗ್ಲಾದೇಶ ಹಾಗೂ ಶ್ರೀಲಂಕಾ ತಂಡಗಳು ಅರ್ಹತಾ ಸುತ್ತಿನಲ್ಲಿ ತೇರ್ಗಡೆಯನ್ನು ಹೊಂದಿ ಸೂಪರ್-12 ಹಂತಕ್ಕೆ ಲಗ್ಗೆಯಿಟ್ಟಿತ್ತು. ಲಂಕಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿರುವ ಬಾಂಗ್ಲಾದೇಶ ಮೊಹಮ್ಮದ್ ನಯೀಮ್ (62) ಹಾಗೂ ಮುಷ್ಫಿಕುರ್ ರಹೀಮ್ (57*) ಅರ್ಧಶತಕಗಳ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>